37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಳಂಜ ಶಾಲಾ ಮಕ್ಕಳನ್ನು ಕರೆದೊಯ್ದ ಪಿಕಪ್ & ಟಿಪ್ಪರ್ ಚಾಲಕರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ಶಾಲಾ ಮಕ್ಕಳನ್ನು ಕಾನೂನು ಬಾಹಿರವಾಗಿ ಸರಕು ಸಾಗಣೆ ಮಾಡುವ ಪಿಕಪ್ ಮತ್ತು ಟಿಪ್ಪರ್ ವಾಹನದಲ್ಲಿ ಕರೆದುಕೊಂಡು ಹೋದ ಪ್ರಕರಣ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಎರಡು ವಾಹನ ಮತ್ತು ಚಾಲಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಪ್ರಬಾರ ಮುಖ್ಯೋಪಾಧ್ಯಾಯ ಕಿರಣ್ ನೇತೃತ್ವದಲ್ಲಿ ಫೆ.9ರಂದು KA-21-A-8776 ಪಿಕಪ್ ಮತ್ತು KA-70-2596 ಟಿಪ್ಪರ್ ವಾಹನಗಳಿಗೆ ಮೂರು ಸಾವಿರ ಬಾಡಿಗೆ ನೀಡಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಸ್ಥಳೀಯ ನಾಲ್ಕೂರು ಅನಿಲ್ ಫಾರ್ಮ್ ಗೆ ಕರೆದುಕೊಂಡು ಹೋಗಿ ವಾಪಸ್ ಕರೆದುಕೊಂಡು ಬಂದಿದ್ದ ವಿಡಿಯೋ ವೈರಲ್ ಅಗಿತ್ತು.ಈ ಬಗ್ಗೆ ಮಾಧ್ಯಮಗಳ ವರದಿ ಪ್ರಸಾರವಾದ ಬೆನ್ನಲ್ಲೇ ಫೆ.12 ರಂದು ಬೆಳ್ತಂಗಡಿ ಶಿಕ್ಷಣ ಇಲಾಖೆಯ ಮಂಗಳೂರು ಡಿಡಿಪಿಐ ಶಿಶಿಧರ್.ಜಿ.ಎಸ್ ಅವರು ಪ್ರಬಾರ ಮುಖ್ಯೋಪಾಧ್ಯಾಯ ಕಿರಣ್ ಎಂಬವರನ್ನು ಫೆ.12 ರಂದು ಅಮಾನತು ಮಾಡಿ ಆದೇಶ ಹೊರಡಿಸಿದ್ದರು.

ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ್ ಅವರು ಪಿಕಪ್ ವಾಹನ ಚಾಲಕ ಹಾಗೂ ಟಿಪ್ಪರ್ ಚಾಲಕನ ವಿರುದ್ಧ BNS 281,192(A),66 IMV ಅಡಿಯಲ್ಲಿ ಫೆ.12 ರಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವ ನಾರಾವಿಯ ಮಹಿಳೆ ಮೃತ್ಯು

Suddi Udaya

ಬೆಳ್ತಂಗಡಿ: ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯಿಂದ ಆಟಿ ಕೂಟ ಆಚರಣೆ: ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಮಹನೀಯರಿಗೆ ವಿವಿಧ ಸ್ಪರ್ಧೆಗಳು

Suddi Udaya

ಸೆ.26: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಗ್ರಾಮೀಣ ಸರಕಾರಿ ಪ್ರೌಢಶಾಲೆಯಲ್ಲಿ ಹೀಗೊಂದು ವಿನೂತನ ಶೌಚಾಲಯ

Suddi Udaya

ಉಜಿರೆ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಕಿರಣ್ ಆಗ್ರೋಟೆಕ್ ಉಜಿರೆ -ಕೊಕ್ಕಡ ಇವರ 2025ರ ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!