23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಳಂಜ ಶಾಲಾ ವಿದ್ಯಾರ್ಥಿಗಳನ್ನು ಪಿಕಪ್-ಟಿಪ್ಪರ್ ನಲ್ಲಿ ವಿಹಾರಕ್ಕೆ ಕರೆದೊಯ್ದ ಶಿಕ್ಷಕ: ಸುರಕ್ಷಿತ ಕ್ರಮಗಳನ್ನು ಅನುಸರಿಸದೆ ಕರೆದೊಯ್ದ ಶಿಕ್ಷಕನ ವಿರುದ್ಧ ಪೋಷಕರ ಅಸಮಾಧಾನ

ಬಳಂಜ: ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಪಾಠ ಹೇಳಬೇಕಾದ ಶಿಕ್ಷಕರು ಮಕ್ಕಳನ್ನು ತೆರೆದ ಪಿಕಪ್ ಮತ್ತು ಟಿಪ್ಪರ್ ನಲ್ಲಿ ವಾಹನದಲ್ಲಿ ಕಾನೂನು ಬಾಹಿರವಾಗಿ ವಿಹಾರಕ್ಕೆ ಕರೆದೊಯ್ದ ಘಟನೆ ಬಳಂಜದಲ್ಲಿ ಬೆಳಕಿಗೆ ಬಂದಿದ್ದು ಸ್ಥಳೀಯವಾಗಿ ಚರ್ಚೆಗೆ ಕಾರಣವಾಗಿದೆ.

ಬೆಳ್ತಂಗಡಿ ತಾಲೂಕು ಬಳಂಜ ಗ್ರಾಮದ ಸರಕಾರಿ ಶಾಲೆಯ ಮಕ್ಕಳನ್ನು ವಿಹಾರಕ್ಕೆ ಕರೆದೊಯ್ಯಲು ನಿರ್ಧರಿಸಿದಂತೆ, ಮಕ್ಕಳನ್ನು ವಿಹಾರಕ್ಕೆ ಕರೆದೊಯ್ಯಲು ಒಂದು ಸುರಕ್ಷಿತವಾದ ವಾಹನವನ್ನು ಗೊತ್ತು ಮಾಡುವ ಬದಲಾಗಿ ತೆರೆದ ಪಿಕಪ್ ವಾಹನದಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ಅಪಾಯಕಾರಿಯಾಗಿ ಕರೆದೊಯ್ದಿದ್ದು ಶಿಕ್ಷಕರ ಬೇಜವಾಬ್ದಾರಿ ಮತ್ತು ಅವಿವೇಕಿತನಕ್ಕೆ ಸಾಕ್ಷಿಯಾಗಿದೆ. ಮನರಂಜನೆ, ವಿಹಾರಗಳೆಂದರೆ ಸಹಜವಾಗಿ ಸಂಭ್ರಮಿಸುವ ಮುಗ್ಧ ಮಕ್ಕಳನ್ನು ಟಿಪ್ಪರ್, ಪಿಕಪ್ ನಲ್ಲಿ ವಿಹಾಕ್ಕೆ ಕರೆದುಕೊಂಡು ಹೊದ ಶಿಕ್ಷಕರ ಬೇಜವಾಬ್ದಾರಿಯ ನಡೆಯ ಬಗ್ಗೆ ಪೋಷಕರಿಂದ, ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಘಟನೆ ಬಗ್ಗೆ ಆಕ್ರೋಶಗೊಂಡ ಪೋಷಕರು ಈಗಾಗಲೇ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ದೂರು ನೀಡಿದ್ದಾರೆ.ಕೂಲಿಕಾರ್ಮಿಕರನ್ನು ಪಿಕಪ್, ಟಿಪ್ಪರ್ ಗಳಲ್ಲಿ ಕೆಲಸಕ್ಕೆ ಕರೆದೊಯ್ದ ಪ್ರಸಂಗಗಳಿಗೆ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸುವ ಪೊಲೀಸರು, ಬಳಂಜ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಪಿಕಪ್, ಟಿಪ್ಪರ್ ಗಳಲ್ಲಿ ಪುಟಾಣಿ ಮಕ್ಕಳನ್ನು ವಿಹಾರಕ್ಕೆ ಕರೆದೊಯ್ದ ಘಟನೆಗೆ ಕಾರಣಕರ್ತರಾದ ಶಿಕ್ಷಕರ ವಿರುದ್ದ ಪೊಲೀಸರು, ಆರ್.ಟಿ.ಒ ಅಥವಾ ಶಿಕ್ಷಣ ಇಲಾಖೆ ಯಾವ ಕ್ರಮಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡುತ್ತಿದ್ದಾರೆ.

Related posts

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಕಡಿರುದ್ಯಾವರ: ಕಾನರ್ಪ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯದಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

Suddi Udaya

ಗೇರುಕಟ್ಟೆ ಫ್ರೆಂಡ್ಸ್ ಮತ್ತು ಗಲ್ಫ್ ಗೈಸ್ ವತಿಯಿಂದ ಜಿ.ಪಿ.ಎಲ್ – 2024 ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

Suddi Udaya
error: Content is protected !!