30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪದ್ಮುಂಜ: ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವ ಸಿದ್ದತಾ ಸಭೆ: ಶಾಸಕ ಹರೀಶ್ ಪೂಂಜ ರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಪದ್ಮುಂಜ: ಮಲೆಂಗಲ್ಲು ಉಮಾಮಹೇಶ್ವರ ಬ್ರಹ್ಮಕಲಶೋತ್ಸವದ ಪೂರ್ವ ಸಿದ್ದತಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಪದ್ಮುಂಜ ಸಿಎ ಬ್ಯಾಂಕ್ ಸಭಾಂಗಣದಲ್ಲಿ ಫೆ. 14 ರಂದು ನಡೆಯಿತು.

ಮಾರ್ಚ್ 1 ರಿಂದ 6 ರವರೆಗೆ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು, ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮಾರ್ಗದರ್ಶನದೊಂದಿಗೆ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು.

ಈ ವೇಳೆ ಶಾಸಕ ಹರೀಶ್ ಪೂಂಜ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಉತ್ಸವದ ರೂಪುರೇಷೆಗಳನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಅನುವಂಶೀಯ ಮೊಕ್ತೇಸರರು ಚಿದಾನಂದ ರಾವ್, ಆಡಳಿತ ಮಂಡಳಿ ಅಧ್ಯಕ್ಷ ಸದಾನಂದ ಮೇಲಾಂಟ, ಮೊಗರೋಡಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶಿವಶಂಕರ್ ನಾಯಕ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಿಠಲ ಶೆಟ್ಟಿ ಕೊಲ್ಲೊಟ್ಟು, ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸೀತರಾಮ ಮಡಿವಾಳ, ಕಣಿಯೂರು ವಲಯ ಒಕ್ಕೂಟದ ಅಧ್ಯಕ್ಷ ರಮಾನಂದ ಪೂಜಾರಿ, ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ, ನಿಕಟಪೂವ ಅಧ್ಯಕ್ಷ ಸೀತರಾಮ, ಆಡಳಿತ ಮಂಡಳಿ ಕಾರ್ಯದರ್ಶಿ ಜಿತೇಶ್ ಜೈನ್ ಅಡೆಂಜ , ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಪ್ರಫುಲ್ಲಚಂದ್ರ ಅಡ್ಯಂತಾಯ ಮೊಗರೋಡಿ ,ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರು ಹರ್ಷ ಮೇಲಾಂಟ ಮೊಗರೋಡಿ , ಆಡಳಿತ ಮಂಡಳಿ ಕೋಶಾಧಿಕಾರಿ ರಕ್ಷಿತ್ ಪಣೆಕ್ಕರ , ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ನಾರಾಯಣ ಗೌಡ ಮುಚ್ಚೂರು, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ, ಮಲೆಂಗಲ್ಲು , ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ರಘುಪತಿ ಭಟ್ ,ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಧನ್ಯ ಕುಮಾರ್, ಪದ್ಮುಂಜ, ಕೋಶಾಧಿಕಾರಿ ಉದಯ ಕುಮಾರ್ ಮೇಲಾಂಟ, ಪ್ರಧಾನ ಅರ್ಚಕರು ವಿಜಯ ಕುಮಾರ್ ಭಟ್ ,ಆಡಳಿತ ಮಂಡಳಿ, ಜೀರ್ಣೋದ್ಧಾರ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು , ಸದಸ್ಯರು ಉಪಸ್ಥಿತರಿದ್ದರು.

Related posts

ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಂರವರ 116 ನೇ ಜನ್ಮ ದಿನಾಚರಣೆ

Suddi Udaya

ಕೊಲ್ಪಾಡಿಯಲ್ಲಿ ಮಕ್ಕಳ ಹುಣ್ಣಿಮೆಯ ಪ್ರಯುಕ್ತ ಆಟೋಟ ಸ್ಪರ್ಧೆ ಉದ್ಘಾಟನೆ

Suddi Udaya

ಗುರುವಾಯನಕೆರೆ ಯೋಜನೆ ವತಿಯಿಂದ ಪುರಿಯ ಹಾಲಿನ ಡೈರಿ ಗೆ ರೂ. 2 ಲಕ್ಷ ಮೊತ್ತದ ಸಹಾಯಧನ ವಿತರಣೆ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ: ತೋರಣ ಮೂಹೂರ್ತ, ಹೊರೆಕಾಣಿಕೆ ಸಮರ್ಪಣೆ

Suddi Udaya

ರಾಜ್ಯ ಸರ್ಕಾರದಿಂದ ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ : ಇದು ಬಡಜನರ ಮೇಲಿನ ಮರಣ ಶಾಸನ: ಶೇಖರ ಎಲ್

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!