September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಿಕಪ್ – ಟಿಪ್ಪರ್ ನಲ್ಲಿ ಶಾಲಾ ಮಕ್ಕಳ ಪ್ರವಾಸ ಪ್ರಕರಣ: ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಅಮಾನತು

ಬೆಳ್ತಂಗಡಿ : ಬಳಂಜ ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ನೇತೃತ್ವದಲ್ಲಿ ಫೆ.9ರಂದು ಪಿಕಪ್ ಮತ್ತು ಟಿಪ್ಪರ್ ವಾಹನಗಳಿಗೆ ಮೂರು ಸಾವಿರ ಬಾಡಿಗೆ ನೀಡಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಸ್ಥಳೀಯ ನಾಲ್ಕೂರು ಅನಿಲ್ ಫಾರ್ಮ್ ಗೆ ಕರೆದುಕೊಂಡು ಹೋಗಿ ವಾಪಸ್ ಕರೆದುಕೊಂಡು ಬಂದಿದ್ದ ವಿಡಿಯೋ ವೈರಲ್ ಅಗಿತ್ತು.

ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾದ ಬೆನ್ನಲ್ಲೇ ಫೆ.12 ರಂದು ಬೆಳ್ತಂಗಡಿ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಬಳಂಜ ಶಾಲೆಗೆ ಭೇಟಿ ನೀಡಿ ವರದಿ ಮಾಡಿಕೊಂಡು ಅ ವರದಿಯನ್ನು ಮಂಗಳೂರು ಡಿಡಿಪಿಐ ಶಶಿಧರ್. ಜಿ.ಎಸ್ ಅವರಿಗೆ ವರದಿ ಸಲ್ಲಿಸಿದ್ದರು. ಬಳಿಕ ಡಿಡಿಪಿಐ ಅವರು ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಎಂಬವರನ್ನು ಫೆ.12 ರಂದು ಮಧ್ಯಾಹ್ನ ವೇಳೆಗೆ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

Related posts

ವೇಣೂರು: ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣ ಕಳವು

Suddi Udaya

ಶಿರ್ಲಾಲಿನಲ್ಲಿ 25ನೇ ವರ್ಷದ ಗುರುಪೂಜಾ ಕಾರ್ಯಕ್ರಮ

Suddi Udaya

ತೆಂಕಕಾರಂದೂರು: ಅಸೌಖ್ಯದಿಂದ ಚಂದ್ರಾವತಿ ನಿಧನ

Suddi Udaya

ಕೌಕ್ರಾಡಿ: ಮಣ್ಣಗುಂಡಿಯಲ್ಲಿ ಗುಡ್ಡ ಕುಸಿತ: ಹೆದ್ದಾರಿ ವಾಹನ ಸಂಚಾರ ಸ್ಥಗಿತ

Suddi Udaya

ಅಯ್ಯೋಧ್ಯೆ ಶ್ರೀ ರಾಮಲಲ್ಲಾನ ಪ್ರತಿಷ್ಟೆ ನಾಳ ದೇವಸ್ಥಾನದಲ್ಲಿ ನೇರಪ್ರಸಾರ, ಭಜನೆ, ಕರಸೇವಕರಿಗೆ ಸನ್ಮಾನ

Suddi Udaya

ಬಾವಂತಬೆಟ್ಟು ಬಾಬು ಶೆಟ್ಟಿ ನಿಧನ

Suddi Udaya
error: Content is protected !!