July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ; ಮಚ್ಚಿನ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

ಮಚ್ಚಿನ: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆಬ್ರವರಿ 25 ರಿಂದ ಮಾರ್ಚ್ 1 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮವನ್ನು ಯಶಸ್ಸು ಗೊಳಿಸುವ ಬಗ್ಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಚ್ಚಿನ ಗ್ರಾಮದ ಭಕ್ತಾಭಿಮಾನಿಗಳ ಸಮಾಲೋಚನಾ ಸಭೆಯು ಫೆ.13 ರಂದು ಸಮುದಾಯ ಭವನ ಮಚ್ಚಿನದಲ್ಲಿ ನಡೆಯಿತು.

ಶ್ರೀ ಗುರು ನಾರಾಯಣ ಸೇವಾ ಸಂಘ ಬೆಳ್ತಂಗಡಿ ಇಲ್ಲಿಯ ನಿರ್ದೇಶಕರು, ಮಚ್ಚಿನ ಬಿಲ್ಲವ ಸಂಘ ದ ಅಧ್ಯಕ್ಷ ಗೋಪಾಲ ಪೂಜಾರಿ ಕೋಲಾಜೆಯವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿಯ ಸದಸ್ಯರೂ, ಬೆಳ್ತಂಗಡಿ ತಾಲೂಕಿನ ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ಪ್ರಾಸ್ತಾವಿಕವಾಗಿ ಮಾತನಾಡಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರಾ ಮಹೋತ್ಸವವನ್ನು ಯಶಸ್ಸು ಗೊಳಿಸುವ ಬಗ್ಗೆ ಹಾಗೂ ಕ್ಷೇತ್ರದಲ್ಲಿ ಆಗಲಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಿ ತಾಲೂಕಿನ ಭಕ್ತಾಭಿಮಾನಿಗಳನ್ನು ಶ್ರೀ ಕ್ಷೇತ್ರಕ್ಕೆ ಆಹ್ವಾನಿಸಿದರು. ವೇದಿಕೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಸದಸ್ಯ ನಾರಾಯಣ ಪೂಜಾರಿ ಮಚ್ಚಿನ, ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಿತಿಯ ವಲಯ ಸಂಚಾಲಕ ಪ್ರಮೋದ್ ಮಚ್ಚಿನ, ಗೆಜ್ಜೆಗಿರಿ ಗ್ರಾಮ ಸಮಿತಿ ಅಧ್ಯಕ್ಷ ಪುರಂದರ ಕುರುಡಂಗೆ, ಕಾರ್ಯದರ್ಶಿ ಸುಮಿತ್ ಬಳ್ಳಮಂಜ ಉಪಸ್ಥಿತರಿದ್ದರು. ಪ್ರಭಾಕರ ಮುದಲಡ್ಕ, ರಾಜೇಶ್ ಅರಮನೆಗುಡ್ಡೆ, ಸುನಿಲ್ ಕುಮಾರ್ ಕುರುಡಂಗೆ, ಗೋಪಾಲ ಪೂಜಾರಿ ಕೊಡಿಯೇಲ್, ವಸಂತ ಪೂಜಾರಿ ಕುಂಡಡ್ಕ, ಯಶೋಧರ ಕೋಟಿಯನ್, ಸಂಜೀವ ಪೂಜಾರಿ ಕಲ್ಲಿಮಾರ್, ರಮೇಶ ಕೋಡಿಯೇಲ್, ಪರಮೇಶ್ವರ್ ಬಳ್ಳಮಂಜ, ಹಾಗೂ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪ್ರಮೋದ್ ಕುಮಾರ್ ಸಂಯೋಜಿಸಿ ಗೋಪಾಲ್ ಪೂಜಾರಿ ಕೋಲಾಜೆ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಬುರುಡೆ ಪ್ರಕರಣ: ತನಿಖೆ ಮಾಡಿ ಅಂತಿಮ ವರದಿ ಸಲ್ಲಿಸಲು ಸೂಚನೆ

Suddi Udaya

ಮೆಸ್ಕಾಂ ನಿಗಮದ ಅಧ್ಯಕ್ಷರಾಗಿ ಕೆ ಹರೀಶ್ ಕುಮಾರ್

Suddi Udaya

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಮುಂಡಾಜೆ ಪ.ಪೂ. ಕಾಲೇಜು ವಿದ್ಯಾರ್ಥಿ ಕೆ.ಎನ್. ಧನುಷ್ ಆಯ್ಕೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಏಳನೇ ದಿನದ ಬ್ರಹ್ಮ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ, ಹೊಸ ಉತ್ಪನ್ನಗಳ ಪರಿಚಯದ ಸ್ಪರ್ಧಾ ಕಾರ್ಯಕ್ರಮ

Suddi Udaya

ಲಾಯಿಲ: ಪಡ್ಲಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ: ಅಧ್ಯಕ್ಷರಾಗಿ ಹರ್ಷಿತ್ ನಿನ್ನಿಕಲ್ಲು, ಕಾರ್ಯದರ್ಶಿ ವಿನಯ್, ಕೋಶಾಧಿಕಾರಿ ಹರೀಶ್ ಎಲ್.ಆಯ್ಕೆ

Suddi Udaya
error: Content is protected !!