25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಳದಂಗಡಿ ಸ.ಪ್ರೌ. ಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಸರಕಾರಿ ಪ್ರೌಢಶಾಲೆ ಅಳದಂಗಡಿಯಲ್ಲಿ ಎಸ್ ಎಸ್ ಎಲ್ ಸಿ ನಂತರ ಮುಂದೇನು ಎಂಬುದಕ್ಕೆ “ವೃತ್ತಿ ಮಾರ್ಗದರ್ಶನ ಫೆ.14 ರಂದು ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಕಳ ಜ್ಞಾನಸುಧಾ ಕಾಲೇಜು ಉಪನ್ಯಾಸಕ ಸಂದೀಪ್ ಮತ್ತು ಸರಕಾರಿ ಪ್ರೌಢಶಾಲೆ ಗುರುವಾಯನಕೆರೆ ಶಿಕ್ಷಕರಾದ ಜಗನ್ನಾಥ್ ಮಾರ್ಗದರ್ಶನ ನೀಡಿದರು.


ಕಾರ್ಯಕ್ರಮದಲ್ಲಿ ಸಂಘಟನೆಯ ಗೌರವ ಅಧ್ಯಕ್ಷ ಶಿವಪ್ರಸಾದ್ ಅಜಿಲರು ಶಾಲಾ ಮಕ್ಕಳಿಗೆ ಮಾರ್ಗದರ್ಶನಕ್ಕೆ ಪೂರಕವಾಗಿ ಪುಸ್ತಕ ಮತ್ತು ಪೆನ್ ನ್ನು ನೀಡಿ ಶುಭ ನುಡಿಯನ್ನಾಡಿದರು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಶಾಂತಿ ಮರಿಯಾ ಸಲ್ಡಾನ್ಹ , ಜ್ಞಾನಸುಧಾ ಕಾಲೇಜು ಉಪನ್ಯಾಸಕಿ ಸೌಜನ್ಯ ಹೆಗ್ಡೆ ಮತ್ತು ನಿವೃತ ಸೈನಿಕ ಮೋಹನ್ ಕುಲಾಲ್, ಸಂಘಟನೆಯ ಪದಾಧಿಕಾರಿಗಳು, ಸದಸ್ಯರು, ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಅಧ್ಯಕ್ಷ ದೇವದಾಸ್ ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಶಾಂತಿ ಮರಿಯಾ ಸಲ್ಡಾನ್ಹ ಸ್ವಾಗತಿಸಿದರು. ಚಂದ್ರಶೇಖರ ಧನ್ಯವಾದ ಸಲ್ಲಿಸಿದರು.

Related posts

ಅ.20: ಬಳಂಜದಲ್ಲಿ ದೀಪಾವಳಿ ಪ್ರಯುಕ್ತ 2ನೇ ವರ್ಷದ ದೋಸೆ ಹಬ್ಬ ಹಾಗೂ ಲೂಡೋ ಟೂರ್ನಮೆಂಟ್

Suddi Udaya

ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಆಯ್ಕೆ

Suddi Udaya

ಆ.14: ಕಳೆಂಜ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಮತ್ತು ಧ್ವಜಾರೋಹಣ

Suddi Udaya

ಕನ್ಯಾಡಿ-2 ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ “ರಾಷ್ಟ್ರೀಯ ಬಾಹ್ಯಾಕಾಶ ದಿನ”

Suddi Udaya

ವಿಜಯ ರತ್ನ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಗೆ ಒಲಿದ ವಿದ್ಯಾಸಿರಿ ಗೌರವ

Suddi Udaya

ಶಿಬಾಜೆ : ಅರಂಪಾದೆಯಲ್ಲಿ ಕೃಷಿ ತೋಟವನ್ನು ಅರಣ್ಯ ಇಲಾಖೆಯವರು ತೆರವುಗೊಳಿಸಿದ ಹಿನ್ನೆಲೆ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!