September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫೆ.14: ಕರಂಬಾರು ಬೊಟ್ಯೆಲ್ಮಾರಿನಲ್ಲಿ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ನೇಮೋತ್ಸವ

ಕರಂಬಾರು: ಬೊಟ್ಯಾಲ್ಮಾರುನಲ್ಲಿ ವರ್ಷಂಪ್ರತಿ ನಡೆಯುವ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ನೇಮೋತ್ಸವವು ಫೆ.14 ರಂದು ಜರುಗಲಿದೆ ಎಂದು ಜಾತ್ರಾ ಸಮಿತಿ ಅಧ್ಯಕ್ಷ ಪ್ರಸನ್ನ ಹೆಗ್ಡೆ ಕರಂಬಾರುಗುತ್ತು ತಿಳಿಸಿರುತ್ತಾರೆ.

ಸಂಜೆ ಕರಂಬಾರುಗುತ್ತು ಮನೆಯಿಂದ ಭವ್ಯ ಮೆರವಣಿಗೆಯಲ್ಲಿ ದೈವಗಳ ಭಂಡಾರ ಬರುವುದು. ರಾತ್ರಿ ಕರಂಬಾರು ಗ್ರಾಮ ಮತ್ತು ತಾರಿದೊಟ್ಟು ಅಂಗನವಾಡಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ, ಸಾರ್ವಜನಿಕ ಅನ್ನಸಂತರ್ಪಣೆ, ಮಹಮ್ಮಾಯಿ ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ ಅಂಗವಾಗಿ ಪಿಂಗಾರ ಕಲಾವಿದೆರ್ ಬೆದ್ರ ಅಭಿನಯಿಸುವ ‘ಓಂಕಾರ’ ತುಳು ನಾಟಕ ಜರುಗಲಿರುವುದು.

ಜಾತ್ರೋತ್ಸವದ ದಿನದಂದು ಮಹಿಳೆಯರಿಗೆ ಹೂ ಕಟ್ಟುವ ಸ್ಪರ್ಧೆ ಇದ್ದು ಹೂಮಾಲೆಯನ್ನು ಮನೆಯಲ್ಲೇ ಕಟ್ಟಿ ರಾತ್ರಿ ೮ರ ಒಳಗೆ ದೈವಸ್ಥಾನಕ್ಕೆ ತಂದು ಒಪ್ಪಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ನಾವೂರು : ಪೌಷ್ಟಿಕ ಆಹಾರ ಅರಿವು ಕಾರ್ಯಕ್ರಮ

Suddi Udaya

ಶಾಲಾ ಮಕ್ಕಳ ರಕ್ಷಣೆಗೆ ಬೇಕಿದೆ ಮಚ್ಚಿನಕ್ಕೊಂದು ಬ್ಯಾರಿಕೇಡ್

Suddi Udaya

ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ 12 ವರ್ಷ : ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಉಜಿರೆ ಎಸ್.ಡಿ.ಎಂ ನಲ್ಲಿ ಜೀವನ ಕೌಶಲ್ಯ ಹಾಗೂ ವೃತ್ತಿಪರ ಕೌಶಲ್ಯ ಮಾಹಿತಿ ಕಾರ್ಯಾಗಾರ

Suddi Udaya

ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ ವಾರ್ಷಿಕೋತ್ಸವ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ನವಚೇತನ ಶಾಲೆಯ ದ್ವಿಗುಣ ಸಾಧನೆ

Suddi Udaya
error: Content is protected !!