September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

ಬೆಳ್ತಂಗಡಿ : ಫೋಕ್ಸೋ ಪ್ರಕರಣದಲ್ಲಿ ಸುಮಾರು ಹತ್ತು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿ ಜೈಲಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2012 ರಲ್ಲಿ ನಡೆದಿದ್ದ ಫೋಕ್ಸೋ ಪ್ರಕರಣದಲ್ಲಿ ಆರೋಪಿ ಬಂಧನವಾದ ಬಳಿಕ ಬಿಡುಗಡೆಯಾಗಿ ಮಂಗಳೂರು ನ್ಯಾಯಾಲಯಕ್ಕೆ ಹಾಜರಾಗಿ, 2015 ರಿಂದ ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮದ ಕವಲಿಗುಡ್ಡೆ ಮನೆಯ ಯೋಗೀಶ್ ಪೂಜಾರಿ(35) ಎಂಬಾತನನ್ನು ವೇಣೂರು ಪೊಲೀಸರು ಫೆ.13 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ನಾಗನೂರು ಗ್ರಾಮದಲ್ಲಿ ಬಂಧಿಸಿ FTSC-1 (POCSO) ಮಂಗಳೂರು ನ್ಯಾಯಾಧಿಸರ ಮುಂದೆ ಫೆ.14 ರಂದು ಹಾಜರುಪಡಿಸಿ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ರೋಹಿಣಿ.ಸಿ.ಕೆ ಮತ್ತು ವೃತ್ತ ನಿರೀಕ್ಷಕ ರವಿ ಬಿ.ಎಸ್ ಮಾರ್ಗದರ್ಶನದಲ್ಲಿ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ ಢವಗಿ ಮತ್ತು ಓಮನ ರವರ ನೇತೃತ್ವದ ಸಿಬ್ಬಂದಿ ಎಎಸ್ಐ ಬೆಣ್ಣಿಚನ್, ಬಸವರಾಜ ಮತ್ತು ಮೋಹನ ರವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ. 65ಲಕ್ಷ ಲಾಭ, ಶೇ.15 ಡಿವಿಡೆಂಟ್

Suddi Udaya

ಎಕ್ಸಲೆಂಟ್ ಸಂಸ್ಥೆಯಲ್ಲಿ ನವರಾತ್ರಿ ನವಶಕ್ತಿ ಸನ್ಮಾನ ಕಾರ‍್ಯಕ್ರಮ

Suddi Udaya

ಉಜಿರೆ: ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ತೆನೆ ಹಬ್ಬ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಭಜನಾ ಮಂದಿರಕ್ಕೆ ಸಹಾಯಧನ

Suddi Udaya
error: Content is protected !!