September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

ಬೆಳ್ತಂಗಡಿ : ಫೋಕ್ಸೋ ಪ್ರಕರಣದಲ್ಲಿ ಸುಮಾರು ಹತ್ತು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿ ಜೈಲಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2012 ರಲ್ಲಿ ನಡೆದಿದ್ದ ಫೋಕ್ಸೋ ಪ್ರಕರಣದಲ್ಲಿ ಆರೋಪಿ ಬಂಧನವಾದ ಬಳಿಕ ಬಿಡುಗಡೆಯಾಗಿ ಮಂಗಳೂರು ನ್ಯಾಯಾಲಯಕ್ಕೆ ಹಾಜರಾಗಿ, 2015 ರಿಂದ ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮದ ಕವಲಿಗುಡ್ಡೆ ಮನೆಯ ಯೋಗೀಶ್ ಪೂಜಾರಿ(35) ಎಂಬಾತನನ್ನು ವೇಣೂರು ಪೊಲೀಸರು ಫೆ.13 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ನಾಗನೂರು ಗ್ರಾಮದಲ್ಲಿ ಬಂಧಿಸಿ FTSC-1 (POCSO) ಮಂಗಳೂರು ನ್ಯಾಯಾಧಿಸರ ಮುಂದೆ ಫೆ.14 ರಂದು ಹಾಜರುಪಡಿಸಿ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ರೋಹಿಣಿ.ಸಿ.ಕೆ ಮತ್ತು ವೃತ್ತ ನಿರೀಕ್ಷಕ ರವಿ ಬಿ.ಎಸ್ ಮಾರ್ಗದರ್ಶನದಲ್ಲಿ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ ಢವಗಿ ಮತ್ತು ಓಮನ ರವರ ನೇತೃತ್ವದ ಸಿಬ್ಬಂದಿ ಎಎಸ್ಐ ಬೆಣ್ಣಿಚನ್, ಬಸವರಾಜ ಮತ್ತು ಮೋಹನ ರವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಪ್ರದೀಶ್ ಮಾರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ಸೆ.28: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಂಡಿಕಾಯಾಗ-ಸತ್ಯದರ್ಶನ

Suddi Udaya

ನಿಡ್ಲೆ : ಕಾಟ್ಲಾ ನಿವಾಸಿ ಅನ್ನಪೂರ್ಣ ಜೋಶಿ ನಿಧನ

Suddi Udaya

ನಾರಾವಿ: ಶ್ರೀ ಸೂರ್ಯ ಫ್ರೆಂಡ್ಸ್ ಮಂಚಕಲ್ಲುಇದರ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆ.14: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ಅರಿವಿನ ದೀವಿಗೆ ಉಪನ್ಯಾಸ

Suddi Udaya

ಗುರಿಪಳ್ಳ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗಿಡನಾಟಿ, ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!