ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ; ಮಚ್ಚಿನ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

ಮಚ್ಚಿನ: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆಬ್ರವರಿ 25 ರಿಂದ ಮಾರ್ಚ್ 1 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮವನ್ನು ಯಶಸ್ಸು ಗೊಳಿಸುವ ಬಗ್ಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಚ್ಚಿನ ಗ್ರಾಮದ ಭಕ್ತಾಭಿಮಾನಿಗಳ ಸಮಾಲೋಚನಾ ಸಭೆಯು ಫೆ.13 ರಂದು ಸಮುದಾಯ ಭವನ ಮಚ್ಚಿನದಲ್ಲಿ ನಡೆಯಿತು.

ಶ್ರೀ ಗುರು ನಾರಾಯಣ ಸೇವಾ ಸಂಘ ಬೆಳ್ತಂಗಡಿ ಇಲ್ಲಿಯ ನಿರ್ದೇಶಕರು, ಮಚ್ಚಿನ ಬಿಲ್ಲವ ಸಂಘ ದ ಅಧ್ಯಕ್ಷ ಗೋಪಾಲ ಪೂಜಾರಿ ಕೋಲಾಜೆಯವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿಯ ಸದಸ್ಯರೂ, ಬೆಳ್ತಂಗಡಿ ತಾಲೂಕಿನ ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ಪ್ರಾಸ್ತಾವಿಕವಾಗಿ ಮಾತನಾಡಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರಾ ಮಹೋತ್ಸವವನ್ನು ಯಶಸ್ಸು ಗೊಳಿಸುವ ಬಗ್ಗೆ ಹಾಗೂ ಕ್ಷೇತ್ರದಲ್ಲಿ ಆಗಲಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಿ ತಾಲೂಕಿನ ಭಕ್ತಾಭಿಮಾನಿಗಳನ್ನು ಶ್ರೀ ಕ್ಷೇತ್ರಕ್ಕೆ ಆಹ್ವಾನಿಸಿದರು. ವೇದಿಕೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಸದಸ್ಯ ನಾರಾಯಣ ಪೂಜಾರಿ ಮಚ್ಚಿನ, ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಿತಿಯ ವಲಯ ಸಂಚಾಲಕ ಪ್ರಮೋದ್ ಮಚ್ಚಿನ, ಗೆಜ್ಜೆಗಿರಿ ಗ್ರಾಮ ಸಮಿತಿ ಅಧ್ಯಕ್ಷ ಪುರಂದರ ಕುರುಡಂಗೆ, ಕಾರ್ಯದರ್ಶಿ ಸುಮಿತ್ ಬಳ್ಳಮಂಜ ಉಪಸ್ಥಿತರಿದ್ದರು. ಪ್ರಭಾಕರ ಮುದಲಡ್ಕ, ರಾಜೇಶ್ ಅರಮನೆಗುಡ್ಡೆ, ಸುನಿಲ್ ಕುಮಾರ್ ಕುರುಡಂಗೆ, ಗೋಪಾಲ ಪೂಜಾರಿ ಕೊಡಿಯೇಲ್, ವಸಂತ ಪೂಜಾರಿ ಕುಂಡಡ್ಕ, ಯಶೋಧರ ಕೋಟಿಯನ್, ಸಂಜೀವ ಪೂಜಾರಿ ಕಲ್ಲಿಮಾರ್, ರಮೇಶ ಕೋಡಿಯೇಲ್, ಪರಮೇಶ್ವರ್ ಬಳ್ಳಮಂಜ, ಹಾಗೂ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪ್ರಮೋದ್ ಕುಮಾರ್ ಸಂಯೋಜಿಸಿ ಗೋಪಾಲ್ ಪೂಜಾರಿ ಕೋಲಾಜೆ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಭೆ

Suddi Udaya

ಕುವೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಹರಿದ ನೀರು

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬಂಗ್ವಾಡಿ ಬಸದಿ ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ಮಹಾರಥೋತ್ಸವ: ಧ್ವಜಾರೋಹಣ

Suddi Udaya

ಎಕ್ಸೆಲ್ ನಲ್ಲಿ ‘ತುಳು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ’ ವಿಚಾರ ಸಂಕಿರಣ

Suddi Udaya
error: Content is protected !!