25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ; ಮಚ್ಚಿನ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

ಮಚ್ಚಿನ: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆಬ್ರವರಿ 25 ರಿಂದ ಮಾರ್ಚ್ 1 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮವನ್ನು ಯಶಸ್ಸು ಗೊಳಿಸುವ ಬಗ್ಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಚ್ಚಿನ ಗ್ರಾಮದ ಭಕ್ತಾಭಿಮಾನಿಗಳ ಸಮಾಲೋಚನಾ ಸಭೆಯು ಫೆ.13 ರಂದು ಸಮುದಾಯ ಭವನ ಮಚ್ಚಿನದಲ್ಲಿ ನಡೆಯಿತು.

ಶ್ರೀ ಗುರು ನಾರಾಯಣ ಸೇವಾ ಸಂಘ ಬೆಳ್ತಂಗಡಿ ಇಲ್ಲಿಯ ನಿರ್ದೇಶಕರು, ಮಚ್ಚಿನ ಬಿಲ್ಲವ ಸಂಘ ದ ಅಧ್ಯಕ್ಷ ಗೋಪಾಲ ಪೂಜಾರಿ ಕೋಲಾಜೆಯವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿಯ ಸದಸ್ಯರೂ, ಬೆಳ್ತಂಗಡಿ ತಾಲೂಕಿನ ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ಪ್ರಾಸ್ತಾವಿಕವಾಗಿ ಮಾತನಾಡಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರಾ ಮಹೋತ್ಸವವನ್ನು ಯಶಸ್ಸು ಗೊಳಿಸುವ ಬಗ್ಗೆ ಹಾಗೂ ಕ್ಷೇತ್ರದಲ್ಲಿ ಆಗಲಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಿ ತಾಲೂಕಿನ ಭಕ್ತಾಭಿಮಾನಿಗಳನ್ನು ಶ್ರೀ ಕ್ಷೇತ್ರಕ್ಕೆ ಆಹ್ವಾನಿಸಿದರು. ವೇದಿಕೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಸದಸ್ಯ ನಾರಾಯಣ ಪೂಜಾರಿ ಮಚ್ಚಿನ, ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಿತಿಯ ವಲಯ ಸಂಚಾಲಕ ಪ್ರಮೋದ್ ಮಚ್ಚಿನ, ಗೆಜ್ಜೆಗಿರಿ ಗ್ರಾಮ ಸಮಿತಿ ಅಧ್ಯಕ್ಷ ಪುರಂದರ ಕುರುಡಂಗೆ, ಕಾರ್ಯದರ್ಶಿ ಸುಮಿತ್ ಬಳ್ಳಮಂಜ ಉಪಸ್ಥಿತರಿದ್ದರು. ಪ್ರಭಾಕರ ಮುದಲಡ್ಕ, ರಾಜೇಶ್ ಅರಮನೆಗುಡ್ಡೆ, ಸುನಿಲ್ ಕುಮಾರ್ ಕುರುಡಂಗೆ, ಗೋಪಾಲ ಪೂಜಾರಿ ಕೊಡಿಯೇಲ್, ವಸಂತ ಪೂಜಾರಿ ಕುಂಡಡ್ಕ, ಯಶೋಧರ ಕೋಟಿಯನ್, ಸಂಜೀವ ಪೂಜಾರಿ ಕಲ್ಲಿಮಾರ್, ರಮೇಶ ಕೋಡಿಯೇಲ್, ಪರಮೇಶ್ವರ್ ಬಳ್ಳಮಂಜ, ಹಾಗೂ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪ್ರಮೋದ್ ಕುಮಾರ್ ಸಂಯೋಜಿಸಿ ಗೋಪಾಲ್ ಪೂಜಾರಿ ಕೋಲಾಜೆ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ನ.23: ಅಳದಂಗಡಿ ಪಾಲಬೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ಧರ್ಮಸ್ಥಳ: ಆಟೋ ಚಾಲಕ ಸುಂದರ ಗೌಡ ನಿಧನ

Suddi Udaya

ಶಿಬಾಜೆ: ಜಮೀನಿಗೆ ಅಳವಡಿಸಿದ ಮರದ ಬೇಲಿಯನ್ನು ತೆಗೆದು ಹಾಕಿ ಅಡಿಕೆಕೊಂಡು ಹೋದ ಪ್ರಕರಣ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಬೆಳ್ತಂಗಡಿಯ ಬಿ.ಕೆ ಧನಂಜಯ ರಾವ್ ರವರ ನೂತನ ಕಚೇರಿ ರಾವ್ ಅಸೋಸಿಯೇಟ್ಸ್ ಉದ್ಘಾಟನೆ

Suddi Udaya

ಕಳೆಂಜ: ಶಿಬರಾಜೆಪಾದೆ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟ: ಸಂತ ತೆರೆಸಾ ಆಂ.ಮಾ. ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
error: Content is protected !!