22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ದ .ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ

ಬೆಳ್ತಂಗಡಿ: ಫಾದರ್ ಎಲ್. ಎಮ್ ಪಿಂಟೊ ಆಸ್ಪತ್ರೆ, ಬದ್ಯಾರ್ ಹಿರಿಯ ವಿದ್ಯಾರ್ಥಿಗಳ ಸಂಘ ಹಾಗೂ ಶಾಲಾ ಅಭಿವೃದ್ಧಿ ಸಮಿತಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆ ಮತ್ತು ಗ್ರಾಮ ಪಂಚಾಯಿತಿ ಕುವೆಟ್ಟು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ಕನ್ನಡಕ ವಿತರಣೆ ಹಾಗೂ ಉಚಿತ ಮಹಿಳೆಯರ ಕ್ಯಾನ್ಸರ್ ತಪಾಸಣಾ ಶಿಬಿರ ಫೆ.15 ರಂದು ಗುರುವಾಯನಕೆರೆ ದ .ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಖ್ಯಾತ ಶಸ್ತ್ರ ಚಿಕಿತ್ಸಾ ಹಾಗೂ ಕ್ಯಾನ್ಸರ್ ಚಿಕಿತ್ಸಾ ತಜ್ಞ ಡಾ. ಎಲ್ ರೋಯ್ ಸಲ್ಡಾನ್ಹಾ ಕ್ಯಾನ್ಸರ್ ಚಿಕಿತ್ಸಾ ಬಗ್ಗೆ ಮಾಹಿತಿ ನೀಡಿದರು.

ಈ ವೇಳೆ ಔಷಧ ವಿಭಾಗದ ಡಾ| ಪ್ರಕಾಶ್ ಶೆಣೈ, ಮೂಳೆ ಶಸ್ತ್ರ ಚಿಕಿತ್ಸಾಕ ಡಾ| ವಿಲ್ಬರ್ ಕುಟಿನ್ಹೊ, ಪ್ರಸೂತಿ ಸ್ತ್ರೀರೋಗ ತಜ್ಞೆ ಡಾ. ಜೆಸ್ಸಿ ಮರಿಯಾ ಡಿಸೋಜ, ಮಕ್ಕಳ ತಜ್ಞ ಡಾ| ಬಾಲಕೃಷ್ಣ, ಚರ್ಮರೋಗ ತಜ್ಞ ಡಾ| ನಾಗಭೂಷಣ್ ಹೆಗ್ಡೆ ಉಪಸ್ಥಿತರಿದ್ದರು.

ಶಿಬಿರದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ಉಚಿತ ಗರ್ಭಕಂಠದ ಕ್ಯಾನ್ಸರ್ ಪರೀಕ್ಷೆ, ಉಚಿತ ಇ.ಸಿ.ಜಿ. . ಉಚಿತ ಕ್ಯಾನ್ಸರ್ ತಪಾಸಣೆ, ಉಚಿತ ಔಷಧಿ 50% ರಿಯಾಯಿತಿಯಲ್ಲಿ ರಕ್ತಪರೀಕ್ಷೆ ಮಾಡಲಾಯಿತು. ಈ ವೇಳೆ ಉಚಿತ ಹೆಲ್ತ್ ಕಾರ್ಡ್ ನೀಡಲಾಯಿತು. 125 ಕ್ಕೂ ಹೆಚ್ಚಿನ ಜನರು ಶಿಬಿರದ ಸದುಪಯೋಗವನ್ನು ಪಡೆದುಕೊಂಡು. 25 ಮಂದಿ ಗೆ ಉಚಿತವಾಗಿ ಕನ್ನಡಕವನ್ನು ವಿತರಿಸಲಾಯಿತು.

Related posts

ಉದ್ಯೋಗದ ಪ್ರಥಮ ವೇತನ ಬಾರ್ಯ ಶ್ರೀ ಮಹಾವಿಷ್ಣು ಕ್ಷೇತ್ರಕ್ಕೆ ಸಮರ್ಪಣೆ

Suddi Udaya

ಉಜಿರೆಯ ಸ್ಮಾರ್ಟ್ ಮೊಬೈಲ್ ಕೇರ್ ನಲ್ಲಿ ಕಳ್ಳತನ: ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Suddi Udaya

ಎ.19-28: ಕಾಜೂರ್ ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya

ಕಾಂತಾರ ಖ್ಯಾತಿಯ ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಮುಖರು ಆಸ್ಪತ್ರೆಗೆ ಬೇಟಿ

Suddi Udaya

ಆ.17 ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ಮೊಸರು ಕುಡಿಕೆ ಉತ್ಸವ, ಪೂರ್ವಾಭಾವಿ ಸಭೆ

Suddi Udaya
error: Content is protected !!