22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಗಳಿ ಪರಿಸರದಲ್ಲಿ ಚಿರತೆ ಓಡಾಟ

ಬೆಳ್ತಂಗಡಿ: ನಡ ಮತ್ತು ಲಾಯಿಲ ಗ್ರಾಮದ ಗಡಿ ಭಾಗವಾದ ಅಗಳಿಯ ಹೇನಡ್ಕ ಪರಿಸರದಲ್ಲಿ ಶನಿವಾರ ರಾತ್ರಿ ಚಿರತೆ ತಿರುಗಾಟ ನಡೆಸಿದೆ. ಒಂದು ದೊಡ್ಡ ಚಿರತೆ ಹಾಗೂ ಮರಿ ಚಿರತೆ ಸಂಚರಿಸಿರುವ ಹೆಜ್ಜೆಗಳು ರಸ್ತೆಯಲ್ಲಿ ಕಂಡು ಬಂದಿವೆ.

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಸುಮಾರು 150ಮೀ. ದೂರದಲ್ಲಿ ಹಾಗೂ ಸ್ಥಳೀಯ ಮನೆಗಳಿಂದ 50 ಮೀ.ಪ್ರದೇಶದಲ್ಲಿ ಚಿರತೆ ಸಂಚಾರ ನಡೆಸಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಪರಿಸರದಲ್ಲಿ ಆಗಾಗ ಚಿರತೆಗಳು ತಿರುಗಾಟ ನಡೆಸುವುದು ಮಾಮೂಲಾಗಿದೆ. ಸ್ಥಳೀಯವಾಗಿ ಸಾಕು ನಾಯಿಗಳನ್ನು ಗೂಡಿನಿಂದ ಬಿಡುವಂತಿಲ್ಲ. ಜಾನುವಾರುಗಳ ರಕ್ಷಣೆಯು ಸವಾಲಾಗಿ ಪರಿಣಮಿಸಿದೆ.15ಎಂಜೆ ಅಗಳಿಚಿತ್ರ ವಿವರ-ಅಗಳಿ ಪರಿಸರದ ರಸ್ತೆಯಲ್ಲಿ ಕಂಡು ಬಂದ ಚಿರತೆ ಹೆಜ್ಜೆ.

Related posts

ಕೊಕ್ಕಡ: ಬೋಳದಬೈಲು ಅಂಗನವಾಡಿ ಕಾರ್ಯಕರ್ತೆ ಸಂಗೀತಾ ನಿಧನ

Suddi Udaya

ಬೆಳ್ತಂಗಡಿಗೆ ಉಪರಾಷ್ಟ್ರಪತಿ ಭೇಟಿ ಹಿನ್ನಲೆ ಡಿಸಿ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ

Suddi Udaya

ಬೆಳ್ತಂಗಡಿ: ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ 50ನೇ ವರ್ಷದ ಉದ್ಘಾಟನೆ

Suddi Udaya

ಜೂ. 22 ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ವಿದುಷಿ ಕು| ಚೈತ್ರ ಭಟ್ ಭರತನಾಟ್ಯ ರಂಗಪ್ರವೇಶ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ ಲೈನ್ ಮಂಜೊಟ್ಟಿ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಶಮ್ಮಾಝ್ ಶರೀಫ್ ತೃತೀಯ ಸ್ಥಾನ

Suddi Udaya
error: Content is protected !!