ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಸರಕಾರಿ ಪ್ರೌಢಶಾಲೆ ಅಳದಂಗಡಿಯಲ್ಲಿ ಎಸ್ ಎಸ್ ಎಲ್ ಸಿ ನಂತರ ಮುಂದೇನು ಎಂಬುದಕ್ಕೆ “ವೃತ್ತಿ ಮಾರ್ಗದರ್ಶನ ಫೆ.14 ರಂದು ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಕಳ ಜ್ಞಾನಸುಧಾ ಕಾಲೇಜು ಉಪನ್ಯಾಸಕ ಸಂದೀಪ್ ಮತ್ತು ಸರಕಾರಿ ಪ್ರೌಢಶಾಲೆ ಗುರುವಾಯನಕೆರೆ ಶಿಕ್ಷಕರಾದ ಜಗನ್ನಾಥ್ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ಸಂಘಟನೆಯ ಗೌರವ ಅಧ್ಯಕ್ಷ ಶಿವಪ್ರಸಾದ್ ಅಜಿಲರು ಶಾಲಾ ಮಕ್ಕಳಿಗೆ ಮಾರ್ಗದರ್ಶನಕ್ಕೆ ಪೂರಕವಾಗಿ ಪುಸ್ತಕ ಮತ್ತು ಪೆನ್ ನ್ನು ನೀಡಿ ಶುಭ ನುಡಿಯನ್ನಾಡಿದರು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಶಾಂತಿ ಮರಿಯಾ ಸಲ್ಡಾನ್ಹ , ಜ್ಞಾನಸುಧಾ ಕಾಲೇಜು ಉಪನ್ಯಾಸಕಿ ಸೌಜನ್ಯ ಹೆಗ್ಡೆ ಮತ್ತು ನಿವೃತ ಸೈನಿಕ ಮೋಹನ್ ಕುಲಾಲ್, ಸಂಘಟನೆಯ ಪದಾಧಿಕಾರಿಗಳು, ಸದಸ್ಯರು, ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಅಧ್ಯಕ್ಷ ದೇವದಾಸ್ ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಶಾಂತಿ ಮರಿಯಾ ಸಲ್ಡಾನ್ಹ ಸ್ವಾಗತಿಸಿದರು. ಚಂದ್ರಶೇಖರ ಧನ್ಯವಾದ ಸಲ್ಲಿಸಿದರು.











