37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ, ಸ್ವಾಗತ ಕಾರ್ಯಾಲಯ ಉದ್ಘಾಟನೆ

ಧರ್ಮಸ್ಥಳ: ನಾಡಿನೆಲ್ಲೆಡೆಯಿಂದ ಫೆ. 15 ರಂದು ಶಿವರಾತ್ರಿಗೆ ಧರ್ಮಸ್ಥಳಕ್ಕೆ ೫೦,೦೦೦ಕ್ಕೂ ಮಿಕ್ಕಿ ಪಾದಯಾತ್ರಿಗಳು ಬರುವ ನಿರೀಕ್ಷೆ ಇದ್ದು, ಅವರ ಸ್ವಾಗತ ಹಾಗೂ ವಸತಿ ಸೌಲಭ್ಯಕ್ಕೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ.

ಧರ್ಮಸ್ಥಳದಲ್ಲಿ ಮುಖ್ಯಪ್ರವೇಶದ್ವಾರದ ಬಳಿ ಸ್ವಾಗತ ಕಾರ್ಯಾಲಯವನ್ನು ಗುರುವಾರ ಧರ್ಮಾಧಿಕಾರಿಗಳಾದ ಪೂಜ್ಯ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಉದ್ಘಾಟಿಸಿದರು.


ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್, ಅನ್ನಪೂರ್ಣ ಭೋಜನಾಲಯದ ವ್ಯವಸ್ಥಾಪಕರಾದ ಸುಬ್ರಹ್ಮಣ್ಯಪ್ರಸಾದ್, ಕ್ಷೇತ್ರದ ನೌಕರರು, ಯುವತಿ ಮಂಡಲದ ಸದಸ್ಯೆಯರು ಮತ್ತು ಊರಿನ ನಾಗರಿಕರು ಉಪಸ್ಥಿತರಿದ್ದರು.
ಇಲ್ಲಿ ತಂಪುಪಾನೀಯ ಮತ್ತು ಕುಡಿಯುವನೀರಿನ ಸೌಲಭ್ಯ, ಅಂಬುಲೆನ್ಸ್ ಸೇವೆ, ತುರ್ತು ಆರೋಗ್ಯ ಸೇವೆ, ಮಾಹಿತಿ ವಿಭಾಗ, ಪೊಲೀಸ್ ಚೌಕಿಯನ್ನೂ ತೆರೆಯಲಾಗಿದೆ.

ಉಜಿರೆಯಲ್ಲಿ ಎಸ್.ಡಿ.ಎಂ. ಶಿಕ್ಷಣಸಂಸ್ಥೆಗಳಲ್ಲಿ ಹಾಗೂ ಧರ್ಮಸ್ಥಳದಲ್ಲಿ ವಸತಿಛತ್ರಗಳಲ್ಲಿ ಪಾದಯಾತ್ರಿಗಳಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಕಡೆ ಸುರಕ್ಷತೆ ಮತ್ತು ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಸ್ವಯಂ-ಸೇವಕರು ಪಾದಯಾತ್ರಿಗಳ ಸೇವೆಗೆ ಸಜ್ಜಾಗಿದ್ದಾರೆ.

Related posts

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಭಾರತೀಯ ಅಂಚೆ ಇಲಾಖೆ ಅಪಘಾತ ವಿಮೆ ನೋಂದಾವನಾ ಪ್ರಕ್ರಿಯೆ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 15ನೇ ಪಟ್ಟಾಭಿಷೇಕದ ವರ್ಧತ್ಯುತ್ಸವ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

Suddi Udaya

ಸಮಾಜ ಸೇವಾಟ್ರಸ್ಟ್ ನ ಸಂಸ್ಥಾಪಕ ರವಿ ಕಕ್ಕೆಪದವು ರವರ ಮಾಗದರ್ಶನದಲ್ಲಿ ಕುಮಾರಧಾರದಿಂದ ಕಾಶಿಕಟ್ಟೆಯವರೆಗೆ ಸ್ವಚ್ಛತಾ ಕಾರ್ಯ

Suddi Udaya

ಶಿಬಾಜೆ ಶತಚಂಡಿಕಾಯಾಗ : ಶಾಸಕ ಹರೀಶ್ ಪೂಂಜರಿಗೆ ಆಹ್ವಾನ

Suddi Udaya
error: Content is protected !!