25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ದ .ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ

ಬೆಳ್ತಂಗಡಿ: ಫಾದರ್ ಎಲ್. ಎಮ್ ಪಿಂಟೊ ಆಸ್ಪತ್ರೆ, ಬದ್ಯಾರ್ ಹಿರಿಯ ವಿದ್ಯಾರ್ಥಿಗಳ ಸಂಘ ಹಾಗೂ ಶಾಲಾ ಅಭಿವೃದ್ಧಿ ಸಮಿತಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆ ಮತ್ತು ಗ್ರಾಮ ಪಂಚಾಯಿತಿ ಕುವೆಟ್ಟು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ಕನ್ನಡಕ ವಿತರಣೆ ಹಾಗೂ ಉಚಿತ ಮಹಿಳೆಯರ ಕ್ಯಾನ್ಸರ್ ತಪಾಸಣಾ ಶಿಬಿರ ಫೆ.15 ರಂದು ಗುರುವಾಯನಕೆರೆ ದ .ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಖ್ಯಾತ ಶಸ್ತ್ರ ಚಿಕಿತ್ಸಾ ಹಾಗೂ ಕ್ಯಾನ್ಸರ್ ಚಿಕಿತ್ಸಾ ತಜ್ಞ ಡಾ. ಎಲ್ ರೋಯ್ ಸಲ್ಡಾನ್ಹಾ ಕ್ಯಾನ್ಸರ್ ಚಿಕಿತ್ಸಾ ಬಗ್ಗೆ ಮಾಹಿತಿ ನೀಡಿದರು.

ಈ ವೇಳೆ ಔಷಧ ವಿಭಾಗದ ಡಾ| ಪ್ರಕಾಶ್ ಶೆಣೈ, ಮೂಳೆ ಶಸ್ತ್ರ ಚಿಕಿತ್ಸಾಕ ಡಾ| ವಿಲ್ಬರ್ ಕುಟಿನ್ಹೊ, ಪ್ರಸೂತಿ ಸ್ತ್ರೀರೋಗ ತಜ್ಞೆ ಡಾ. ಜೆಸ್ಸಿ ಮರಿಯಾ ಡಿಸೋಜ, ಮಕ್ಕಳ ತಜ್ಞ ಡಾ| ಬಾಲಕೃಷ್ಣ, ಚರ್ಮರೋಗ ತಜ್ಞ ಡಾ| ನಾಗಭೂಷಣ್ ಹೆಗ್ಡೆ ಉಪಸ್ಥಿತರಿದ್ದರು.

ಶಿಬಿರದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ಉಚಿತ ಗರ್ಭಕಂಠದ ಕ್ಯಾನ್ಸರ್ ಪರೀಕ್ಷೆ, ಉಚಿತ ಇ.ಸಿ.ಜಿ. . ಉಚಿತ ಕ್ಯಾನ್ಸರ್ ತಪಾಸಣೆ, ಉಚಿತ ಔಷಧಿ 50% ರಿಯಾಯಿತಿಯಲ್ಲಿ ರಕ್ತಪರೀಕ್ಷೆ ಮಾಡಲಾಯಿತು. ಈ ವೇಳೆ ಉಚಿತ ಹೆಲ್ತ್ ಕಾರ್ಡ್ ನೀಡಲಾಯಿತು. 125 ಕ್ಕೂ ಹೆಚ್ಚಿನ ಜನರು ಶಿಬಿರದ ಸದುಪಯೋಗವನ್ನು ಪಡೆದುಕೊಂಡು. 25 ಮಂದಿ ಗೆ ಉಚಿತವಾಗಿ ಕನ್ನಡಕವನ್ನು ವಿತರಿಸಲಾಯಿತು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಸಂಪನ್ನ

Suddi Udaya

ಮಾ16: ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವ , ವಂದೇ ಮಾತರಂ, ನನ್ನ ಸೇವೆ ದೇಶಕ್ಕಾಗಿ ಧ್ಯೇಯದೊಂದಿಗೆ ನೇತ್ರಾವತಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ರಿಂದ ದೂರು

Suddi Udaya

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ವಿಜೃಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಶಶಿಧರ ಗೌಡ ಅವಿರೋಧ ಆಯ್ಕೆ

Suddi Udaya

ವಿಧಾನ ಸಭಾ ಚುನಾವಣೆ: ಸಿ.ಆರ್.ಪಿ.ಎಫ್ ತಂಡ ಬೆಳ್ತಂಗಡಿಗೆ

Suddi Udaya
error: Content is protected !!