ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಕಲಿ ಚಿನ್ನದ ಜಾಲಕ್ಕೆ ತಡೆ: ಚಿನ್ನಾಭರಣ ಮೌಲ್ಯಮಾಪಕರ ತುರ್ತು ಸಮಾಲೋಚನಾ ಸಭೆ

​ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನಾದ್ಯಂತ ನಡೆಯುತ್ತಿರುವ ನಕಲಿ ಚಿನ್ನದ ವಂಚನೆ ಜಾಲವನ್ನು ತಡೆಗಟ್ಟಲು ಹಾಗೂ ಮೌಲ್ಯಮಾಪಕರ ಹಿತರಕ್ಷಣೆಗಾಗಿ ಫೆ.14 ರಂದು ಗುರುವಾಯನಕೆರೆಯ ನವಶಕ್ತಿ ರೆಸಿಡೆನ್ಸಿಯಲ್ಲಿ ತುರ್ತು ಸಮಾಲೋಚನೆ ನಡೆಸಲಾಯಿತು. ಸಭೆಯಲ್ಲಿ ತಾಲೂಕಿನ ಎಲ್ಲಾ ಹಿರಿಯ ಚಿನ್ನಾಭರಣ ಮೌಲ್ಯಮಾಪಕರುಗಳು ಉಪಸ್ಥಿತರಿದ್ದು, ವಂಚನೆ ಜಾಲವನ್ನು ಗುರುತಿಸುವ ಮತ್ತು ವೃತ್ತಿಪರ ಜಾಗೃತಿ ಮೂಡಿಸುವ ಕುರಿತು ಎಲ್ಲರಿಗೂ ಅತ್ಯಮೂಲ್ಯ ಮಾರ್ಗದರ್ಶನ ನೀಡಿದರು.

ವಂಚಕರ ಪತ್ತೆ, ಕಮಿಷನ್ ದರ ಹೆಚ್ಚಳ ಹಾಗೂ ಪ್ರಾಮಾಣಿಕ ಚಿನ್ನದ ಆಭರಣ ಮೌಲ್ಯಮಾಪಕರಿಗೆ ವೃತ್ತಿಪರ ರಕ್ಷಣೆ ನೀಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮತ್ತು ಆಯಾಯ ಬ್ಯಾಂಕ್‌ಗಳ ಅಧ್ಯಕ್ಷರುಗಳಿಗೆ ಮನವಿ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಚಿನ್ನಾಭರಣ ಮೌಲ್ಯಮಾಪಕರು ಉಪಸ್ಥಿತರಿದ್ದರು.

Related posts

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಮರೋಡಿ: ಊರವರಿಂದ ಶ್ರಮದಾನ, ಕಳೆಗಿಡಗಂಟಿಗಳ ತೆರವು

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯೋಗ ಮತ್ತು ರಂಗ ತರಬೇತಿಯ ಉದ್ಘಾಟನೆ

Suddi Udaya

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಆಗ್ರಹ: ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸ್ ರಿಗೆ ದೂರು

Suddi Udaya

ಅರಸಿನಮಕ್ಕಿ: ಅರಿಕೇಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಷ್ಣು ಸಹಸ್ರನಾಮ ಪಠಣ ಪ್ರಾರಂಭ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya
error: Content is protected !!