July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಕ್ಕಾಡಿಗೋಳಿ ಶಾಲೆಯಲ್ಲಿ ಮೆಟ್ರಿಕ್ ಮೇಳ

ಹೊಕ್ಕಾಡಿಗೋಳಿ : ಹೊಕ್ಕಾಡಿಗೋಳಿ ಶಾಲೆಯಲ್ಲಿ ಮಕ್ಕಳ ಮೆಟ್ರಿಕ್ ಮೇಳ ಫೆ.14 ರಂದು ನಡೆಯಿತು.

ಎಸ್ ಡಿ ಎಂ ಸಿ ಅಧ್ಯಕ್ಷ ದಿನೇಶ್ ಹುಲಿಮೇರು ಇವರ ಅಧ್ಯಕ್ಷತೆಯಲ್ಲಿ ಮೆಟ್ರಿಕ್ ಮೇಳದ ಉದ್ಘಾಟನೆಯನ್ನು ರಕ್ಷಣ್ ಮೆಲಾಂಟ, ಉದ್ಯಮಿ ಕೃಷ್ಣ ಕ್ರಷರ್ 12 ಕವಲು ನೆರವೇರಿಸಿಕೊಟ್ಟು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಆರಂಬೋಡಿ ಪಿಡಿಓ ಗಣೇಶ್ ಶೆಟ್ಟಿ ಮಾತನಾಡಿ, ಮೆಟ್ರಿಕ್ ಮೇಳವು ವಿದ್ಯಾರ್ಥಿಗಳಲ್ಲಿ ಸೃಜನಶೀಲತೆಯನ್ನು ಉತ್ತೇಜಿಸುವುದರ ಜೊತೆಗೆ ವ್ಯವಹಾರ ಜ್ಞಾನವನ್ನು ಮೂಡಿಸುವ ಅದ್ಭುತ ಚಟುವಟಿಕೆ ಹಾಗೂ ಈ ಮೇಳದ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವು ಬೆಳೆಯುತ್ತದೆ ಎಂಬುದಾಗಿ ತಿಳಿಸಿದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಘವೇಂದ್ರ ಭಟ್, ಶಶಿಧರ್ ಕಲ್ಲಾಪು ಹಾಗೂ ಕಿರಣ್ ಮಂಜಿಲ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಎಸ್ ಡಿ ಎಂ ಸಿ ಸದಸ್ಯರು, ತಾಯಂದಿರ ಸಮಿತಿ ಸದಸ್ಯರು, ಹಳೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಊರಿನವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ವ್ಯಾಪಾರ ಮಾಡಿ ಪ್ರೋತ್ಸಾಹಿಸಿದರು.
ಶಾಲಾ ಮುಖ್ಯೋಪಾಧ್ಯಾಯರಾದ ಸುಮಿತ್ರ ಎಸ್. ಸ್ವಾಗತಿಸಿ, ಶಿಕ್ಷಕಿಯರಾದ ಸುಚಿತ್ರ, ಮೆಟಿಲ್ಡ ಡಿಸೋಜ, ಸಿಲ್ವಿಯಾ ಮಿರಾಂದ, ಶುಭವತಿ, ಸುತೀಕ್ಷಾ ಹಾಗೂ ಪ್ರಮೀಕ್ಷಾ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.

Related posts

ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕ ಕಟ್ಟಡದ ಶಿಲಾನ್ಯಾಸವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನೆರವೇರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

Suddi Udaya

ಬೆಳ್ತಂಗಡಿ ಹೋಲಿ ರೆಡೀಮರ್ ಚರ್ಚ್ ನೇತೃತ್ವದಲ್ಲಿ ಬೃಹತ್ ಸ್ವಚ್ಛತಾ ಆಂದೋಲನ

Suddi Udaya

ಮಂಜೊಟ್ಟಿ- ಮಂಚಕಲ್ಲುವಿನಲ್ಲಿ ಧರೆಗುರುಳಿದ ಮರ, ಸಂಚಾರಕ್ಕೆ ತೊಂದರೆ

Suddi Udaya

ಬಾಸ್ಕೆಟ್‌ಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜು ಪುರುಷ ಮತ್ತು ಮಹಿಳೆಯರ ವಿಭಾಗಕ್ಕೆ ಪ್ರಶಸ್ತಿ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ : ರೂ.144ಕೋಟಿ ವ್ಯವಹಾರ, ಸದಸ್ಯರಿಗೆ ಶೇ.11 ಡಿವಿಡೆಂಟ್

Suddi Udaya

ಧರ್ಮಸ್ಥಳ; ಹದಗೆಟ್ಟ ‌ನೇರ್ತನೆ ರಸ್ತೆ; ಗ್ರಾಮಸ್ಥರಿಂದ ಶ್ರಮದಾನದ ಮೂಲಕ ದುರಸ್ತಿ

Suddi Udaya
error: Content is protected !!