32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

ಧರ್ಮಸ್ಥಳ: “ಸರ್ವೇಜನಾಃ ಸುಖಿನೋ ಭವಂತು”. ಎಲ್ಲರಿಗೂ ಸುಖ-ಶಾಂತಿ, ನೆಮ್ಮದಿಯೊಂದಿಗೆ ಸನ್ಮಂಗಳವಾಗಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸರ್ವರಿಗೂ ಕಲ್ಯಾಣವಾಗಲಿ ಎಂದು ಹಾರೈಸಿದರು.ಅವರು ಭಾನುವಾರ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ದೀಪಬೆಳಗಿಸಿ ಚಾಲನೆ ನೀಡಿ ಶುಭ ಹಾರೈಸಿದರು.

ಬಳಿಕ ಎಲ್ಲರೂ ಸಾಮೂಹಿಕವಾಗಿ “ಓಂ ನಮಃ ಶಿವಾಯ” ಪಠಣ ಮಾಡಿದರು.ಎಲ್ಲರೂ ಶ್ರದ್ಧಾ-ಭಕ್ತಿಯಿಂದ ಪಾದಯಾತ್ರೆಯಲ್ಲಿ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ, ಪ್ರಾರ್ಥನೆ ಸಲ್ಲಿಸಿ ಧನ್ಯತೆಯನ್ನು ಹೊಂದಿರುವಿರಿ. ನಿಮ್ಮ ಎಲ್ಲಾ ಕಷ್ಟಗಳನ್ನು ಶಿವನಿಗೆ ಅರ್ಪಿಸಿ, ಸುವಿಚಾರಗಳನ್ನು ಮಾತ್ರ ಕೊಂಡು ಹೋಗಿ. ವಿಷಕಂಠನಾದ ಶಿವನಿಗೆ ಮಾತ್ರ ಹಾಲಾಹಲ ಸ್ವೀಕರಿಸುವ ಸಾಮರ್ಥ್ಯವಿದೆ. ನನಗೆ ಎಂದು ವೈಯಕ್ತಿಕವಾಗಿ ಸುಖಕ್ಕಾಗಿ ಪ್ರಾರ್ಥಿಸುವ ಬದಲು ನಮಗೆ, ಇಡಿ ಸಮಾಜಕ್ಕೆ ಕಲ್ಯಾಣವಾಗಲಿ ಎಂಬ ಪ್ರಾರ್ಥನೆ ನಿಮ್ಮದಾಗಲಿ ಎಂದು ಹೇಳಿ ಅವರು ಶುಭ ಹಾರೈಸಿದರು.ಪಾದಯಾತ್ರೆಯ ರೂವಾರಿ ಗುರು ಹನುಮಂತಪ್ಪ ಮತ್ತು ಮರಿಯಪ್ಪನವರ ನೇತೃತ್ವದಲ್ಲಿ ಏಳು ಮಂದಿಯೊAದಿಗೆ ಪ್ರಾರಂಭವಾದ ಪಾದಯಾತ್ರೆ ಇಂದು ಎಪ್ಪತ್ತು ಸಾವಿರ ಮಂದಿ ಪಾದಯಾತ್ರಿಗಳು ಬೆಂಗಳೂರು ಮತ್ತು ಮೊದಲಾದ ಕಡೆಗಳಿಂದ ಶನಿವಾರ ಧರ್ಮಸ್ಥಳಕ್ಕೆ ಬಂದಿದ್ದರು.ಎಲ್ಲರಿಗೂ ಶ್ರೀ ಸ್ವಾಮಿಯ ದರ್ಶನ, ಸೇವೆಯ ಫಲ ದೊರೆತು ಲೋಕಕಲ್ಯಾಣವಾಗಲಿ ಎಂದು ಹೆಗ್ಗಡೆಯವರು ಹಾರೈಸಿದರು.ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರಕುಮಾರ್, ಸುಪ್ರಿಯಾಹರ್ಷೇಂದ್ರಕುಮಾರ್ ಉಪಸ್ಥಿತರಿದ್ದು ಶಿವಪಂಚಾಕ್ಷರಿ ಪಠಣದಲ್ಲಿ ಭಾಗವಹಿಸಿದರು.ಮಾಣಿಲದ ಮೋಹನದಾಸ ಸ್ವಾಮೀಜಿ, ಪಾದಯಾತ್ರೆಯ ರೂವಾರಿ ಗುರು ಹನುಮಂತಪ್ಪ ಸ್ವಾಮೀಜಿ ಮತ್ತು ಮರಿಯಪ್ಪ ಕೂಡಾ ಉಪಸ್ಥಿತರಿದ್ದರು.

ಶ್ರೀನಿವಾಸ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು. ಅಹೋರಾತ್ರಿ ಶಿವಪಂಚಾಕ್ಷರಿ ಪಠಣ ನಡೆಯಿತು. ಭಕ್ತರು ದೇವರದರ್ಶನ ಮಾಡಿ ವಿಶೇಷವಾಗಿ ಎಳನೀರಿನ ಅಭಿಷೇಕ ಮತ್ತು ಶತರುದ್ರಾಭಿಷೇಕ ಸೇವೆ ಸಲ್ಲಿಸಿ ಧನ್ಯತೆಯನ್ನು ಹೊಂದಿದರು.ದೇವಳ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ರಾವ್, ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಉಪಸ್ಥಿರಿದ್ದು ಸಮಾರಂಭದ ಯಶಸ್ವಿಗೆ ಸಹಕರಿಸಿದರು.

Related posts

ಬೆಳ್ತಂಗಡಿ ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಯವರ 106ನೇ ಜಯಂತಿ ಆಚರಣೆ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಮೂಡಾಯಿಬೆಟ್ಟು ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ನಟ ರಮೇಶ್ ಅರವಿಂದ್‌ ರವರಿಗೆ ಗೌರವ

Suddi Udaya

ಸುಲ್ಕೇರಿಯಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರ ಭೇಟಿ ಕಾರ್ಯಕ್ರಮ

Suddi Udaya
error: Content is protected !!