25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಳದಂಗಡಿ ಸ.ಪ್ರೌ. ಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಸರಕಾರಿ ಪ್ರೌಢಶಾಲೆ ಅಳದಂಗಡಿಯಲ್ಲಿ ಎಸ್ ಎಸ್ ಎಲ್ ಸಿ ನಂತರ ಮುಂದೇನು ಎಂಬುದಕ್ಕೆ “ವೃತ್ತಿ ಮಾರ್ಗದರ್ಶನ ಫೆ.14 ರಂದು ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಕಳ ಜ್ಞಾನಸುಧಾ ಕಾಲೇಜು ಉಪನ್ಯಾಸಕ ಸಂದೀಪ್ ಮತ್ತು ಸರಕಾರಿ ಪ್ರೌಢಶಾಲೆ ಗುರುವಾಯನಕೆರೆ ಶಿಕ್ಷಕರಾದ ಜಗನ್ನಾಥ್ ಮಾರ್ಗದರ್ಶನ ನೀಡಿದರು.


ಕಾರ್ಯಕ್ರಮದಲ್ಲಿ ಸಂಘಟನೆಯ ಗೌರವ ಅಧ್ಯಕ್ಷ ಶಿವಪ್ರಸಾದ್ ಅಜಿಲರು ಶಾಲಾ ಮಕ್ಕಳಿಗೆ ಮಾರ್ಗದರ್ಶನಕ್ಕೆ ಪೂರಕವಾಗಿ ಪುಸ್ತಕ ಮತ್ತು ಪೆನ್ ನ್ನು ನೀಡಿ ಶುಭ ನುಡಿಯನ್ನಾಡಿದರು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಶಾಂತಿ ಮರಿಯಾ ಸಲ್ಡಾನ್ಹ , ಜ್ಞಾನಸುಧಾ ಕಾಲೇಜು ಉಪನ್ಯಾಸಕಿ ಸೌಜನ್ಯ ಹೆಗ್ಡೆ ಮತ್ತು ನಿವೃತ ಸೈನಿಕ ಮೋಹನ್ ಕುಲಾಲ್, ಸಂಘಟನೆಯ ಪದಾಧಿಕಾರಿಗಳು, ಸದಸ್ಯರು, ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಅಧ್ಯಕ್ಷ ದೇವದಾಸ್ ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಶಾಂತಿ ಮರಿಯಾ ಸಲ್ಡಾನ್ಹ ಸ್ವಾಗತಿಸಿದರು. ಚಂದ್ರಶೇಖರ ಧನ್ಯವಾದ ಸಲ್ಲಿಸಿದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ

Suddi Udaya

ಡಿ.21-22: ಬದನಾಜೆ ಶಾಲೆಯ ಅಮೃತ ಮಹೋತ್ಸವ ಸಂಭ್ರಮ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

Suddi Udaya

ನಡ: ಪ್ರಭಾಕರ ಗೌಡ ಭೋಜಾರ ನಿಧನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2025-26 ನೇ ಸಾಲಿನ ದಾಖಲಾತಿ ಆರಂಭ

Suddi Udaya

ಬೆಳ್ತಂಗಡಿ ಸಂಜೀವಿನಿ ಲೋಕೋಸ್ ತರಬೇತಿ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ದೂರುದಾರ ಎಸ್ಐಟಿ ಕಸ್ಟಡಿಗೆ

Suddi Udaya
error: Content is protected !!