September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಣಕಾಸು ಮತ್ತು ಡಿಜಿಟಲ್ ಸಾಕ್ಷರತಾ ಶಿಬಿರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (NSS) ವತಿಯಿಂದ ನಬಾರ್ಡ್ ಹಾಗೂ ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ಹಣಕಾಸು ಹಾಗೂ ಡಿಜಿಟಲ್ ಸಾಕ್ಷರತಾ ಶಿಬಿರವನ್ನು ಆಯೋಜಿಸಲಾಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅಜೇಯ, ನಿರ್ದೇಶಕರು ರುಡ್ ಸೆಟ್ ಸಂಸ್ಥೆ ಉಜಿರೆ ಇವರು ಸ್ವ ಉದ್ಯೋಗ , ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಿಗುವ ಸಾಲಸೌಲಭ್ಯಗಳು , ಹಾಗೂ ರುಡ್ ಸೆಟ್ ಸಂಸ್ಥೆಯ ವಿವಿಧ ತರಬೇತಿ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಬೆಳ್ತಂಗಡಿ ಅಮೂಲ್ಯ ಹಣಕಾಸು ಸಾಕ್ಷರತಾ ಕೇಂದ್ರದ ಸಲಹೆಗಾರರು ಉಷಾ ನಾಯಕ್ ಮಾತನಾಡಿ , ಸೈಬರ್ ಭದ್ರತೆ, ವಿವಿಧ ಬ್ಯಾಂಕಿಂಗ್ ಸೇವೆಗಳು, ಡಿಜಿಟಲ್ ವ್ಯವಹಾರದ ಸುರಕ್ಷತಾ ಕ್ರಮಗಳು, ಉಳಿತಾಯದ ಮಹತ್ವ , ಸಾಲದ ಶಿಸ್ತು ಹಾಗೂ ಹಣಕಾಸು ಭದ್ರತೆ, ಮತ್ತು ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳ (PMJJBY, PMSBY, APY) ಕುರಿತು ಮಾಹಿತಿ ನೀಡಿದರು.

ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳ ಸದುಪಯೋಗ ಹಾಗೂ ಸುರಕ್ಷಿತ ಡಿಜಿಟಲ್ ವ್ಯವಹಾರಗಳ ಕುರಿತು ಹೆಚ್ಚಿನ ಅರಿವು ಪಡೆದರು.

ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿ ಪ್ರಕಾಶ್ ಗೌಡ, ಶ್ರೀಮತಿ ಚಂಪಾ, ಪ್ರಬಂಧಕರು ಕೆನರಾ ಬ್ಯಾಂಕ್ ಬೆಳ್ತಂಗಡಿ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಪ್ರಕೃತಿ ಪಿ ವಿ ಸ್ವಾಗತಿಸಿ, ವರ್ಷಾ ಕೆ.ಪಿ. ನಿರೂಪಿಸಿದರು. ಶ್ರೇಯಸ್ ಆರ್. ರಾವ್ ವಂದಿಸಿದರು.

Related posts

ಮುಂಡಾಜೆ: ಕೃಷಿಕ ಶಾಜಿ ವಾಟೆಪ್ಪಿಳ್ಳಿಲ್ ಹೃದಯಾಘಾತದಿಂದ ನಿಧನ

Suddi Udaya

ಶಿಶಿಲ: ಆನೆ ದಾಳಿ ಬಗ್ಗೆ ಗ್ರಾಮಸ್ಥರು ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಮಾಹಿತಿ ಕಾರ್ಯಾಗಾರ

Suddi Udaya

ಸುಳ್ಳು ಸುದ್ದಿ ಪ್ರಸಾರ ಹಾಗೂ ಅವ್ಯಾಚ್ಯ ನಿಂದನೆ ದೂರು : ಸುವರ್ಣ ನ್ಯೂಸ್ ಆ್ಯಂಕರ್ ಹಾಗೂ ವರದಿಗಾರ, ಕ್ಯಾಮೆರಾಮ್ಯಾನ್ ವಿರುದ್ಧ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಪ್ರಾಕೃತಿಕ ವಿಕೋಪಗಳು ಮತ್ತು ಸಾಂಕ್ರಾಮಿಕ ರೋಗಗಳಿಂದ ಸುರಕ್ಷತಾ ಜಾಗೃತಿ

Suddi Udaya

ಗೇರುಕಟ್ಟೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ನೈಜ್ಯ ಆರೋಪಿಗಳ ಪತ್ತೆಯಾಗಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya
error: Content is protected !!