ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ : KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್ : ಬೆಂಕಿ ಕೆನ್ನಾ ‌ಲಿಗೆ ಸುಟ್ಟು ಭಸ್ಮವಾದ ವಸ್ತುಗಳು

ಬೆಳ್ತಂಗಡಿ : ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಬ್ಲಾಸ್ಟ್ ಆಗಿ ಉಂಟಾದ ಬೆಂಕಿಯಿಂದ ಅಂಗಡಿ ಸುಟ್ಟು ಭಸ್ಮವಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿರುವ ಹೇರಾಜೆ ಕಾಂಪ್ಲೆಕ್ಸ್ ನಲ್ಲಿ ಮೊದಲ ಮಹಡಿಯ ಮೊಹಮ್ಮದ್ ಸಮೀಲ್ ಎಂಬವರ ಮಾಲೀಕತ್ವದ KAF ಕ್ರಿಯೇಟಿವ್ ಅರ್ಟ್ & ಕ್ರಾಫ್ಟ್ ಸ್ಟೋರ್ ನಲ್ಲಿ ಇಬ್ಬರು ಕೆಲಸದವರು ಫೆ.14 ರಂದು ಬೆಳಗ್ಗೆ 7:30 ಕ್ಕೆ ಕಾರ್ಯಕ್ರಮವೊಂದಕ್ಕೆ ಬಲೂನ್ ಗಳಿಗೆ ಗ್ಯಾಸ್ ತುಂಬಿಸುವಾಗ ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಬ್ಲಾಸ್ಟ್ ಆಗಿ ಬೆಂಕಿ ಉಂಟಾಗಿ ಸಂಪೂರ್ಣ ಸುಟ್ಟು ಹೋಗಿದೆ.

ಘಟನೆ ವೇಳೆ ಅಂಗಡಿಯೊಳಗೆ ಇಬ್ಬರು ಕೆಲಸದವರು ಇದ್ದು ತಕ್ಷಣ ಹೊರಗಡೆ ಓಡಿ ಬಂದಿದ್ದಾರೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಸೇರಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಬೆಂಕಿ ಕೆನ್ನಲಿಗೆ ಅಕ್ಕಪಕ್ಕದ ಶಾಪ್ ಗಳಿಗೂ ಹಾನಿಯಾಗಿದೆ. ಗ್ಯಾಸ್ ಸೋರಿಕೆಯಿಂದ ಯಾವುದೇ ಬಹು ದೊಡ್ಡ ಅನಾಹುತ ಉಂಟಾಗಿಲ್ಲ.

ಘಟನೆಯನ್ನು ನೋಡಲು ನೂರಾರು ಮಂದಿ ಜಾಮಾಯಿಸಿದ್ದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗಿದ್ದು ತಕ್ಷಣ ಬೆಳ್ತಂಗಡಿ ಪೊಲೀಸರು ಮತ್ತು ಸಂಚಾರಿ ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಇದೆ ವೇಳೆ ಬೆಂಕಿ ಹೊತ್ತುವ ಘಟನೆಯನ್ನು ನೋಡುತ್ತಿದ್ದ ಶಾಪ್ ಕೆಲಸದಾಕೆ ಮೂರ್ಛೆ ಹೋದ ಘಟನೆ ನಡೆಯಿತು ಬಳಿಕ ಸ್ಥಳೀಯರೆಲ್ಲ ಸೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Related posts

ದ.ಕ ಜಿಲ್ಲಾ ಎಂಆರ್‌ಡಬ್ಲ್ಯೂ , ವಿಆರ್‌ಡಬ್ಲ್ಯೂ , ಯುಆರ್‌ಡಬ್ಲ್ಯೂ ವಿಕಲಚೇತನರ ಗೌರವಧನದ ಕಾರ್ಯಕರ್ತರ ಸಂಘ ರಚನೆ

Suddi Udaya

ನಾರಾವಿ: ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನಲ್ಲಿ ವನಮಹೋತ್ಸವ

Suddi Udaya

ಡಿ.19: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ (ನಿ.) ವಾರ್ಷಿಕ ಸಾಮಾನ್ಯ ಸಭೆ ಹಾಗೂ ನೂತನ ಕಟ್ಟಡದ ಉದ್ಘಾಟನೆ

Suddi Udaya

ವೇಣೂರು ಎಕ್ಸೆಲ್ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಕ್ರೀಡಾಕೂಟ-ಕ್ರೀಡೆ ದೈಹಿಕ–ಮಾನಸಿಕ ಕ್ಷಮತೆ ಹೆಚ್ಚಿಸುತ್ತದೆ: ಸುಮಂತ್ ಕುಮಾರ್ ಜೈನ್

Suddi Udaya

ಬೆಳ್ತಂಗಡಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘದಿಂದ ಕೆ. ವಸಂತ ಬಂಗೇರ ರವರಿಗೆ ಗೌರವಾರ್ಪಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿ ತಾಲೂಕಿನ ಹಲವು ಕಡೆ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!