ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ಮಹಾ ಶಿವರಾತ್ರಿ ಉತ್ಸವ ಆಚರಣೆ

ಇಂದಬೆಟ್ಟು: ಬಂಗಾಡಿ ಸೀಮೆಯ ಇತಿಹಾಸ ಪ್ರಸಿದ್ಧ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಉತ್ಸವವು ಫೆ.15 ರಂದು ದೇವಸ್ಥಾನದ ಪ್ರಧಾನ ಅರ್ಚಕ ಆನಂದ ಭಟ್ ರವರು ದೀಪ ಪ್ರಜ್ವಲಿಸಿ ಮಾರ್ಗದರ್ಶಕರಾದ ಡಾ| ಪ್ರದೀಪ್ ಎ ರವರು ಶಿವ ಸಹಸ್ರನಾಮವನ್ನು ಭಕ್ತಾದಿಗಳು ಪಠಿಸಿದರು.

ಯಾಮದ ಪೂಜೆಯೊಂದಿಗೆ ಉತ್ಸವವು ಆರಂಭವಾಗಿ ಶ್ರೀ ಅರ್ಧನಾರೀಶ್ವರ ಸ್ವಾಮಿಗೆ ಒಟ್ಟು 9 ಯಾಮದ ಪೂಜೆ, ರುದ್ರ ಪಠಣ ದೊಂದಿಗೆ ಶತರುದ್ರಾಭಿಷೇಕ, ಮಧ್ಯಾಹ್ನ ಪ್ರಸಾದ ಭೋಜನ, ಸಂಜೆ ಇಂದಬೆಟ್ಟು, ನಾವೂರು, ನಡ ಕನ್ಯಾಡಿ, ಮಿತ್ತಬಾಗಿಲು, ಮಲವಂತಿಗೆ, ಕಡಿರುದ್ಯಾವರ ಗ್ರಾಮದಿಂದ ಹಾಗೂ ತಾಲೂಕಿನ ವಿವಿಧ ಭಾಗದ ಭಕ್ತರಿಂದ ಶಿವನಾಮ ಸಂಕೀರ್ತನೆಯೊಂದಿಗೆ ಕ್ಷೇತ್ರಕ್ಕೆ ಪಾದಯಾತ್ರೆ, ವಿವಿಧ ಭಜನಾ ತಂಡಗಳಿಂದ ಭಕ್ತಿ ಗಾಯನ ಕಮ್ಮಟ ಭಜನೆ, ರಂಗಪೂಜೆ, ಉಪಹಾರ ಹಾಗೂ ಭಕ್ತರಿಂದ ಪ್ರಾತಃ ಕಾಲದ ಯಾಮದ ಪೂಜೆ ವರೆಗೆ ಜಾಗರಣೆ ನಡೆದು ಸಾವಿರಾರು ಭಕ್ತಾದಿಗಳ ಪಾಲ್ಗೊಳ್ಳುವಿಕೆಯಿಂದ ವಿಜೃಂಭಣೆಯಿಂದ ನಡೆದು ಮಹಾ ಶಿವರಾತ್ರಿ ಉತ್ಸವವು ಸಂಪನ್ನಗೊಂಡಿತು.

ಕಾರ್ಯಕ್ರಮದಲ್ಲಿ ಕಮ್ಮಟ ಭಜನೆ ದೀಪ ಪ್ರಜ್ವಲನೆಯನ್ನು ಗ್ರಾಮದ ಹಿರಿಯರು ಕರ್ನಾಟಕ ಸರ್ಕಾರದ ಮಾಜಿ ಸಚಿವ ಕೆ. ಗಂಗಾಧರ ಗೌಡ ನೆರವೇರಿಸಿದರು., ಎಂ.ಎಲ್.ಸಿ ಪ್ರತಾಪ್ ಸಿಂಹ ನಾಯಕ್ ದಂಪತಿಗಳು, ಮಾರ್ಗದರ್ಶಕರಾದ ಡಾ| ಪ್ರದೀಪ್ ಎ ರವರು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್. ಲಕ್ಷ್ಮಣ ಗೌಡ, ಸಮಿತಿಯ ಪದಾಧಿಕಾರಿಗಳು, ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಇಂದಬೆಟ್ಟು ಗುತ್ತುವಿನ ಅಜಿತ್ ಕುಮಾರ್ ಜೈನ್, ಊರಿನ ಗಣ್ಯರು, ಹಿರಿಯರು ಕಿರಿಯರು ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಶ್ರೀ ಅರ್ಧನಾರೀಶ್ವರ ಸ್ವಾಮಿಯ ಅನುಗ್ರಹಕ್ಕೆ ಪಾತ್ರರಾದರು.

Related posts

ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ

Suddi Udaya

ಇಚಿಲಂಪಾಡಿ‌ ನಿವಾಸಿ ಜಯಂತ್ ಟಿ. ಧರ್ಮಸ್ಥಳ ಠಾಣೆಗೆ ದೂರು: ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಸ್ಪಂದನ ಬಂಟರ ಸೇವಾ ತಂಡದ 25ನೇ ಸೇವಾ ಕಾರ್ಯಕ್ರಮ: 25 ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಶಿಶಿರ್ ಜಯವಿಕ್ರಮ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಶುಭ ಕಾರ್ಯಕ್ರಮಕ್ಕೆ ಹೋಗಿ ಹಿಂತಿರುಗಿದಾಗ ನಾಲ್ಕೂರು ಬೊಕ್ಕಸ ಬಳಿ ಬೈಕ್ ಸ್ಕಿಡ್ : ಗಂಭೀರ ಗಾಯಗೊಂಡ ಮಹಿಳೆ ಸಾವು

Suddi Udaya

ಗೋಳಿಯಂಗಡಿಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು

Suddi Udaya
error: Content is protected !!