23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಳದಂಗಡಿ ಸ.ಪ್ರೌ. ಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಸರಕಾರಿ ಪ್ರೌಢಶಾಲೆ ಅಳದಂಗಡಿಯಲ್ಲಿ ಎಸ್ ಎಸ್ ಎಲ್ ಸಿ ನಂತರ ಮುಂದೇನು ಎಂಬುದಕ್ಕೆ “ವೃತ್ತಿ ಮಾರ್ಗದರ್ಶನ ಫೆ.14 ರಂದು ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಕಳ ಜ್ಞಾನಸುಧಾ ಕಾಲೇಜು ಉಪನ್ಯಾಸಕ ಸಂದೀಪ್ ಮತ್ತು ಸರಕಾರಿ ಪ್ರೌಢಶಾಲೆ ಗುರುವಾಯನಕೆರೆ ಶಿಕ್ಷಕರಾದ ಜಗನ್ನಾಥ್ ಮಾರ್ಗದರ್ಶನ ನೀಡಿದರು.


ಕಾರ್ಯಕ್ರಮದಲ್ಲಿ ಸಂಘಟನೆಯ ಗೌರವ ಅಧ್ಯಕ್ಷ ಶಿವಪ್ರಸಾದ್ ಅಜಿಲರು ಶಾಲಾ ಮಕ್ಕಳಿಗೆ ಮಾರ್ಗದರ್ಶನಕ್ಕೆ ಪೂರಕವಾಗಿ ಪುಸ್ತಕ ಮತ್ತು ಪೆನ್ ನ್ನು ನೀಡಿ ಶುಭ ನುಡಿಯನ್ನಾಡಿದರು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಶಾಂತಿ ಮರಿಯಾ ಸಲ್ಡಾನ್ಹ , ಜ್ಞಾನಸುಧಾ ಕಾಲೇಜು ಉಪನ್ಯಾಸಕಿ ಸೌಜನ್ಯ ಹೆಗ್ಡೆ ಮತ್ತು ನಿವೃತ ಸೈನಿಕ ಮೋಹನ್ ಕುಲಾಲ್, ಸಂಘಟನೆಯ ಪದಾಧಿಕಾರಿಗಳು, ಸದಸ್ಯರು, ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಅಧ್ಯಕ್ಷ ದೇವದಾಸ್ ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಶಾಂತಿ ಮರಿಯಾ ಸಲ್ಡಾನ್ಹ ಸ್ವಾಗತಿಸಿದರು. ಚಂದ್ರಶೇಖರ ಧನ್ಯವಾದ ಸಲ್ಲಿಸಿದರು.

Related posts

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಕಲ್ಮಂಜ ಸ.ಹಿ.ಪ್ರಾ. ಶಾಲೆ ಪೈಂಟಿಂಗ್, ಕಾಮಗಾರಿ ವೀಕ್ಷಣೆ

Suddi Udaya

ಬೆಳ್ತಂಗಡಿ ಜೆಸಿ ಸಪ್ತಾಹದಲ್ಲಿ ಡ್ರೀಮ್ ಡೀಲ್ ಗ್ರೂಪ್ ಎಂಡಿ ಮಹಮ್ಮದ್ ಸುಹೈಲ್‌ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಎಸ್. ಡಿ. ಎಮ್. ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃ ತಿಕ ಸಂಘದ ವತಿಯಿಂದ ‘ಆಟಿಡ್ ಗೊಬ್ಬುಗ’

Suddi Udaya
error: Content is protected !!