July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ಸಾಮೂಹಿಕ ಯೋಗ ಶಿವ ನಮಸ್ಕಾರ

ಬೆಳ್ತಂಗಡಿ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ಕೇಂದ್ರ ಕಛೇರಿ ತುಮಕೂರು, ನೇತ್ರಾವತಿ ವಲಯ‌, ಮಂಗಳೂರು ಹಾಗೂ ಶ್ರೀ ಕ್ಷೇತ್ರ ಸದಾಶಿವ ರುದ್ರ ದೇವಸ್ಥಾನ ಸುರ್ಯ ಇವರ ಸಹಯೋಗದಲ್ಲಿ ಶ್ರೀ ಸದಾಶಿವ ರುದ್ರ ದೇವಸ್ಥಾನದ ಸನ್ನಿಧಾನದಲ್ಲಿ ಬೆಳ್ತಂಗಡಿಯ ಯೋಗಬಂಧುಗಳು ಶಿವರಾತ್ರಿಯ ಪ್ರಯುಕ್ತ ಫೆಬ್ರವರಿ 15 ರಿಂದ ಫೆ. 16 ರ ಮುಂಜಾನೆ 6 ಗಂಟೆಯವರೆಗೆ ಶಿವ ಭಜನೆ, ಶಿವ ಅಷ್ಟೋತ್ತರ ಶತನಾಮಾವಳಿ ಪಠಣ, 108 ಬಾರಿ ಮೃತ್ಯುಂಜಯ ಮಂತ್ರಜಪ‌, 1008 ಬಾರಿ ಶಿವಪಂಚಾಕ್ಷರಿ ಜಪ ಹಾಗೂ 4 ಆವೃತ್ತಿಯಲ್ಲಿ 11 ಬಾರಿ ಯೋಗ ಶಿವ ನಮಸ್ಕಾರ ಕಾರ್ಯಕ್ರಮವು ನಡೆಯಿತು.

ನೂರಾರು ಯೋಗ ಹಾಗೂ ಯೋಗೇತರ ಬಂಧುಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೃತಾರ್ಥರಾದರು‌.
ದೇವಸ್ಥಾನದ ಆಡಳಿತ ಮೊಕ್ತೇಸರ ಡಾ.ಸತೀಶ್ಚಂದ್ರ ಸುರ್ಯಗುತ್ತು ಇವರು ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ರಾಜಶೇಖರ ಅಜ್ರಿ, ಮುನಿರಾಜ ಅಜ್ರಿ ಹಾಗೂ ಸಂಗ್ರಾಮ್ ವೇದಿಕೆಯಲ್ಲಿದ್ದು ಶುಭ ಹಾರೈಸಿದರು. ಪ್ರಾಂತ ಸಂಘಟನಾ ಪ್ರಮುಖರಾದ ಹರೀಶ್, ಜಿಲ್ಲಾ ಸಂಚಾಲಕರಾದ ನಾರಾಯಣ, ಪ್ರಾಂತ ಪ್ರಶಿಕ್ಷಣ ಪ್ರಮುಖರಾದ ಪ್ರತಾಪ್, ಜಿಲ್ಲಾ ಸಹ ಸಂಚಾಲಕ ಯೋಗೀಶ್, ಜಾಲತಾಣ ಪ್ರಮುಖರಾದ ಅನುಪಮಾ ಬೆಳ್ತಂಗಡಿ, ಶಾಖಾ ಸಂಚಾಲಕ ವಸಂತ ಕೆಂಬರ್ಜೆ ಹಾಗೂ ಕಾರ್ಯಕ್ರಮದ ಸಂಚಾಲಕ ಗಣಪತಿ ಉಪಸ್ಥಿತರಿದ್ದರು.

ವಿವರಣೆಯಲ್ಲಿ ಮಾನಸ, ಸುರೇಶ, ಸಂತೋಷ್ ಕರ್ಕೇರ, ಐಶ್ವರ್ಯ, ಕೋಮಲ ಹಾಗೂ ಪ್ರಾತ್ಯಕ್ಷಿಕೆಯಲ್ಲಿ ಆಶಾ, ನಾಗಶ್ರೀ, ಪುಷ್ಪಾ, ರಕ್ಷಿತಾ, ಸೌಮ್ಯ, ಆನಂದ, ಅರುಣ್, ಪ್ರಶಾಂತ‌, ಪ್ರಕಾಶ‌, ನಾಗೇಶ ಇವರುಗಳು ಜೋಡಿಸಿಕೊಂಡಿದ್ದರು.

ಶ್ರೀಮತಿ ಆಶಾ ಹಾಗೂ ರಘುನಾಥ ಶಾಂತಿ ದಂಪತಿಗಳು ಅಗ್ನಿಹೋತ್ರವನ್ನು ನಿರ್ವಹಿಸಿದರು. ಜಿಲ್ಲಾ ಸಮಿತಿಯ ಮಾರ್ಗದರ್ಶನದೊಂದಿಗೆ, ಬೆಳ್ತಂಗಡಿ ಶಾಖೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪ್ರೇಮಲತಾ ಗಣೇಶ್ ಹಾಗೂ ಶಿಕ್ಷಕರಾದ ಸಂತೋಷ್ ಕಾಪಿನಡ್ಕ ಕೋಮಲ ಪ್ರಕಾಶ್ ಇವರ ನೇತೃತ್ವದಲ್ಲಿ ಎಲ್ಲಾ ಯೋಗ ಬಂಧುಗಳ ಸಹಕರಿಸಿದರು.

Related posts

ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಹುದ್ದೆಯಿಂದ ಕೊಕ್ಕಡ ಕೊಲ್ಲಾಜೆ ನಿವಾಸಿ ಪವನ್ ಸಾಲ್ಯಾನ್ ಗೆ ಮುಕ್ತಿ

Suddi Udaya

ದರೋಡೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಬಿಜೆಪಿ ಶಾಸಕರುಗಳಿಂದ ವಿಧಾನ ಸೌಧದ ಎದುರು ಭಿತ್ತಿಪತ್ರ ಪ್ರದರ್ಶನ: “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಗಮನ ಸೆಳೆದ ಶಾಸಕ ಹರೀಶ್ ಪೂಂಜ ಪ್ರದರ್ಶಿಸಿದ ಬಿತ್ತಿಪತ್ರ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬಂಗಾಡಿ ಸ.ಪ್ರೌ. ಶಾಲೆಗೆ ಗಣಿತದ ಅನರ್ಘ್ಯ ಪ್ರತಿಭೆ ರಾಷ್ಟ್ರಪತಿ ಪುರಸ್ಕೃತ ಬಸವರಾಜ್ ಶಂಕರ್ ಉಮ್ರಾಣಿ ಭೇಟಿ, ವಿದ್ಯಾರ್ಥಿಗಳೊಂದಿಗೆ ಸಂವಾದ

Suddi Udaya

ಡಿ.7: ಪುದುವೆಟ್ಟುವಿನಲ್ಲಿ ಬಾಯಿತ್ಯಾರು ವೆಲ್ಡಿಂಗ್ & ಹಾರ್ಡ್‌ವೇ‌ರ್ ಸಂಸ್ಥೆ ಶುಭಾರಂಭ

Suddi Udaya
error: Content is protected !!