22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಕ್ಕಾಡಿಗೋಳಿ ಶಾಲೆಯಲ್ಲಿ ಮೆಟ್ರಿಕ್ ಮೇಳ

ಹೊಕ್ಕಾಡಿಗೋಳಿ : ಹೊಕ್ಕಾಡಿಗೋಳಿ ಶಾಲೆಯಲ್ಲಿ ಮಕ್ಕಳ ಮೆಟ್ರಿಕ್ ಮೇಳ ಫೆ.14 ರಂದು ನಡೆಯಿತು.

ಎಸ್ ಡಿ ಎಂ ಸಿ ಅಧ್ಯಕ್ಷ ದಿನೇಶ್ ಹುಲಿಮೇರು ಇವರ ಅಧ್ಯಕ್ಷತೆಯಲ್ಲಿ ಮೆಟ್ರಿಕ್ ಮೇಳದ ಉದ್ಘಾಟನೆಯನ್ನು ರಕ್ಷಣ್ ಮೆಲಾಂಟ, ಉದ್ಯಮಿ ಕೃಷ್ಣ ಕ್ರಷರ್ 12 ಕವಲು ನೆರವೇರಿಸಿಕೊಟ್ಟು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಆರಂಬೋಡಿ ಪಿಡಿಓ ಗಣೇಶ್ ಶೆಟ್ಟಿ ಮಾತನಾಡಿ, ಮೆಟ್ರಿಕ್ ಮೇಳವು ವಿದ್ಯಾರ್ಥಿಗಳಲ್ಲಿ ಸೃಜನಶೀಲತೆಯನ್ನು ಉತ್ತೇಜಿಸುವುದರ ಜೊತೆಗೆ ವ್ಯವಹಾರ ಜ್ಞಾನವನ್ನು ಮೂಡಿಸುವ ಅದ್ಭುತ ಚಟುವಟಿಕೆ ಹಾಗೂ ಈ ಮೇಳದ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವು ಬೆಳೆಯುತ್ತದೆ ಎಂಬುದಾಗಿ ತಿಳಿಸಿದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಘವೇಂದ್ರ ಭಟ್, ಶಶಿಧರ್ ಕಲ್ಲಾಪು ಹಾಗೂ ಕಿರಣ್ ಮಂಜಿಲ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಎಸ್ ಡಿ ಎಂ ಸಿ ಸದಸ್ಯರು, ತಾಯಂದಿರ ಸಮಿತಿ ಸದಸ್ಯರು, ಹಳೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಊರಿನವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ವ್ಯಾಪಾರ ಮಾಡಿ ಪ್ರೋತ್ಸಾಹಿಸಿದರು.
ಶಾಲಾ ಮುಖ್ಯೋಪಾಧ್ಯಾಯರಾದ ಸುಮಿತ್ರ ಎಸ್. ಸ್ವಾಗತಿಸಿ, ಶಿಕ್ಷಕಿಯರಾದ ಸುಚಿತ್ರ, ಮೆಟಿಲ್ಡ ಡಿಸೋಜ, ಸಿಲ್ವಿಯಾ ಮಿರಾಂದ, ಶುಭವತಿ, ಸುತೀಕ್ಷಾ ಹಾಗೂ ಪ್ರಮೀಕ್ಷಾ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.

Related posts

ಲಾಯಿಲ: ಶ್ರೀ ಉಳ್ಳಾಲ್ತಿ, ಮೈಸಂದಾಯ ಹಾಗೂ ಗುಳಿಗ ದೈವಗಳ ಸಾನಿಧ್ಯ ಪಿಲಿಪಂಜರ ಕ್ಷೇತ್ರ ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ; ಕಿರಿಯಾಡಿ ಭಜನಾ ಮಂಡಳಿ ಸದಸ್ಯರಿಂದ ಶ್ರಮದಾನ

Suddi Udaya

ಎ.30: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

Suddi Udaya

ಕಳೆಂಜ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರಿಂದ ಸೋರುತಿದ್ದ ಮನೆಯ ಮೇಲ್ಛಾವಣಿಗೆ ಟಾರ್ಪಲ್ ಅಳವಡಿಕೆ

Suddi Udaya

ಮಂಗಳೂರಿನಲ್ಲಿ ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು ರವರ ಕಚೇರಿ ಉದ್ಘಾಟನೆ

Suddi Udaya
error: Content is protected !!