March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ಮಹಾ ಶಿವರಾತ್ರಿ ಉತ್ಸವ ಆಚರಣೆ

ಇಂದಬೆಟ್ಟು: ಬಂಗಾಡಿ ಸೀಮೆಯ ಇತಿಹಾಸ ಪ್ರಸಿದ್ಧ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಉತ್ಸವವು ಫೆ.15 ರಂದು ದೇವಸ್ಥಾನದ ಪ್ರಧಾನ ಅರ್ಚಕ ಆನಂದ ಭಟ್ ರವರು ದೀಪ ಪ್ರಜ್ವಲಿಸಿ ಮಾರ್ಗದರ್ಶಕರಾದ ಡಾ| ಪ್ರದೀಪ್ ಎ ರವರು ಶಿವ ಸಹಸ್ರನಾಮವನ್ನು ಭಕ್ತಾದಿಗಳು ಪಠಿಸಿದರು.

ಯಾಮದ ಪೂಜೆಯೊಂದಿಗೆ ಉತ್ಸವವು ಆರಂಭವಾಗಿ ಶ್ರೀ ಅರ್ಧನಾರೀಶ್ವರ ಸ್ವಾಮಿಗೆ ಒಟ್ಟು 9 ಯಾಮದ ಪೂಜೆ, ರುದ್ರ ಪಠಣ ದೊಂದಿಗೆ ಶತರುದ್ರಾಭಿಷೇಕ, ಮಧ್ಯಾಹ್ನ ಪ್ರಸಾದ ಭೋಜನ, ಸಂಜೆ ಇಂದಬೆಟ್ಟು, ನಾವೂರು, ನಡ ಕನ್ಯಾಡಿ, ಮಿತ್ತಬಾಗಿಲು, ಮಲವಂತಿಗೆ, ಕಡಿರುದ್ಯಾವರ ಗ್ರಾಮದಿಂದ ಹಾಗೂ ತಾಲೂಕಿನ ವಿವಿಧ ಭಾಗದ ಭಕ್ತರಿಂದ ಶಿವನಾಮ ಸಂಕೀರ್ತನೆಯೊಂದಿಗೆ ಕ್ಷೇತ್ರಕ್ಕೆ ಪಾದಯಾತ್ರೆ, ವಿವಿಧ ಭಜನಾ ತಂಡಗಳಿಂದ ಭಕ್ತಿ ಗಾಯನ ಕಮ್ಮಟ ಭಜನೆ, ರಂಗಪೂಜೆ, ಉಪಹಾರ ಹಾಗೂ ಭಕ್ತರಿಂದ ಪ್ರಾತಃ ಕಾಲದ ಯಾಮದ ಪೂಜೆ ವರೆಗೆ ಜಾಗರಣೆ ನಡೆದು ಸಾವಿರಾರು ಭಕ್ತಾದಿಗಳ ಪಾಲ್ಗೊಳ್ಳುವಿಕೆಯಿಂದ ವಿಜೃಂಭಣೆಯಿಂದ ನಡೆದು ಮಹಾ ಶಿವರಾತ್ರಿ ಉತ್ಸವವು ಸಂಪನ್ನಗೊಂಡಿತು.

ಕಾರ್ಯಕ್ರಮದಲ್ಲಿ ಕಮ್ಮಟ ಭಜನೆ ದೀಪ ಪ್ರಜ್ವಲನೆಯನ್ನು ಗ್ರಾಮದ ಹಿರಿಯರು ಕರ್ನಾಟಕ ಸರ್ಕಾರದ ಮಾಜಿ ಸಚಿವ ಕೆ. ಗಂಗಾಧರ ಗೌಡ ನೆರವೇರಿಸಿದರು., ಎಂ.ಎಲ್.ಸಿ ಪ್ರತಾಪ್ ಸಿಂಹ ನಾಯಕ್ ದಂಪತಿಗಳು, ಮಾರ್ಗದರ್ಶಕರಾದ ಡಾ| ಪ್ರದೀಪ್ ಎ ರವರು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್. ಲಕ್ಷ್ಮಣ ಗೌಡ, ಸಮಿತಿಯ ಪದಾಧಿಕಾರಿಗಳು, ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಇಂದಬೆಟ್ಟು ಗುತ್ತುವಿನ ಅಜಿತ್ ಕುಮಾರ್ ಜೈನ್, ಊರಿನ ಗಣ್ಯರು, ಹಿರಿಯರು ಕಿರಿಯರು ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಶ್ರೀ ಅರ್ಧನಾರೀಶ್ವರ ಸ್ವಾಮಿಯ ಅನುಗ್ರಹಕ್ಕೆ ಪಾತ್ರರಾದರು.

Related posts

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಧರ್ಮಸ್ಥಳ ಹಾಗೂ ಶಾಂತಿವನ ಭೇಟಿ

Suddi Udaya

ಮಡಂತ್ಯಾರು ಸಹಕಾರಿ ಸಂಘದ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ನಿರ್ದೇಶಕ ಸ್ಥಾನ 7 ರಿಂದ 9 ಕ್ಕೆ ಏರಿಕೆ

Suddi Udaya

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಕನ್ನಡ, ತುಳು ಸಾರಸ್ವತ ಲೋಕದ ಖ್ಯಾತ ಸಾಹಿತಿ, ಯಕ್ಷಗಾನ ಪ್ರಸಂಗಕರ್ತರಾಗಿ ಪ್ರಸಿದ್ಧರಾಗಿದ್ದ ಡಾ. ಅಮೃತ ಸೋಮೇಶ್ವರ ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಸಂಜೀವ ಪೂಜಾರಿ ನಾಲ್ಕೂರು ನಿಧನ

Suddi Udaya

ಬೆಳ್ತಂಗಡಿಯಲ್ಲಿ ಬಿ.ಎ ಮೊಬೈಲ್ ಮತ್ತು ವಾಚ್ ಮಳಿಗೆ ಶುಭಾರಂಭ

Suddi Udaya
error: Content is protected !!