23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಣಕಾಸು ಮತ್ತು ಡಿಜಿಟಲ್ ಸಾಕ್ಷರತಾ ಶಿಬಿರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (NSS) ವತಿಯಿಂದ ನಬಾರ್ಡ್ ಹಾಗೂ ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ಹಣಕಾಸು ಹಾಗೂ ಡಿಜಿಟಲ್ ಸಾಕ್ಷರತಾ ಶಿಬಿರವನ್ನು ಆಯೋಜಿಸಲಾಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅಜೇಯ, ನಿರ್ದೇಶಕರು ರುಡ್ ಸೆಟ್ ಸಂಸ್ಥೆ ಉಜಿರೆ ಇವರು ಸ್ವ ಉದ್ಯೋಗ , ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಿಗುವ ಸಾಲಸೌಲಭ್ಯಗಳು , ಹಾಗೂ ರುಡ್ ಸೆಟ್ ಸಂಸ್ಥೆಯ ವಿವಿಧ ತರಬೇತಿ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಬೆಳ್ತಂಗಡಿ ಅಮೂಲ್ಯ ಹಣಕಾಸು ಸಾಕ್ಷರತಾ ಕೇಂದ್ರದ ಸಲಹೆಗಾರರು ಉಷಾ ನಾಯಕ್ ಮಾತನಾಡಿ , ಸೈಬರ್ ಭದ್ರತೆ, ವಿವಿಧ ಬ್ಯಾಂಕಿಂಗ್ ಸೇವೆಗಳು, ಡಿಜಿಟಲ್ ವ್ಯವಹಾರದ ಸುರಕ್ಷತಾ ಕ್ರಮಗಳು, ಉಳಿತಾಯದ ಮಹತ್ವ , ಸಾಲದ ಶಿಸ್ತು ಹಾಗೂ ಹಣಕಾಸು ಭದ್ರತೆ, ಮತ್ತು ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳ (PMJJBY, PMSBY, APY) ಕುರಿತು ಮಾಹಿತಿ ನೀಡಿದರು.

ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳ ಸದುಪಯೋಗ ಹಾಗೂ ಸುರಕ್ಷಿತ ಡಿಜಿಟಲ್ ವ್ಯವಹಾರಗಳ ಕುರಿತು ಹೆಚ್ಚಿನ ಅರಿವು ಪಡೆದರು.

ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿ ಪ್ರಕಾಶ್ ಗೌಡ, ಶ್ರೀಮತಿ ಚಂಪಾ, ಪ್ರಬಂಧಕರು ಕೆನರಾ ಬ್ಯಾಂಕ್ ಬೆಳ್ತಂಗಡಿ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಪ್ರಕೃತಿ ಪಿ ವಿ ಸ್ವಾಗತಿಸಿ, ವರ್ಷಾ ಕೆ.ಪಿ. ನಿರೂಪಿಸಿದರು. ಶ್ರೇಯಸ್ ಆರ್. ರಾವ್ ವಂದಿಸಿದರು.

Related posts

ದೈವ ನರ್ತಕ ಡಾ.ರವೀಶ್ ಪಡುಮಲೆಯವರಿಗೆ ಬಂಬ್ರಾಣ‌ ಮುಗೇರ್ ತರವಾಡು ಮನೆಯಲ್ಲಿ ಗೌರವ ಸನ್ಮಾನ

Suddi Udaya

ಎಸ್.ಕೆ.ಎಸ್.ಎಸ್.ಎಫ್ ಗುರುವಾಯನಕೆರೆ ಕ್ಲಸ್ಟರ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ನಡ -ಕನ್ಯಾಡಿ ಕಾಂಗ್ರೆಸ್ ಗ್ರಾಮ ಸಮಿತಿ ರಚನೆ: ಅಧ್ಯಕ್ಷರಾಗಿ ಜಾಕೀರ್ ಹುಸೇನ್

Suddi Udaya

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಮುಂಡಾಜೆ ಕಾಲೇಜಿನ ಎನ್ ಎಸ್ ಎಸ್ ಶಿಬಿರ ಉದ್ಘಾಟನೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ ಶಾಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ತಂಡದಿಂದ ಕಮ್ಮಟ – ಬೀದಿ ನಾಟಕ ಪ್ರದರ್ಶನ

Suddi Udaya
error: Content is protected !!