ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಕಲಿ ಚಿನ್ನದ ಜಾಲಕ್ಕೆ ತಡೆ: ಚಿನ್ನಾಭರಣ ಮೌಲ್ಯಮಾಪಕರ ತುರ್ತು ಸಮಾಲೋಚನಾ ಸಭೆ

​ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನಾದ್ಯಂತ ನಡೆಯುತ್ತಿರುವ ನಕಲಿ ಚಿನ್ನದ ವಂಚನೆ ಜಾಲವನ್ನು ತಡೆಗಟ್ಟಲು ಹಾಗೂ ಮೌಲ್ಯಮಾಪಕರ ಹಿತರಕ್ಷಣೆಗಾಗಿ ಫೆ.14 ರಂದು ಗುರುವಾಯನಕೆರೆಯ ನವಶಕ್ತಿ ರೆಸಿಡೆನ್ಸಿಯಲ್ಲಿ ತುರ್ತು ಸಮಾಲೋಚನೆ ನಡೆಸಲಾಯಿತು. ಸಭೆಯಲ್ಲಿ ತಾಲೂಕಿನ ಎಲ್ಲಾ ಹಿರಿಯ ಚಿನ್ನಾಭರಣ ಮೌಲ್ಯಮಾಪಕರುಗಳು ಉಪಸ್ಥಿತರಿದ್ದು, ವಂಚನೆ ಜಾಲವನ್ನು ಗುರುತಿಸುವ ಮತ್ತು ವೃತ್ತಿಪರ ಜಾಗೃತಿ ಮೂಡಿಸುವ ಕುರಿತು ಎಲ್ಲರಿಗೂ ಅತ್ಯಮೂಲ್ಯ ಮಾರ್ಗದರ್ಶನ ನೀಡಿದರು.

ವಂಚಕರ ಪತ್ತೆ, ಕಮಿಷನ್ ದರ ಹೆಚ್ಚಳ ಹಾಗೂ ಪ್ರಾಮಾಣಿಕ ಚಿನ್ನದ ಆಭರಣ ಮೌಲ್ಯಮಾಪಕರಿಗೆ ವೃತ್ತಿಪರ ರಕ್ಷಣೆ ನೀಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮತ್ತು ಆಯಾಯ ಬ್ಯಾಂಕ್‌ಗಳ ಅಧ್ಯಕ್ಷರುಗಳಿಗೆ ಮನವಿ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಚಿನ್ನಾಭರಣ ಮೌಲ್ಯಮಾಪಕರು ಉಪಸ್ಥಿತರಿದ್ದರು.

Related posts

ಉಜಿರೆ ಅನುಗ್ರಹ ವಿದ್ಯಾಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆ

Suddi Udaya

ಕೊಕ್ಕಡದ ಅಂಗಡಿಯಿಂದ ರೂ.2 ಲಕ್ಷ ಹಣ ಕಳ್ಳತನ ಪ್ರಕರಣ: ಆರೋಪಿಗಳಿಬ್ಬರ ಬಂಧನ

Suddi Udaya

ಜಮಲಾಬಾದ್ ಇದ್ಗದಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಎಕ್ಸಲೆಂಟ್ ಸಂಸ್ಥೆಯಲ್ಲಿ ನವರಾತ್ರಿ ನವಶಕ್ತಿ ಸನ್ಮಾನ ಕಾರ‍್ಯಕ್ರಮ

Suddi Udaya

ಸೆ.7-8: ನಾಲ್ಕೂರುನಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ

Suddi Udaya

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!