September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಕ್ಕಾಡಿಗೋಳಿ ಶಾಲೆಯಲ್ಲಿ ಮೆಟ್ರಿಕ್ ಮೇಳ

ಹೊಕ್ಕಾಡಿಗೋಳಿ : ಹೊಕ್ಕಾಡಿಗೋಳಿ ಶಾಲೆಯಲ್ಲಿ ಮಕ್ಕಳ ಮೆಟ್ರಿಕ್ ಮೇಳ ಫೆ.14 ರಂದು ನಡೆಯಿತು.

ಎಸ್ ಡಿ ಎಂ ಸಿ ಅಧ್ಯಕ್ಷ ದಿನೇಶ್ ಹುಲಿಮೇರು ಇವರ ಅಧ್ಯಕ್ಷತೆಯಲ್ಲಿ ಮೆಟ್ರಿಕ್ ಮೇಳದ ಉದ್ಘಾಟನೆಯನ್ನು ರಕ್ಷಣ್ ಮೆಲಾಂಟ, ಉದ್ಯಮಿ ಕೃಷ್ಣ ಕ್ರಷರ್ 12 ಕವಲು ನೆರವೇರಿಸಿಕೊಟ್ಟು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಆರಂಬೋಡಿ ಪಿಡಿಓ ಗಣೇಶ್ ಶೆಟ್ಟಿ ಮಾತನಾಡಿ, ಮೆಟ್ರಿಕ್ ಮೇಳವು ವಿದ್ಯಾರ್ಥಿಗಳಲ್ಲಿ ಸೃಜನಶೀಲತೆಯನ್ನು ಉತ್ತೇಜಿಸುವುದರ ಜೊತೆಗೆ ವ್ಯವಹಾರ ಜ್ಞಾನವನ್ನು ಮೂಡಿಸುವ ಅದ್ಭುತ ಚಟುವಟಿಕೆ ಹಾಗೂ ಈ ಮೇಳದ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವು ಬೆಳೆಯುತ್ತದೆ ಎಂಬುದಾಗಿ ತಿಳಿಸಿದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಘವೇಂದ್ರ ಭಟ್, ಶಶಿಧರ್ ಕಲ್ಲಾಪು ಹಾಗೂ ಕಿರಣ್ ಮಂಜಿಲ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಎಸ್ ಡಿ ಎಂ ಸಿ ಸದಸ್ಯರು, ತಾಯಂದಿರ ಸಮಿತಿ ಸದಸ್ಯರು, ಹಳೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಊರಿನವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ವ್ಯಾಪಾರ ಮಾಡಿ ಪ್ರೋತ್ಸಾಹಿಸಿದರು.
ಶಾಲಾ ಮುಖ್ಯೋಪಾಧ್ಯಾಯರಾದ ಸುಮಿತ್ರ ಎಸ್. ಸ್ವಾಗತಿಸಿ, ಶಿಕ್ಷಕಿಯರಾದ ಸುಚಿತ್ರ, ಮೆಟಿಲ್ಡ ಡಿಸೋಜ, ಸಿಲ್ವಿಯಾ ಮಿರಾಂದ, ಶುಭವತಿ, ಸುತೀಕ್ಷಾ ಹಾಗೂ ಪ್ರಮೀಕ್ಷಾ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.

Related posts

ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ: ನಾಲ್ಕು ಮತ್ತು ಐದನೇ ತಂಡದ ಪ್ರಮಾಣ ಪತ್ರ ವಿತರಣಾ ಸಮಾರಂಭ

Suddi Udaya

ಭಾರತೀಯ ಸೇನೆಗೆ ಮಿತ್ತಬಾಗಿಲು ಪುನೀತ್ ಕುಮಾರ್ ಆಯ್ಕೆ

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya

ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರಿಂದ ಅರಸಿನಮಕ್ಕಿ ಪಂ.ಅ. ಅಧಿಕಾರಿಯವರಿಗೆ ಮನವಿ

Suddi Udaya

ಅಂಡಿಂಜೆ ಮಾಳಿಗೆಮನೆ ಗುಣಪಾಲ ಪಕ್ಕಳ ನಿಧನ

Suddi Udaya

ಬೆಳ್ತಂಗಡಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಲ್ಲಿ ಜುಂಬಾ ಫಿಟ್ನೆಸ್ ತರಬೇತಿ ಉದ್ಘಾಟನೆ

Suddi Udaya
error: Content is protected !!