22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಎಜುಕೇಷನಲ್ ಸೊಸೈಟಿಯಲ್ಲಿ ‘ಎಸ್.ಡಿ.ಎಂ ಶ್ರೇಷ್ಠತಾ ಕಪ್ – 2026’

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕೇಂದ್ರ ಕಛೇರಿಯ ಸಿಬ್ಬಂದಿಗಳಿಗೆ ‘ಎಸ್.ಡಿ.ಎಂ ಶ್ರೇಷ್ಠತಾ ಕಪ್ – 2026’ ಒಂದು ದಿನದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಪಂದ್ಯಾಟದಲ್ಲಿ ಉಪಸ್ಥಿತರಿದ್ದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಮಾತನಾಡಿ, ಕ್ರೀಡೆಗೆ ಎಲ್ಲರನ್ನೂ ಒಗ್ಗೂಡಿಸಿ, ಸ್ನೇಹದಿಂದ ಬೆರೆಸುವ ಶಕ್ತಿಯಿದೆ. ಪ್ರತಿನಿತ್ಯ ಶೈಕ್ಷಣಿಕ ವೃತ್ತಿಯಲ್ಲಿ ತೊಡಗಿಕೊಂಡಿರುವ ಸಿಬ್ಬಂದಿಗಳಿಗೆ ಇಂತಹ ಕ್ರೀಡಾ ಕೂಟಗಳು ವಿಶೇಷ ಅನುಭವ ಮತ್ತು ಖುಷಿಯನ್ನು ನೀಡುತ್ತದೆ. ಇದರೊಂದಿಗೆ ಕ್ರೀಡೆಗಳಲ್ಲಿ ಸಕ್ರೀಯವಾಗಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕ ಕ್ಷಮತೆಯನ್ನು ಹೆಚ್ಚಿಸುತ್ತದೆ. ಶೈಕ್ಷಣಿಕ ಕೇಂದ್ರ ಕಛೇರಿಗಳಲ್ಲಿ ಇಂತಹ ಕ್ರೀಡಾ ಕೂಟ ಆಯೋಜನೆಯಿಂದ ಸಿಬ್ಬಂದಿಗಳಲ್ಲಿ ಸ್ನೇಹ ಭಾ/ವ ಗಟ್ಟಿಯಾಗುವ ಜೊತೆಗೆ ನಾಯಕತ್ವ ಗುಣ, ಏಕಾಗ್ರತೆ ಮತ್ತು ಸೌಹಾರ್ದತೆ ವೃದ್ಧಿಸುತ್ತದೆ. ಸಿಬ್ಬಂದಿಗಳ ಪ್ರತಿಭಾ ಅನಾವರಣಕ್ಕೂ ಇದೊಂದು ವೇದಿಕೆಯಾಗುತ್ತದೆ ಎಂದರು. ಪಂದ್ಯಾಟದಲ್ಲಿ ಪುರುಷರು ಮಹಿಳೆಯರು ಸೇರಿದಂತೆ ಕಿರಿಯರಿಂದ ಹಿರಿಯರ ವರೆಗೂ ಎಲ್ಲಾ ಸಿಬ್ಬಂದಿಗಳು ಹುರುಪಿನಿಂದ ಭಾಗವಹಿಸಿದ್ದನ್ನು ಕಂಡು ಬಹುಮಾನ ಪಡೆಯುವುದಕ್ಕಿಂತ ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸುವುದು ಬಹು ಮುಖ್ಯ ಎಂದು ಸರ್ವರನ್ನು ಅಭಿನಂದಿಸಿದರು.

ಪಂದ್ಯಾವಳಿಯಲ್ಲಿ ಉಜಿರೆಯ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಂಯೋಜಕ ಶಶಿಶೇಖರ್ ಕಾಕತ್ಕಾರ್ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿ, ಕೇಂದ್ರ ಕಛೇರಿಯ ಸಿಬ್ಬಂದಿಗಳಿಗೆ ಈ ರೀತಿಯ ಪಂದ್ಯಾಟವನ್ನು ಆಯೋಜಿಸಿರುವುದು ನಿಜಕ್ಕೂ ಶ್ಲಾಘನೀಯ ಸಂಗತಿ. ಇಂದು ಶಟಲ್ ಬ್ಯಾಡ್ಮಿಂಟನ್ ಟೂರ್ನಿಯಿಂದ ಆರಂಭವಾದ ಸೌಹಾರ್ದ ಕ್ರೀಡಾಕೂಟವು ಮುಂದೆ ನಾನಾ ರೀತಿಯ ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರೇರಣೆಯಾಗಲಿ, ಸಿಬ್ಬಂದಿಗಳಲ್ಲಿ ಸೌಹಾರ್ದಯುತವಾದ ಹೊಸ ಚೈತನ್ಯ ಮೂಡಿ ಕಾರ್ಯ ಕ್ಷಮತೆ ಮತ್ತಷ್ಟು ಹೆಚ್ಚಲಿ ಎಂದು ಶುಭ ಹಾರೈಸಿದರು.

ಪಂದ್ಯಾಟದಲ್ಲಿ ಕೇಂದ್ರ ಕಛೇರಿಯ ಪುರುಷಾ ಮತ್ತು ಮಹಿಳಾ ಸಿಬ್ಬಂದಿಗಳನ್ನು ಒಳಗೊಂಡ ಎಸ್.ಡಿ.ಎಂ ಕಿಲಾಡಿ, ಎಸ್.ಡಿ.ಎಂ ರಾಫ್ಟರ್, ಎಸ್.ಡಿ.ಎಂ ಟೈಟಾನ್ಸ್, ಎಸ್.ಡಿ.ಎಂ ನೆಟ್ ಕಿಂಗ್ಸ್, ಎಸ್.ಡಿ.ಎಂ ಜೋಶ್, ಎಸ್.ಡಿ.ಎಂ ಬಾಝಿಗರ್, ಎಸ್.ಡಿ.ಎಂ ಶಟ್ಲರ್ಸ್ ಮತ್ತು ಎಸ್.ಡಿ.ಎಂ ವಿಜೇತ ಎಂಬ 8 ತಂಡಗಳನ್ನು ರಚಿಸಿ, ಪುರುಷ ಮತ್ತು ಮಹಿಳೆಯರ ಸಿಂಗಲ್ಸ್, ಡಬಲ್ಸ್ ಮತ್ತು ಮಿಶ್ರಿತ 5 ಮಾದರಿಯಲ್ಲಿ ಪಂದ್ಯಾಟವನ್ನು ಆಯೋಜಿಸಲಾಗಿತ್ತು. ಪಂದ್ಯದಲ್ಲಿ ಎಸ್.ಡಿ.ಎಂ ಟೈಟಾನ್ಸ್ ತಂಡವು ಪ್ರಥಮ ಸ್ಥಾನ ಪಡೆಯುವ ಮೂಲಕ ಚಾಂಪಿಯನ್ ಗಳಾಗಿ, ಎಸ್.ಡಿ.ಎಂ ವಿಜೇತ ತಂಡವು ದ್ವಿತೀಯ ಸ್ಥಾನ ಪಡೆಯಿತು.

ವಿಜೇತ ತಂಡದ ಸದಸ್ಯರಿಗೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಎಸ್.ಡಿ.ಎಂ ಶ್ರೇಷ್ಠತಾ ಕಪ್ ಹಾಗು ನಗದು ಬಹುಮಾನ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಂಯೋಜಕ ಶಶಿಶೇಖರ್ ಎನ್ ಕಾಕತ್ಕಾರ್, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಧನ್ಯ ಕುಮಾರ್, ಆಡಿಟ್ ಆಫಿಸರ್ ಗಿರೀಶ್ ತಂತ್ರಿ, ವಸತಿ ನಿಲಯಗಳ ಮೆಸ್ ಅಡ್ಮಿನಿಸ್ಟ್ರೇಟರ್ ಸಿ ತಿರುಮಲೇಶ್ ಭಟ್ ಹಾಗು ಎಸ್.ಡಿ.ಎಂ ಮಂಜೂಶ ವಸ್ತು ಸಂಗ್ರಹಾಲಯದ ಡೆಪ್ಯುಟಿ ಡೈರೆಕ್ಟರ್ ರಿತೇಶ್ ಶರ್ಮಾ‌, ಉಜಿರೆಯ ಎಸ್.ಡಿ.ಎಂ ಮಂಜುಶ್ರೀ ಪ್ರಿಂಟರ್ಸ್ ನಿವೃತ್ತ ವ್ಯವಸ್ಥಾಪಕ ಶೇಖರ್ ಉಪಸ್ಥಿತರಿದ್ದರು.

ಪದ್ಯಾವಳಿಯನ್ನು ಕೇಂದ್ರ ಕಛೇರಿಯ ಮಾನವ ಸಂಪನ್ಮೂಲ ವಿಭಾಗದ ಪುನೀತ್ ನಿರ್ವಹಿಸಿದರು. ಕೇಂದ್ರ ಕಛೇರಿಯ ಪ್ರಬಂಧಕರಾದ ಕೃಷ್ಣಪ್ಪ, ಲೆಕ್ಕ ಪತ್ರ ವಿಭಾಗದ ಗುರು ಮತ್ತು ಸುದೀಶ್ ಪಂದ್ಯಾವಳಿಯನ್ನು ಸಂಯೋಜಿಸಿದರು. ಉಜಿರೆಯ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮಾರ್ಕೇಟಿಂಗ್ ಕಾರ್ಯನಿರ್ವಾಹಕ ಸುಮಂತ್, ಉಜಿರೆಯ ನಿತಿನ್ ತೀರ್ಪುಗಾರರಾಗಿ ಸಹಕರಿಸಿದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಹೋಲಿ ರಿಡೀಮರ್ ವಿದ್ಯಾರ್ಥಿಗಳ ಸಾಧನೆ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಸ್ಸು ಹತ್ತುವ ವೇಳೆ ಮಹಿಳೆಯ ಕೊರಳಿನಿಂದ ರೂ.1.44 ಲಕ್ಷ ಮೌಲ್ಯದ 36 ಗ್ರಾಂ ಚಿನ್ನದ ಸರ ಕಳವು

Suddi Udaya

ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಜನಾರ್ದನರವರ ಚಿಕಿತ್ಸೆಗೆ ನೆರವಾಗಿ

Suddi Udaya

ಸುಲ್ಕೇರಿ: ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಸಂದರ್ಶನವನ್ನು ಎದುರಿಸುವುದು ಹೇಗೆ? ಎಂಬ ವಿಷಯದ ಕುರಿತು ಉಪನ್ಯಾಸ

Suddi Udaya

ಫೆ.28 -ಮಾ. 9: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya
error: Content is protected !!