25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಣಕಾಸು ಮತ್ತು ಡಿಜಿಟಲ್ ಸಾಕ್ಷರತಾ ಶಿಬಿರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (NSS) ವತಿಯಿಂದ ನಬಾರ್ಡ್ ಹಾಗೂ ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ಹಣಕಾಸು ಹಾಗೂ ಡಿಜಿಟಲ್ ಸಾಕ್ಷರತಾ ಶಿಬಿರವನ್ನು ಆಯೋಜಿಸಲಾಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅಜೇಯ, ನಿರ್ದೇಶಕರು ರುಡ್ ಸೆಟ್ ಸಂಸ್ಥೆ ಉಜಿರೆ ಇವರು ಸ್ವ ಉದ್ಯೋಗ , ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಿಗುವ ಸಾಲಸೌಲಭ್ಯಗಳು , ಹಾಗೂ ರುಡ್ ಸೆಟ್ ಸಂಸ್ಥೆಯ ವಿವಿಧ ತರಬೇತಿ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಬೆಳ್ತಂಗಡಿ ಅಮೂಲ್ಯ ಹಣಕಾಸು ಸಾಕ್ಷರತಾ ಕೇಂದ್ರದ ಸಲಹೆಗಾರರು ಉಷಾ ನಾಯಕ್ ಮಾತನಾಡಿ , ಸೈಬರ್ ಭದ್ರತೆ, ವಿವಿಧ ಬ್ಯಾಂಕಿಂಗ್ ಸೇವೆಗಳು, ಡಿಜಿಟಲ್ ವ್ಯವಹಾರದ ಸುರಕ್ಷತಾ ಕ್ರಮಗಳು, ಉಳಿತಾಯದ ಮಹತ್ವ , ಸಾಲದ ಶಿಸ್ತು ಹಾಗೂ ಹಣಕಾಸು ಭದ್ರತೆ, ಮತ್ತು ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳ (PMJJBY, PMSBY, APY) ಕುರಿತು ಮಾಹಿತಿ ನೀಡಿದರು.

ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳ ಸದುಪಯೋಗ ಹಾಗೂ ಸುರಕ್ಷಿತ ಡಿಜಿಟಲ್ ವ್ಯವಹಾರಗಳ ಕುರಿತು ಹೆಚ್ಚಿನ ಅರಿವು ಪಡೆದರು.

ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿ ಪ್ರಕಾಶ್ ಗೌಡ, ಶ್ರೀಮತಿ ಚಂಪಾ, ಪ್ರಬಂಧಕರು ಕೆನರಾ ಬ್ಯಾಂಕ್ ಬೆಳ್ತಂಗಡಿ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಪ್ರಕೃತಿ ಪಿ ವಿ ಸ್ವಾಗತಿಸಿ, ವರ್ಷಾ ಕೆ.ಪಿ. ನಿರೂಪಿಸಿದರು. ಶ್ರೇಯಸ್ ಆರ್. ರಾವ್ ವಂದಿಸಿದರು.

Related posts

ದ.ಕ.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರ ಜೊತೆ ರಕ್ಷಾ ಸಮಿತಿ ಸದಸ್ಯರಿಂದ ಸಮಿತಿ ಸಭೆ ಹಾಗೂ ರೋಗಿಗಳ ಭೇಟಿ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಉಪ್ಪಿನಂಗಡಿ – ಮಡಂತ್ಯಾರು ಮಾರ್ಗದಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಬಿಡುವಂತೆ ಆಗ್ರಹಿಸಿ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಎಸ್‌ಡಿಪಿಐ ನಿಯೋಗ

Suddi Udaya

ಲಾಯಿಲ: ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಬೆಳ್ತಂಗಡಿ ತ್ರಿ ಸ್ಟಾರ್ ವೈನ್ಸ್ ಶಾಪ್ ಮತ್ತು ಉಜಿರೆಯ ಮೊಬೈಲ್ ಶಾಪ್ ಕಳ್ಳತನ ಪ್ರಕರಣ: ಅಪ್ರಾಪ್ತ ಬಾಲಕ ಸೇರಿ ಇಬ್ಬರು ಕುಂದಾಪುರದಲ್ಲಿ ವಶಕ್ಕೆ

Suddi Udaya

ಧರ್ಮಸ್ಥಳದಲ್ಲಿ ಗೋ ರಥ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಗೋ ರಥ ಯಾತ್ರೆಗೆ ಶುಭ ಹಾರೈಕೆ

Suddi Udaya
error: Content is protected !!