23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಉಪ್ಪಾರಪಳಿಕೆ-ಉಪ್ಪಾರಹಳ್ಳ ರಸ್ತೆಗೆ ಕಾಂಕ್ರೀಟ್ ಹಾಕಿ ಶ್ರಮದಾನ

ಕೊಕ್ಕಡ :ಕೊಕ್ಕಡ ಗ್ರಾಮದ ಉಪ್ಪಾರಪಳಿಕೆಯಿಂದ ಗೋಳಿತೊಟ್ಟು ಜಿಲ್ಲಾ ಪಂಚಾಯತ್ ರಸ್ತೆ ಉಪ್ಪಾರಹಳ್ಳದವರೆಗೆ ರಸ್ತೆಯಲ್ಲಿ ಉಂಟಾಗಿದ್ದ ದೊಡ್ಡ ದೊಡ್ಡ ಹೊಂಡಗಳನ್ನು ಕಾಂಕ್ರೀಟ್ ಹಾಕಿ ಮುಚ್ಚಲಾಯಿತು ಹಾಗೂ ರಸ್ತೆಯ ಬದಿಯ ಗಿಡಗoಟಿಗಳ ತೆರವು ಕಾರ್ಯವನ್ನು ಫೆ. 15ರಂದು ಶ್ರಮದಾನದ ಮೂಲಕ ಮಾಡಲಾಯಿತು.

ಶ್ರದ್ದಾ ಗೆಳೆಯರ ಬಳಗ ಉಪ್ಪಾರಪಳಿಕೆ, ಶ್ರೀಕೃಷ್ಣ ಭಜನಾ ಮಂದಿರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಅಮೃತ ಗ್ರಾಮ ಪಂಚಾಯತ್ ಕೊಕ್ಕಡ ಹಾಗೂ ದಾನಿಗಳ ಸಹಕಾರದಲ್ಲಿ ಶ್ರಮದಾನವು ನಡೆಯಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪರಮೇಶ್ವರ್, ಶ್ರೀ ಕಲ್ಕೂಡ ಕಲ್ಲುರ್ಟಿ ಗ್ರಾಮ ದೈವಸ್ಥಾನ ಕೆಂಪಕೋಡಿ ಟ್ರಸ್ಟ್ ಅಧ್ಯಕ್ಷರು ನಾರಾಯಣ ಗೌಡ ಆಳಂಬಿಲ, ಕಾರ್ಯದರ್ಶಿ ಜಗದೀಶ್ ಕೆಂಪಕೋಡಿ ಉಪಸ್ಥಿತರಿದ್ದು ಶುಭ ಹಾರೈಸಿದರು.

ಕಾಂಕ್ರೀಟ್ ಕಾಮಗಾರಿಗೆ ವಾಹನ ವನ್ನು ಶ್ರೀಕಾಂತ್ ಬಡೆಕಾಯಿಲ್ ಹಾಗೂ ಶ್ರೀಪಾದ್ ಬಡೆಕಾಯಿಲ್ ನೀಡಿದರು. ಅನ್ನದಾನದ ವ್ಯವಸ್ಥೆಗೆ ಜಯಪ್ರಕಾಶ್ ಕಲ್ಲಡ್ಕ ದೇರಾಜೆ ರೆಂಜೆರ್ ಮಂಗಳೂರು ಸಹಕರಿಸಿದರು.

ಈ ಸಂದರ್ಭ ಶ್ರೀಕೃಷ್ಟ ಭಜನಾ ಮಂದಿರ ಸೇವಾ ಟ್ರಸ್ಟ್ ಗೌರವಾಧ್ಯಕ್ಷ ಯೋಗೀಶ್ ಆಳಂಬಿಲ, ಅಧ್ಯಕ್ಷ ಶ್ರೀನಾಥ್ ಬಡೆಕಾಯಿಲ್ ಹಾಗೂ ಪದಾಧಿಕಾರಿಗಳು, ಸದಸ್ಯರು, ಶ್ರದ್ದಾ ಗೆಳೆಯರ ಬಳಗದ ಅಧ್ಯಕ್ಷ ಜೀವನ್ ಕೊಡಿಗೇoರಿ, ಕಾರ್ಯದರ್ಶಿ ಶ್ರೀಪಾದ್ ಬಡೆಕಾಯಿಲು ಹಾಗೂ ಪದಾಧಿಕಾರಿಗಳು, ಸದಸ್ಯರು, ಭಜನಾ ಮಂದಿರ ಪ್ರಾರಂಭೋತ್ಸವ ಸಮಿತಿ ಕಾರ್ಯದರ್ಶಿ ಶಿವಾನಂದ ಸಂಕೇಶ ಉಪಸ್ಥಿತರಿದ್ದು, ಸಹಕರಿಸಿದರು.

Related posts

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಸುಲ್ಕೇರಿಮೊಗ್ರು ಸ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ: ನೂತನ ಸಮಿತಿ ರಚನೆ

Suddi Udaya

ನೆರಿಯ ಅರ್ಬಿಬೊಟ್ಟುನಲ್ಲಿ ಕುಸಿಯುವ ಹಂತದಲ್ಲಿರುವ ಕಿರುಸೇತುವೆ

Suddi Udaya

ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ: ಶ್ರೀ ಮಂಜುನಾಥ ಸ್ವಾಮಿ ದಶ೯ನ

Suddi Udaya

ಶಿಶಿಲ: ಹೊಸಕಟ್ಟೆಯಲ್ಲಿ ಪ್ರತ್ಯಕ್ಷಗೊಂಡ ಕಾಡಾನೆ

Suddi Udaya

ಮುಂಡಾಜೆಯಲ್ಲಿ ಯುವವಾಹಿನಿ ಬಿರುವೆರೆ ಗೊಬ್ಬು ಕೆಸರ್ ದ ಕಂಡಡ್ ಕಾರ್ಯಕ್ರಮ

Suddi Udaya
error: Content is protected !!