July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ : KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್ : ಬೆಂಕಿ ಕೆನ್ನಾ ‌ಲಿಗೆ ಸುಟ್ಟು ಭಸ್ಮವಾದ ವಸ್ತುಗಳು

ಬೆಳ್ತಂಗಡಿ : ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಬ್ಲಾಸ್ಟ್ ಆಗಿ ಉಂಟಾದ ಬೆಂಕಿಯಿಂದ ಅಂಗಡಿ ಸುಟ್ಟು ಭಸ್ಮವಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿರುವ ಹೇರಾಜೆ ಕಾಂಪ್ಲೆಕ್ಸ್ ನಲ್ಲಿ ಮೊದಲ ಮಹಡಿಯ ಮೊಹಮ್ಮದ್ ಸಮೀಲ್ ಎಂಬವರ ಮಾಲೀಕತ್ವದ KAF ಕ್ರಿಯೇಟಿವ್ ಅರ್ಟ್ & ಕ್ರಾಫ್ಟ್ ಸ್ಟೋರ್ ನಲ್ಲಿ ಇಬ್ಬರು ಕೆಲಸದವರು ಫೆ.14 ರಂದು ಬೆಳಗ್ಗೆ 7:30 ಕ್ಕೆ ಕಾರ್ಯಕ್ರಮವೊಂದಕ್ಕೆ ಬಲೂನ್ ಗಳಿಗೆ ಗ್ಯಾಸ್ ತುಂಬಿಸುವಾಗ ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಬ್ಲಾಸ್ಟ್ ಆಗಿ ಬೆಂಕಿ ಉಂಟಾಗಿ ಸಂಪೂರ್ಣ ಸುಟ್ಟು ಹೋಗಿದೆ.

ಘಟನೆ ವೇಳೆ ಅಂಗಡಿಯೊಳಗೆ ಇಬ್ಬರು ಕೆಲಸದವರು ಇದ್ದು ತಕ್ಷಣ ಹೊರಗಡೆ ಓಡಿ ಬಂದಿದ್ದಾರೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಸೇರಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಬೆಂಕಿ ಕೆನ್ನಲಿಗೆ ಅಕ್ಕಪಕ್ಕದ ಶಾಪ್ ಗಳಿಗೂ ಹಾನಿಯಾಗಿದೆ. ಗ್ಯಾಸ್ ಸೋರಿಕೆಯಿಂದ ಯಾವುದೇ ಬಹು ದೊಡ್ಡ ಅನಾಹುತ ಉಂಟಾಗಿಲ್ಲ.

ಘಟನೆಯನ್ನು ನೋಡಲು ನೂರಾರು ಮಂದಿ ಜಾಮಾಯಿಸಿದ್ದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗಿದ್ದು ತಕ್ಷಣ ಬೆಳ್ತಂಗಡಿ ಪೊಲೀಸರು ಮತ್ತು ಸಂಚಾರಿ ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಇದೆ ವೇಳೆ ಬೆಂಕಿ ಹೊತ್ತುವ ಘಟನೆಯನ್ನು ನೋಡುತ್ತಿದ್ದ ಶಾಪ್ ಕೆಲಸದಾಕೆ ಮೂರ್ಛೆ ಹೋದ ಘಟನೆ ನಡೆಯಿತು ಬಳಿಕ ಸ್ಥಳೀಯರೆಲ್ಲ ಸೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ:

Suddi Udaya

6ನೇ ಏಷ್ಯನ್ ಯೋಗಾಸನ ಚಾಂಪಿಯನ್‌ಶಿಪ್ 2025 : ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಆಹ್ವಾನ

Suddi Udaya

ಮಿತ್ತಬಾಗಿಲು: ಹೆಚ್ಚಿದ ಕಾಡಾನೆ ಹಾವಳಿ: ಗ್ರಾಮಸ್ಥರಲ್ಲಿ ಆತಂಕ

Suddi Udaya

ಧರ್ಮಸ್ಥಳ ಗ್ರಾ.ಪಂ ಗೆ ಎಸ್.ಐ.ಟಿ ಎಂಟ್ರಿ : ಕರ್ತವ್ಯ ನಿರ್ವಹಿಸುತ್ತಿದವರ ವಿವರ ಪಡೆದ ಎಸ್.ಐ.ಟಿ

Suddi Udaya

ಗುರುವಾಯನಕೆರೆ: ಅನಾರೋಗ್ಯದಿಂದ ಬಳಲುತ್ತಿರುವ ಆಟೋ ಚಾಲಕ ರಾಜೇಶ್ ಪೂಜಾರಿಯವರಿಗೆ ಕುವೆಟ್ಟು ಬಿಜೆಪಿ ಶಕ್ತಿ ಕೇಂದ್ರ ಹಾಗೂ ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ವತಿಯಿಂದ ರೂ. 25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಮಾಜಿ ಶಾಸಕರಾದ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!