ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ : KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್ : ಬೆಂಕಿ ಕೆನ್ನಾ ‌ಲಿಗೆ ಸುಟ್ಟು ಭಸ್ಮವಾದ ವಸ್ತುಗಳು

ಬೆಳ್ತಂಗಡಿ : ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಬ್ಲಾಸ್ಟ್ ಆಗಿ ಉಂಟಾದ ಬೆಂಕಿಯಿಂದ ಅಂಗಡಿ ಸುಟ್ಟು ಭಸ್ಮವಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿರುವ ಹೇರಾಜೆ ಕಾಂಪ್ಲೆಕ್ಸ್ ನಲ್ಲಿ ಮೊದಲ ಮಹಡಿಯ ಮೊಹಮ್ಮದ್ ಸಮೀಲ್ ಎಂಬವರ ಮಾಲೀಕತ್ವದ KAF ಕ್ರಿಯೇಟಿವ್ ಅರ್ಟ್ & ಕ್ರಾಫ್ಟ್ ಸ್ಟೋರ್ ನಲ್ಲಿ ಇಬ್ಬರು ಕೆಲಸದವರು ಫೆ.14 ರಂದು ಬೆಳಗ್ಗೆ 7:30 ಕ್ಕೆ ಕಾರ್ಯಕ್ರಮವೊಂದಕ್ಕೆ ಬಲೂನ್ ಗಳಿಗೆ ಗ್ಯಾಸ್ ತುಂಬಿಸುವಾಗ ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಬ್ಲಾಸ್ಟ್ ಆಗಿ ಬೆಂಕಿ ಉಂಟಾಗಿ ಸಂಪೂರ್ಣ ಸುಟ್ಟು ಹೋಗಿದೆ.

ಘಟನೆ ವೇಳೆ ಅಂಗಡಿಯೊಳಗೆ ಇಬ್ಬರು ಕೆಲಸದವರು ಇದ್ದು ತಕ್ಷಣ ಹೊರಗಡೆ ಓಡಿ ಬಂದಿದ್ದಾರೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಸೇರಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಬೆಂಕಿ ಕೆನ್ನಲಿಗೆ ಅಕ್ಕಪಕ್ಕದ ಶಾಪ್ ಗಳಿಗೂ ಹಾನಿಯಾಗಿದೆ. ಗ್ಯಾಸ್ ಸೋರಿಕೆಯಿಂದ ಯಾವುದೇ ಬಹು ದೊಡ್ಡ ಅನಾಹುತ ಉಂಟಾಗಿಲ್ಲ.

ಘಟನೆಯನ್ನು ನೋಡಲು ನೂರಾರು ಮಂದಿ ಜಾಮಾಯಿಸಿದ್ದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗಿದ್ದು ತಕ್ಷಣ ಬೆಳ್ತಂಗಡಿ ಪೊಲೀಸರು ಮತ್ತು ಸಂಚಾರಿ ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಇದೆ ವೇಳೆ ಬೆಂಕಿ ಹೊತ್ತುವ ಘಟನೆಯನ್ನು ನೋಡುತ್ತಿದ್ದ ಶಾಪ್ ಕೆಲಸದಾಕೆ ಮೂರ್ಛೆ ಹೋದ ಘಟನೆ ನಡೆಯಿತು ಬಳಿಕ ಸ್ಥಳೀಯರೆಲ್ಲ ಸೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Related posts

ಬಂದಾರು: 9ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಜಾಯಿನ್ ಜೆಸಿಐ ಅಭಿಯಾನದಲ್ಲಿ ಜೇಸಿಯೇತರ ಸದಸ್ಯರಿಗಾಗಿ ಒರಿಯಂಟೇಷನ್ ತರಬೇತಿ ಕಾರ್ಯಾಗಾರ

Suddi Udaya

ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ಭಾಜಪ ದ ನಿಷ್ಠಾವಂತ ಕಾರ್ಯಕರ್ತ ನಾರಾಯಣ ಆಚಾರ್ಯ ಗುರುವಾಯನಕೆರೆ ನಿಧನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಡಿ.16: ಮರೋಡಿ ಶಾರದಾಂಬ ಪ್ಲೇಯರ್ಸ್ ಆಶ್ರಯದಲ್ಲಿ ಪುರುಷರ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, “ಸ್ಪಂದನಾ ಟ್ರೋಫಿ-2023”

Suddi Udaya

ಕೊಕ್ಕಡ: ಸರ್ವಿಸ್ ಸ್ಟೇಷನ್ ಮಾಲಕ ಶಾಂತಪ್ಪ ಗೌಡ ಆತ್ಮಹತ್ಯೆ

Suddi Udaya
error: Content is protected !!