24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಗಳಿ ಪರಿಸರದಲ್ಲಿ ಚಿರತೆ ಓಡಾಟ

ಬೆಳ್ತಂಗಡಿ: ನಡ ಮತ್ತು ಲಾಯಿಲ ಗ್ರಾಮದ ಗಡಿ ಭಾಗವಾದ ಅಗಳಿಯ ಹೇನಡ್ಕ ಪರಿಸರದಲ್ಲಿ ಶನಿವಾರ ರಾತ್ರಿ ಚಿರತೆ ತಿರುಗಾಟ ನಡೆಸಿದೆ. ಒಂದು ದೊಡ್ಡ ಚಿರತೆ ಹಾಗೂ ಮರಿ ಚಿರತೆ ಸಂಚರಿಸಿರುವ ಹೆಜ್ಜೆಗಳು ರಸ್ತೆಯಲ್ಲಿ ಕಂಡು ಬಂದಿವೆ.

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಸುಮಾರು 150ಮೀ. ದೂರದಲ್ಲಿ ಹಾಗೂ ಸ್ಥಳೀಯ ಮನೆಗಳಿಂದ 50 ಮೀ.ಪ್ರದೇಶದಲ್ಲಿ ಚಿರತೆ ಸಂಚಾರ ನಡೆಸಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಪರಿಸರದಲ್ಲಿ ಆಗಾಗ ಚಿರತೆಗಳು ತಿರುಗಾಟ ನಡೆಸುವುದು ಮಾಮೂಲಾಗಿದೆ. ಸ್ಥಳೀಯವಾಗಿ ಸಾಕು ನಾಯಿಗಳನ್ನು ಗೂಡಿನಿಂದ ಬಿಡುವಂತಿಲ್ಲ. ಜಾನುವಾರುಗಳ ರಕ್ಷಣೆಯು ಸವಾಲಾಗಿ ಪರಿಣಮಿಸಿದೆ.15ಎಂಜೆ ಅಗಳಿಚಿತ್ರ ವಿವರ-ಅಗಳಿ ಪರಿಸರದ ರಸ್ತೆಯಲ್ಲಿ ಕಂಡು ಬಂದ ಚಿರತೆ ಹೆಜ್ಜೆ.

Related posts

ರಾಷ್ಟ್ರೀಯ ಯೋಗಾಸನ ಕ್ರೀಡಾ ಒಕ್ಕೂಟದ ಉಪಾಧ್ಯಕ್ಷರಾಗಿ ಡಾ. ಐ. ಶಶಿಕಾಂತ ಜೈನ್

Suddi Udaya

ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಆನಂದ, ಕಾರ್ಯದರ್ಶಿಯಾಗಿ ಸಂದೀಪ್ ಆಯ್ಕೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ನಾವೂರು: ಮುರ ಮದರಸದಲ್ಲಿ ಮಾದಕ ದ್ರವ್ಯ ವಿರುದ್ಧದ ಅಭಿಯಾನ ಹಾಗೂ ಸ್ನೇಹ ಸಹವಾಸ ಶಿಬಿರ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ಅಗಲುವಿಕೆಗೆ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಹರೀಶ್ ಎಳನೀರ್ ಸಂತಾಪ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!