March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

ಬೆಳ್ತಂಗಡಿ: ಫೆ.17 ರಂದು ಮಂಗಳೂರಿನಲ್ಲಿ ಕರ್ನಾಟಕ ಸರಕಾರದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರವರನ್ನು ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ಎಂಬಲ್ಲಿ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿ ಸುಮಂತ್ ನಾಳ ದೇವಸ್ಥಾನಕ್ಕೆ ಧನುಪೂಜೆಗೆ ಹೋಗುವ ತೋಟದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಪ್ರಕರಣದ ತನಿಖೆಯು ನಿಧಾನಗತಿಯಲ್ಲಿ ಸಾಗುತ್ತಿದೆ, ಕೂಡಲೇ ಆರೋಪಿಗಳನ್ನು ಪತ್ತೆಹಚ್ಚಿ ನಮಗೆ ನ್ಯಾಯ ದೊರಕಿಸಿಕೊಡಬೇಕೆಂದು ಬಾಲಕನ ಪೋಷಕರು ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ನೇತೃತ್ವದಲ್ಲಿ ಮನವಿ ಸಲ್ಲಿಸಿದರು.

ಸಚಿವರು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಅರುಣ್ ಕುಮಾರ್ ರವರನ್ನು ಮತ್ತು ಪಶ್ಚಿಮ ವಲಯದ ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್ ರವರಿಂದ ಎಲ್ಲಾ ತನಿಖಾ ವರದಿಯನ್ನು ಕೇಳಿ ತಿಳಿದುಕೊಂಡರು. ಅರುಣ್ ಕುಮಾರ್ ರವರು ಪ್ರತ್ಯೇಕ ತಂಡ ಇಲ್ಲಿಯವರೆಗೆ ಮಾಡಿರುವ ತನಿಖೆಯ ಪ್ರಗತಿ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು. ಸಚಿವರು ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸುವುದರ ಬಗ್ಗೆ ನಿರ್ದೇಶನವನ್ನು ನೀಡಿದರು ಮತ್ತು ನೊಂದ ಪೋಷಕರಿಗೆ ಸಾಂತ್ವನ ಕೂಡ ಹೇಳಿದರು.

ಈ ಸಂದರ್ಭದಲ್ಲಿ ನಾಳ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ಕುಮಾರ್, ದ.ಕ.ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ ಹಾಜರಿದ್ದರು.

Related posts

ತರ್ಬೀಯತುಲ್ ಇಸ್ಲಾಂ ದಮ್ಮಾಂ ಕರ್ನಾಟಕ ಮದ್ರಸದ ಮಿಹ್ರಜಾನುಲ್ ಬಿದಾಯ ವರ್ಷಾರಂಭ ಅಧ್ಯಯನ ಶಿಬಿರ

Suddi Udaya

ಖಾಸಗಿ ವಿಮಾಕಂಪೆನಿಗಳಿಂದ ವಿಮಾ ಕಾನೂನಿನ ಉಲ್ಲಂಘನೆ ಆರೋಪ: ಜನಸಾಮಾನ್ಯರಿಗೆ ಅನ್ಯಾಯ: ಹಷ೯ ಡಿ’ಸೋಜ

Suddi Udaya

ಮೇ 12-16 ಉಜಿರೆ ಎಸ್ ಡಿ ಎಂ ನ್ಯಾಚುರೋಪತಿ ಕಾಲೇಜಿನಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನದ ಮಹಾಸಮ್ಮೇಳನ

Suddi Udaya

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜನ್ಮ ಕಲ್ಯಾಣೋತ್ಸವ

Suddi Udaya

ಉಜಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ

Suddi Udaya
error: Content is protected !!