23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ: ಸಾನಿಧ್ಯ ಕಲಶಾಭಿಷೇಕ, ಉತ್ಸವಬಲಿ

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ದೇವರ ವಾರ್ಷಿಕ ಜಾತ್ರೆ ಮತ್ತು ಆರಾಟ್ ಉತ್ಸವ ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ಹಿರಿತನದಲ್ಲಿ ಫೆ.12ರಿಂದ ಪ್ರಾರಂಭಗೊಂಡು ಫೆ.16ರವರೆಗೆ ನಡೆಯಲಿದೆ.

ಇಂದು ( ಫೆ.13) ಬೆಳಿಗ್ಗೆ ಗಣಹೋಮ, ಉಷಃ ಪೂಜೆ, ಬಿಂಬಶುದ್ದಿ, ಸಾನಿಧ್ಯ ಕಲಶಪೂಜೆ, ಸಾನಿಧ್ಯ ಕಲಶಾಭಿಷೇಕ, ಮಹಾಪೂಜೆ, ತಂತ್ರಬಲಿ, ಉತ್ಸವಬಲಿ ಹಾಗೂ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರು ಯಶೋಧರ ವಳಸರಿ, ಆಡಳಿತ ಮಂಡಳಿಯವರು, ಅರ್ಚಕರು, ವಿಲಯದವರು ಹಾಗೂ ಸಾವಿರಾರು ಭಕ್ತರು ಉಪಸ್ಥಿತರಿದ್ದರು.

ರಾತ್ರಿ ರಂಗ ಪೂಜೆ, ಉತ್ಸವ ಬಲಿ, ನೃತ್ಯ ಬಲಿ, ಶ್ರೀ ಶಾರದ ಆರ್ಟ್ಸ್ ಐಸಿರಿ ಕಲಾವಿದರು ಮಂಜೇಶ್ವರ ಇವರಿಂದ ಪೌರಾಣಿಕ ನಾಟಕ ಭಜರಂಗ ಬಲಿ ನಡೆಯಲಿದೆ.

Related posts

ಹೊಸಂಗಡಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಸುಲ್ಕೇರಿ: ಇರಂತೊಟ್ಟು ಹೊಸಮನೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಓಡಿಲ್ನಾಳ ಕೆರೆಕೋಡಿ ಲೋಕಯ್ಯ ಮೂಲ್ಯ ಅಸಹಜ ಸಾವು

Suddi Udaya

ಬೆಳ್ತಂಗಡಿ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ಪಂಚಪ್ರಾಣ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ

Suddi Udaya

ಜ. 25: ಅರಸಿನಮಕ್ಕಿಯಲ್ಲಿ ಹಿಂದೂ ಸಂಗಮ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!