September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ-ರೂ 2ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬೊಳ್ಳಾಜೆ- ಡೆಂಜೋಲಿ-ಪಡಂಗಡಿ ರಸ್ತೆ ಕಾಮಗಾರಿಗೆ ಚಾಲನೆ

ಬಳಂಜ: ಬೊಳ್ಳಾಜೆ-ಡೆಂಜೋಲಿ- ಗರ್ಡಾಡಿ ರಸ್ತೆಯು ರೂ 2.00 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದ್ದು ಶಾಸಕ ಹರೀಶ್ ಪೂಂಜರವರು ಕಾಮಗಾರಿಯನ್ನು ಫೆ 16ರಂದು ವೀಕ್ಷಿಸಿದರು.

ಬಳಿಕ ಮಾತನಾಡಿದ ಶಾಸಕರು ಈ ಭಾಗದ ಜನರ ಬಹುದಿನದ ಬೇಡಿಕೆಯಾದ ಈ ರಸ್ತೆಯ ಕಾಮಗಾರಿ ಪ್ರಾರಂಭಗೊಂಡಿದೆ.ಐದೂವರೆ ಮೀಟರ್ ಅಗಲದ ವ್ಯವಸ್ಥಿತ ರಸ್ತೆ ನಿರ್ಮಾಣವಾಗಲಿದ್ದು ಶೀಘ್ರದಲ್ಲಿ ಉದ್ಘಾಟನೆ ನಡೆಸಲಾಗುವುದು ಎಂದರು.

ಕಳೆದ ಹಲವು ವರ್ಷಗಳಿಂದ ಈ ರಸ್ತೆಯು ತೀರ ಹದಗೆಟ್ಟಿದ್ದು ಇದನ್ನು ದುರಸ್ತಿಗೊಳಿಸಬೇಕೆಂಬುದು ಸ್ಥಳೀಯರ ಬಹುದಿನದ ಬೇಡಿಕೆಯಾಗಿತ್ತು. ಈ ಭಾಗದಲ್ಲಿ ನೂರಾರು ಮನೆಗಳಿದ್ದು ದಿನನಿತ್ಯ ವಿದ್ಯಾರ್ಥಿಗಳು, ಉದ್ಯೋಗಸ್ಥರು, ಕೃಷಿಕರು ಬೇರೆ ಕಡೆಗೆ ತೆರಳಲು ಈ ರಸ್ತೆಯನ್ನೇ ಅವಲಂಬಿಸಿದ್ದರು. ಇದೀಗ ರಸ್ತೆ ಕೆಲಸ ಪ್ರಾರಂಭಗೊಂಡಿದ್ದರಿಂದ ಈ ಪ್ರದೇಶದ ಜನರಿಗೆ ಪ್ರಯೋಜನವಾಗಲಿದೆ ಎಂದರು.

ಈ‌ ಸಂದರ್ಭದಲ್ಲಿ ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಕರುಣಾಕರ ಹೆಗ್ಡೆ,ಬೂತ್ ಸಮಿತಿ ಅಧ್ಯಕ್ಷ ಸುರೇಶ್ ಪೂಜಾರಿ ಜೈಮಾತ,ಬಳಂಜ ಗ್ರಾ.ಪಂ ನಿಕಟಪೂರ್ವಾಧ್ಯಕ್ಷೆ ಶೋಭಾ ಕುಲಾಲ್, ಗ್ರಾ‌ಪಂ ಮಾಜಿ‌ ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ ಯೈಕುರಿ, ಬಿಜೆಪಿ ಯುವಮೋರ್ಚಾ ಅಧ್ಯಕ್ಷ ದಿನೇಶ್ ಪೂಜಾರಿ,ಪಡಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಂತೋನಿ ಫೆರ್ನಾಂಡೀಸ್, ಗರ್ಡಾಡಿ ಶಕ್ತಿಕೇಂದ್ರದ ಅಧ್ಯಕ್ಷ ದಿನಕರ ಕುಲಾಲ್, ಪ್ರಮುಖರಾದ ಸಂತೋಷ್ ಕುಮಾರ್ ಕಾಪಿನಡ್ಕ, ರಂಜಿತ್ ಪೂಜಾರಿ ಮಜಲಡ್ಡ,ವಸಂತ ಶೆಟ್ಟಿ ರಾಮನಗರ, ಹರೀಶ್ ವೈ,ಕೃಷ್ಣಪ್ಪ ಪೂಜಾರಿ ಗರ್ಡಾಡಿ, ಸಂದೇಶ್ ಪೊನ್ನೆದಕಲ, ದಿನೇಶ್ ಕೋಟ್ಯಾನ್ ಕುದ್ರೋಟ್ಟು,ವಸಂತ ಪೂಜಾರಿ,ಪದ್ಮನಾಭ ಕುಲಾಲ್,ಸುದೀಶ್ ಅಂತರ,ಪ್ರಣೀತ್ ಹೇರ ಮೊದಲಾದವರು ಉಪಸ್ಥಿತರಿದ್ದರು.

Related posts

ಮಾ.8 ರಿಂದ 11 ರವರೆಗೆ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ವಿದ್ವತ್ ಕಾಲೇಜಿನಿಂದ ಪ್ರತಿಭಾನ್ವೇಷಣೆ ಪರೀಕ್ಷೆ– 2026

Suddi Udaya

ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ

Suddi Udaya

ನಿಡ್ಲೆ : ಅಗ್ರಿಲೀಫ್ ಎಕ್ಸ್‌ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಅಂತರಾಷ್ಟ್ರೀಯ ಮನ್ನಣೆ

Suddi Udaya

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಅಪಾಯದಿಂದ ಪಾರಾದ ಮಕ್ಕಳು

Suddi Udaya

ಮಾ.26-28: ಅಳದಂಗಡಿ ಅಂಗತ್ಯಾರು ಬಾಕಿಮಾರು ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ವಾರ್ಷಿಕ ನೇಮೋತ್ಸವ

Suddi Udaya

ಪಾರೆಂಕಿ: ಪರನೀರು ನಿವಾಸಿ ಮಹಿಳೆ ನಾಪತ್ತೆ: ದೂರು ದಾಖಲು

Suddi Udaya
error: Content is protected !!