23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಕ್ಕಾಡಿಗೋಳಿ ಶಾಲೆಯಲ್ಲಿ ಮೆಟ್ರಿಕ್ ಮೇಳ

ಹೊಕ್ಕಾಡಿಗೋಳಿ : ಹೊಕ್ಕಾಡಿಗೋಳಿ ಶಾಲೆಯಲ್ಲಿ ಮಕ್ಕಳ ಮೆಟ್ರಿಕ್ ಮೇಳ ಫೆ.14 ರಂದು ನಡೆಯಿತು.

ಎಸ್ ಡಿ ಎಂ ಸಿ ಅಧ್ಯಕ್ಷ ದಿನೇಶ್ ಹುಲಿಮೇರು ಇವರ ಅಧ್ಯಕ್ಷತೆಯಲ್ಲಿ ಮೆಟ್ರಿಕ್ ಮೇಳದ ಉದ್ಘಾಟನೆಯನ್ನು ರಕ್ಷಣ್ ಮೆಲಾಂಟ, ಉದ್ಯಮಿ ಕೃಷ್ಣ ಕ್ರಷರ್ 12 ಕವಲು ನೆರವೇರಿಸಿಕೊಟ್ಟು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಆರಂಬೋಡಿ ಪಿಡಿಓ ಗಣೇಶ್ ಶೆಟ್ಟಿ ಮಾತನಾಡಿ, ಮೆಟ್ರಿಕ್ ಮೇಳವು ವಿದ್ಯಾರ್ಥಿಗಳಲ್ಲಿ ಸೃಜನಶೀಲತೆಯನ್ನು ಉತ್ತೇಜಿಸುವುದರ ಜೊತೆಗೆ ವ್ಯವಹಾರ ಜ್ಞಾನವನ್ನು ಮೂಡಿಸುವ ಅದ್ಭುತ ಚಟುವಟಿಕೆ ಹಾಗೂ ಈ ಮೇಳದ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವು ಬೆಳೆಯುತ್ತದೆ ಎಂಬುದಾಗಿ ತಿಳಿಸಿದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಘವೇಂದ್ರ ಭಟ್, ಶಶಿಧರ್ ಕಲ್ಲಾಪು ಹಾಗೂ ಕಿರಣ್ ಮಂಜಿಲ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಎಸ್ ಡಿ ಎಂ ಸಿ ಸದಸ್ಯರು, ತಾಯಂದಿರ ಸಮಿತಿ ಸದಸ್ಯರು, ಹಳೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಊರಿನವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ವ್ಯಾಪಾರ ಮಾಡಿ ಪ್ರೋತ್ಸಾಹಿಸಿದರು.
ಶಾಲಾ ಮುಖ್ಯೋಪಾಧ್ಯಾಯರಾದ ಸುಮಿತ್ರ ಎಸ್. ಸ್ವಾಗತಿಸಿ, ಶಿಕ್ಷಕಿಯರಾದ ಸುಚಿತ್ರ, ಮೆಟಿಲ್ಡ ಡಿಸೋಜ, ಸಿಲ್ವಿಯಾ ಮಿರಾಂದ, ಶುಭವತಿ, ಸುತೀಕ್ಷಾ ಹಾಗೂ ಪ್ರಮೀಕ್ಷಾ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.

Related posts

ಅಂಡಿಂಜೆ ಗ್ರಾಮ ಪಂಚಾಯತ್ ಹಾಗೂ ಒಕ್ಕೂಟದ ವತಿಯಿಂದ ರೈತ ತರಬೇತಿ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು: ದರ್ಶನ್ ಯು ಸಾಲ್ಯಾನ್ ಅಸೌಖ್ಯದಿಂದ ನಿಧನ

Suddi Udaya

ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಹಾಗೂ ಪ್ರತಿಷ್ಠಾ ಮಹೋತ್ಸವ, ಧಾರ್ಮಿಕ ಸಭೆ

Suddi Udaya

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ನಾಲ್ಕೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಜನಮಂಗಳ ಯೋಜನೆಯಡಿ ಮಂಜೂರಾದ ವಾಕಿಂಗ್ ಸ್ಟಿಕ್ ಹಸ್ತಾಂತರ

Suddi Udaya

ಶಿವಮೊಗ್ಗದಲ್ಲಿ ಬಿಎಮ್.ಎಸ್ ಕುಟುಂಬ ಸಂಗಮ: ದ.ಕ. ಜಿಲ್ಲೆಯಿಂದ 200ಕ್ಕೂ ಹೆಚ್ಚು ಕಾರ್ಯಕರ್ತರ ಭಾಗಿ

Suddi Udaya
error: Content is protected !!