September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

ಧರ್ಮಸ್ಥಳ: “ಸರ್ವೇಜನಾಃ ಸುಖಿನೋ ಭವಂತು”. ಎಲ್ಲರಿಗೂ ಸುಖ-ಶಾಂತಿ, ನೆಮ್ಮದಿಯೊಂದಿಗೆ ಸನ್ಮಂಗಳವಾಗಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸರ್ವರಿಗೂ ಕಲ್ಯಾಣವಾಗಲಿ ಎಂದು ಹಾರೈಸಿದರು.ಅವರು ಭಾನುವಾರ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ದೀಪಬೆಳಗಿಸಿ ಚಾಲನೆ ನೀಡಿ ಶುಭ ಹಾರೈಸಿದರು.

ಬಳಿಕ ಎಲ್ಲರೂ ಸಾಮೂಹಿಕವಾಗಿ “ಓಂ ನಮಃ ಶಿವಾಯ” ಪಠಣ ಮಾಡಿದರು.ಎಲ್ಲರೂ ಶ್ರದ್ಧಾ-ಭಕ್ತಿಯಿಂದ ಪಾದಯಾತ್ರೆಯಲ್ಲಿ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ, ಪ್ರಾರ್ಥನೆ ಸಲ್ಲಿಸಿ ಧನ್ಯತೆಯನ್ನು ಹೊಂದಿರುವಿರಿ. ನಿಮ್ಮ ಎಲ್ಲಾ ಕಷ್ಟಗಳನ್ನು ಶಿವನಿಗೆ ಅರ್ಪಿಸಿ, ಸುವಿಚಾರಗಳನ್ನು ಮಾತ್ರ ಕೊಂಡು ಹೋಗಿ. ವಿಷಕಂಠನಾದ ಶಿವನಿಗೆ ಮಾತ್ರ ಹಾಲಾಹಲ ಸ್ವೀಕರಿಸುವ ಸಾಮರ್ಥ್ಯವಿದೆ. ನನಗೆ ಎಂದು ವೈಯಕ್ತಿಕವಾಗಿ ಸುಖಕ್ಕಾಗಿ ಪ್ರಾರ್ಥಿಸುವ ಬದಲು ನಮಗೆ, ಇಡಿ ಸಮಾಜಕ್ಕೆ ಕಲ್ಯಾಣವಾಗಲಿ ಎಂಬ ಪ್ರಾರ್ಥನೆ ನಿಮ್ಮದಾಗಲಿ ಎಂದು ಹೇಳಿ ಅವರು ಶುಭ ಹಾರೈಸಿದರು.ಪಾದಯಾತ್ರೆಯ ರೂವಾರಿ ಗುರು ಹನುಮಂತಪ್ಪ ಮತ್ತು ಮರಿಯಪ್ಪನವರ ನೇತೃತ್ವದಲ್ಲಿ ಏಳು ಮಂದಿಯೊAದಿಗೆ ಪ್ರಾರಂಭವಾದ ಪಾದಯಾತ್ರೆ ಇಂದು ಎಪ್ಪತ್ತು ಸಾವಿರ ಮಂದಿ ಪಾದಯಾತ್ರಿಗಳು ಬೆಂಗಳೂರು ಮತ್ತು ಮೊದಲಾದ ಕಡೆಗಳಿಂದ ಶನಿವಾರ ಧರ್ಮಸ್ಥಳಕ್ಕೆ ಬಂದಿದ್ದರು.ಎಲ್ಲರಿಗೂ ಶ್ರೀ ಸ್ವಾಮಿಯ ದರ್ಶನ, ಸೇವೆಯ ಫಲ ದೊರೆತು ಲೋಕಕಲ್ಯಾಣವಾಗಲಿ ಎಂದು ಹೆಗ್ಗಡೆಯವರು ಹಾರೈಸಿದರು.ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರಕುಮಾರ್, ಸುಪ್ರಿಯಾಹರ್ಷೇಂದ್ರಕುಮಾರ್ ಉಪಸ್ಥಿತರಿದ್ದು ಶಿವಪಂಚಾಕ್ಷರಿ ಪಠಣದಲ್ಲಿ ಭಾಗವಹಿಸಿದರು.ಮಾಣಿಲದ ಮೋಹನದಾಸ ಸ್ವಾಮೀಜಿ, ಪಾದಯಾತ್ರೆಯ ರೂವಾರಿ ಗುರು ಹನುಮಂತಪ್ಪ ಸ್ವಾಮೀಜಿ ಮತ್ತು ಮರಿಯಪ್ಪ ಕೂಡಾ ಉಪಸ್ಥಿತರಿದ್ದರು.

ಶ್ರೀನಿವಾಸ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು. ಅಹೋರಾತ್ರಿ ಶಿವಪಂಚಾಕ್ಷರಿ ಪಠಣ ನಡೆಯಿತು. ಭಕ್ತರು ದೇವರದರ್ಶನ ಮಾಡಿ ವಿಶೇಷವಾಗಿ ಎಳನೀರಿನ ಅಭಿಷೇಕ ಮತ್ತು ಶತರುದ್ರಾಭಿಷೇಕ ಸೇವೆ ಸಲ್ಲಿಸಿ ಧನ್ಯತೆಯನ್ನು ಹೊಂದಿದರು.ದೇವಳ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ರಾವ್, ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಉಪಸ್ಥಿರಿದ್ದು ಸಮಾರಂಭದ ಯಶಸ್ವಿಗೆ ಸಹಕರಿಸಿದರು.

Related posts

ಜ.30: ವೇಣೂರುನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಎಸ್,ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಮೂರನೇ ಸ್ಥಾನ ಪಡೆದ ಸುಪ್ರಿಯಾ ಎಸ್ ಇವರನ್ನು ಮೂಡುಕೋಡಿ ಬಿಲ್ಲವ ಸಂಘ ಮತ್ತು ವೇಣೂರು ಯುವವಾಹಿನಿ ಘಟಕದ ವತಿಯಿಂದ ಸನ್ಮಾನ

Suddi Udaya

ಕೊಕ್ಕಡ ಗ್ರಾಮದ ರೈತರ ವತಿಯಿಂದ ಶ್ರೀ ಸೌತಡ್ಕ ಮಹಾಗಣಪತಿ ದೇವರಿಗೆ 24 ಅಗೇಲು ರಂಗ ಪೂಜೆ

Suddi Udaya

ತೋಟತ್ತಾಡಿ : ಪದವಿ ವಿದ್ಯಾರ್ಥಿ ಜಯರಾಮ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾ ಗಣೇಶ ಸಭಾ ಭವನದ ಲೋಕಾಪ೯ಣೆ:ಮೈಸೂರು ಸಂಸ್ಥಾನದ ಮಹಾರಾಜರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಿಂದ ದೀಪ ಪ್ರಜ್ವಲನೆ – ಗಣ್ಯರ ಉಪಸ್ಥಿತಿ

Suddi Udaya

ಬಳoಜ -ತೆಂಕಕಾರಂದೂರು- ನಾಲ್ಕೂರು ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya
error: Content is protected !!