July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಣಕಾಸು ಮತ್ತು ಡಿಜಿಟಲ್ ಸಾಕ್ಷರತಾ ಶಿಬಿರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (NSS) ವತಿಯಿಂದ ನಬಾರ್ಡ್ ಹಾಗೂ ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ಹಣಕಾಸು ಹಾಗೂ ಡಿಜಿಟಲ್ ಸಾಕ್ಷರತಾ ಶಿಬಿರವನ್ನು ಆಯೋಜಿಸಲಾಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅಜೇಯ, ನಿರ್ದೇಶಕರು ರುಡ್ ಸೆಟ್ ಸಂಸ್ಥೆ ಉಜಿರೆ ಇವರು ಸ್ವ ಉದ್ಯೋಗ , ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಿಗುವ ಸಾಲಸೌಲಭ್ಯಗಳು , ಹಾಗೂ ರುಡ್ ಸೆಟ್ ಸಂಸ್ಥೆಯ ವಿವಿಧ ತರಬೇತಿ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಬೆಳ್ತಂಗಡಿ ಅಮೂಲ್ಯ ಹಣಕಾಸು ಸಾಕ್ಷರತಾ ಕೇಂದ್ರದ ಸಲಹೆಗಾರರು ಉಷಾ ನಾಯಕ್ ಮಾತನಾಡಿ , ಸೈಬರ್ ಭದ್ರತೆ, ವಿವಿಧ ಬ್ಯಾಂಕಿಂಗ್ ಸೇವೆಗಳು, ಡಿಜಿಟಲ್ ವ್ಯವಹಾರದ ಸುರಕ್ಷತಾ ಕ್ರಮಗಳು, ಉಳಿತಾಯದ ಮಹತ್ವ , ಸಾಲದ ಶಿಸ್ತು ಹಾಗೂ ಹಣಕಾಸು ಭದ್ರತೆ, ಮತ್ತು ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳ (PMJJBY, PMSBY, APY) ಕುರಿತು ಮಾಹಿತಿ ನೀಡಿದರು.

ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳ ಸದುಪಯೋಗ ಹಾಗೂ ಸುರಕ್ಷಿತ ಡಿಜಿಟಲ್ ವ್ಯವಹಾರಗಳ ಕುರಿತು ಹೆಚ್ಚಿನ ಅರಿವು ಪಡೆದರು.

ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿ ಪ್ರಕಾಶ್ ಗೌಡ, ಶ್ರೀಮತಿ ಚಂಪಾ, ಪ್ರಬಂಧಕರು ಕೆನರಾ ಬ್ಯಾಂಕ್ ಬೆಳ್ತಂಗಡಿ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಪ್ರಕೃತಿ ಪಿ ವಿ ಸ್ವಾಗತಿಸಿ, ವರ್ಷಾ ಕೆ.ಪಿ. ನಿರೂಪಿಸಿದರು. ಶ್ರೇಯಸ್ ಆರ್. ರಾವ್ ವಂದಿಸಿದರು.

Related posts

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ನಲ್ಲಿ ವಾರ್ಷಿಕೋತ್ಸವ

Suddi Udaya

ಮುಂಡಾಜೆ ಪ್ರೌಢಶಾಲೆಯ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Suddi Udaya

ವಿದ್ಯಾಮಾತಾದ ಮುಕುಟಕ್ಕೆ ಮತ್ತೊಂದು ಗರಿಮೆ: SSC-GD(ಸಶಸ್ತ್ರ ಪಡೆ) ಲಿಖಿತ ಪರೀಕ್ಷೆ ಉತ್ತೀರ್ಣಗೊಂಡ ಇಂಜಿನಿಯರಿಂಗ್ ವಿದ್ಯಾರ್ಥಿನಿ ಲಹರಿ ಕೆ.

Suddi Udaya

ನಿಡಿಗಲ್ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿ: ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್

Suddi Udaya

ಇಂದಬೆಟ್ಟು: ಸಂವಿಧಾನ ಜಾಗೃತಿ ಜಾಥ

Suddi Udaya
error: Content is protected !!