September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಳಂಜ ಶಾಲಾ ಮಕ್ಕಳನ್ನು ಕರೆದೊಯ್ದ ಪಿಕಪ್ & ಟಿಪ್ಪರ್ ಚಾಲಕರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ಶಾಲಾ ಮಕ್ಕಳನ್ನು ಕಾನೂನು ಬಾಹಿರವಾಗಿ ಸರಕು ಸಾಗಣೆ ಮಾಡುವ ಪಿಕಪ್ ಮತ್ತು ಟಿಪ್ಪರ್ ವಾಹನದಲ್ಲಿ ಕರೆದುಕೊಂಡು ಹೋದ ಪ್ರಕರಣ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಎರಡು ವಾಹನ ಮತ್ತು ಚಾಲಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಪ್ರಬಾರ ಮುಖ್ಯೋಪಾಧ್ಯಾಯ ಕಿರಣ್ ನೇತೃತ್ವದಲ್ಲಿ ಫೆ.9ರಂದು KA-21-A-8776 ಪಿಕಪ್ ಮತ್ತು KA-70-2596 ಟಿಪ್ಪರ್ ವಾಹನಗಳಿಗೆ ಮೂರು ಸಾವಿರ ಬಾಡಿಗೆ ನೀಡಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಸ್ಥಳೀಯ ನಾಲ್ಕೂರು ಅನಿಲ್ ಫಾರ್ಮ್ ಗೆ ಕರೆದುಕೊಂಡು ಹೋಗಿ ವಾಪಸ್ ಕರೆದುಕೊಂಡು ಬಂದಿದ್ದ ವಿಡಿಯೋ ವೈರಲ್ ಅಗಿತ್ತು.ಈ ಬಗ್ಗೆ ಮಾಧ್ಯಮಗಳ ವರದಿ ಪ್ರಸಾರವಾದ ಬೆನ್ನಲ್ಲೇ ಫೆ.12 ರಂದು ಬೆಳ್ತಂಗಡಿ ಶಿಕ್ಷಣ ಇಲಾಖೆಯ ಮಂಗಳೂರು ಡಿಡಿಪಿಐ ಶಿಶಿಧರ್.ಜಿ.ಎಸ್ ಅವರು ಪ್ರಬಾರ ಮುಖ್ಯೋಪಾಧ್ಯಾಯ ಕಿರಣ್ ಎಂಬವರನ್ನು ಫೆ.12 ರಂದು ಅಮಾನತು ಮಾಡಿ ಆದೇಶ ಹೊರಡಿಸಿದ್ದರು.

ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ್ ಅವರು ಪಿಕಪ್ ವಾಹನ ಚಾಲಕ ಹಾಗೂ ಟಿಪ್ಪರ್ ಚಾಲಕನ ವಿರುದ್ಧ BNS 281,192(A),66 IMV ಅಡಿಯಲ್ಲಿ ಫೆ.12 ರಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸ್ವಾಗತ ಕಾರ್ಯಕ್ರಮ

Suddi Udaya

ಸುದ್ದಿ ಉದಯ ವರದಿಯ ಫಲಸ್ರುತಿ: 13 ಕೋಟಿ ವೆಚ್ಚದ ಸಮಗ್ರ ಕುಡಿಯುವ ನೀರಿನ ಯೋಜನೆ : ರಕ್ಷೀತ್ ಶಿವರಾಂ ಹಾಗೂ ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ:ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ರಕ್ಷಿತ್ ಶಿವರಾಂ

Suddi Udaya

ಕು.ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಲಾಯಿಲ : ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹದ ಉದ್ಘಾಟನೆ:

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ಪದಗ್ರಹಣ ಸಮಾರಂಭದಲ್ಲಿ ಧರ್ಮಸ್ಥಳದ ಸ್ನೇಕ್ ಪ್ರಕಾಶ್ ಶೆಟ್ಟಿ ರಿಗೆ ಸನ್ಮಾನ

Suddi Udaya
error: Content is protected !!