July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

ಬೆಳ್ತಂಗಡಿ: ಫೆ.17 ರಂದು ಮಂಗಳೂರಿನಲ್ಲಿ ಕರ್ನಾಟಕ ಸರಕಾರದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರವರನ್ನು ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ಎಂಬಲ್ಲಿ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿ ಸುಮಂತ್ ನಾಳ ದೇವಸ್ಥಾನಕ್ಕೆ ಧನುಪೂಜೆಗೆ ಹೋಗುವ ತೋಟದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಪ್ರಕರಣದ ತನಿಖೆಯು ನಿಧಾನಗತಿಯಲ್ಲಿ ಸಾಗುತ್ತಿದೆ, ಕೂಡಲೇ ಆರೋಪಿಗಳನ್ನು ಪತ್ತೆಹಚ್ಚಿ ನಮಗೆ ನ್ಯಾಯ ದೊರಕಿಸಿಕೊಡಬೇಕೆಂದು ಬಾಲಕನ ಪೋಷಕರು ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ನೇತೃತ್ವದಲ್ಲಿ ಮನವಿ ಸಲ್ಲಿಸಿದರು.

ಸಚಿವರು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಅರುಣ್ ಕುಮಾರ್ ರವರನ್ನು ಮತ್ತು ಪಶ್ಚಿಮ ವಲಯದ ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್ ರವರಿಂದ ಎಲ್ಲಾ ತನಿಖಾ ವರದಿಯನ್ನು ಕೇಳಿ ತಿಳಿದುಕೊಂಡರು. ಅರುಣ್ ಕುಮಾರ್ ರವರು ಪ್ರತ್ಯೇಕ ತಂಡ ಇಲ್ಲಿಯವರೆಗೆ ಮಾಡಿರುವ ತನಿಖೆಯ ಪ್ರಗತಿ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು. ಸಚಿವರು ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸುವುದರ ಬಗ್ಗೆ ನಿರ್ದೇಶನವನ್ನು ನೀಡಿದರು ಮತ್ತು ನೊಂದ ಪೋಷಕರಿಗೆ ಸಾಂತ್ವನ ಕೂಡ ಹೇಳಿದರು.

ಈ ಸಂದರ್ಭದಲ್ಲಿ ನಾಳ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ಕುಮಾರ್, ದ.ಕ.ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ ಹಾಜರಿದ್ದರು.

Related posts

ದಿ| ವಸಂತ ಬಂಗೇರರ ಮನೆಗೆ ರಾಜ್ಯದ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯ ಭೇಟಿ

Suddi Udaya

ಫೆ.22: ಟೀಂ ಅಭಯಹಸ್ತ ಕಾರ್ಯಕ್ರಮದ ಸಮಾಲೋಚನಾಸಭೆ: ಸಂದೀಪ್ ಸುಂದರ್ ನೀರಲ್ಕೆ

Suddi Udaya

ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ಡಿ.17 : ರೆಖ್ಯ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ವೃಂದ ಹಾಗೂ ವಿಶ್ವ ಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೃಹತ್ ಪಾದಯಾತ್ರೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ:

Suddi Udaya
error: Content is protected !!