25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ಮಹಾ ಶಿವರಾತ್ರಿ ಉತ್ಸವ ಆಚರಣೆ

ಇಂದಬೆಟ್ಟು: ಬಂಗಾಡಿ ಸೀಮೆಯ ಇತಿಹಾಸ ಪ್ರಸಿದ್ಧ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಉತ್ಸವವು ಫೆ.15 ರಂದು ದೇವಸ್ಥಾನದ ಪ್ರಧಾನ ಅರ್ಚಕ ಆನಂದ ಭಟ್ ರವರು ದೀಪ ಪ್ರಜ್ವಲಿಸಿ ಮಾರ್ಗದರ್ಶಕರಾದ ಡಾ| ಪ್ರದೀಪ್ ಎ ರವರು ಶಿವ ಸಹಸ್ರನಾಮವನ್ನು ಭಕ್ತಾದಿಗಳು ಪಠಿಸಿದರು.

ಯಾಮದ ಪೂಜೆಯೊಂದಿಗೆ ಉತ್ಸವವು ಆರಂಭವಾಗಿ ಶ್ರೀ ಅರ್ಧನಾರೀಶ್ವರ ಸ್ವಾಮಿಗೆ ಒಟ್ಟು 9 ಯಾಮದ ಪೂಜೆ, ರುದ್ರ ಪಠಣ ದೊಂದಿಗೆ ಶತರುದ್ರಾಭಿಷೇಕ, ಮಧ್ಯಾಹ್ನ ಪ್ರಸಾದ ಭೋಜನ, ಸಂಜೆ ಇಂದಬೆಟ್ಟು, ನಾವೂರು, ನಡ ಕನ್ಯಾಡಿ, ಮಿತ್ತಬಾಗಿಲು, ಮಲವಂತಿಗೆ, ಕಡಿರುದ್ಯಾವರ ಗ್ರಾಮದಿಂದ ಹಾಗೂ ತಾಲೂಕಿನ ವಿವಿಧ ಭಾಗದ ಭಕ್ತರಿಂದ ಶಿವನಾಮ ಸಂಕೀರ್ತನೆಯೊಂದಿಗೆ ಕ್ಷೇತ್ರಕ್ಕೆ ಪಾದಯಾತ್ರೆ, ವಿವಿಧ ಭಜನಾ ತಂಡಗಳಿಂದ ಭಕ್ತಿ ಗಾಯನ ಕಮ್ಮಟ ಭಜನೆ, ರಂಗಪೂಜೆ, ಉಪಹಾರ ಹಾಗೂ ಭಕ್ತರಿಂದ ಪ್ರಾತಃ ಕಾಲದ ಯಾಮದ ಪೂಜೆ ವರೆಗೆ ಜಾಗರಣೆ ನಡೆದು ಸಾವಿರಾರು ಭಕ್ತಾದಿಗಳ ಪಾಲ್ಗೊಳ್ಳುವಿಕೆಯಿಂದ ವಿಜೃಂಭಣೆಯಿಂದ ನಡೆದು ಮಹಾ ಶಿವರಾತ್ರಿ ಉತ್ಸವವು ಸಂಪನ್ನಗೊಂಡಿತು.

ಕಾರ್ಯಕ್ರಮದಲ್ಲಿ ಕಮ್ಮಟ ಭಜನೆ ದೀಪ ಪ್ರಜ್ವಲನೆಯನ್ನು ಗ್ರಾಮದ ಹಿರಿಯರು ಕರ್ನಾಟಕ ಸರ್ಕಾರದ ಮಾಜಿ ಸಚಿವ ಕೆ. ಗಂಗಾಧರ ಗೌಡ ನೆರವೇರಿಸಿದರು., ಎಂ.ಎಲ್.ಸಿ ಪ್ರತಾಪ್ ಸಿಂಹ ನಾಯಕ್ ದಂಪತಿಗಳು, ಮಾರ್ಗದರ್ಶಕರಾದ ಡಾ| ಪ್ರದೀಪ್ ಎ ರವರು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್. ಲಕ್ಷ್ಮಣ ಗೌಡ, ಸಮಿತಿಯ ಪದಾಧಿಕಾರಿಗಳು, ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಇಂದಬೆಟ್ಟು ಗುತ್ತುವಿನ ಅಜಿತ್ ಕುಮಾರ್ ಜೈನ್, ಊರಿನ ಗಣ್ಯರು, ಹಿರಿಯರು ಕಿರಿಯರು ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಶ್ರೀ ಅರ್ಧನಾರೀಶ್ವರ ಸ್ವಾಮಿಯ ಅನುಗ್ರಹಕ್ಕೆ ಪಾತ್ರರಾದರು.

Related posts

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ವತಿಯಿಂದ ನಗರ ಸಂಕೀರ್ತಣೆ ಹಾಗೂ ರಾಮ ತಾರಕ ಮಂತ್ರ ಹೋಮ

Suddi Udaya

ತೋಟತ್ತಾಡಿ : 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya

ಬೆಳ್ತಂಗಡಿ: ತಾಲೂಕಿನ ಹೋಬಳಿವಾರು ಸ್ವೀಪ್ ತರಬೇತಿ ಕಾರ್ಯಕ್ರಮ

Suddi Udaya

ಕಳೆಂಜ: ಪಿಲತ್ತಡಿ ನಿವಾಸಿ ಪುಪ್ಪರಾಜ್ ಭಾರತೀಯ ಭೂಸೇನೆಗೆ ಆಯ್ಕೆ

Suddi Udaya

ಬಂದಾರುನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ

Suddi Udaya

ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ಯಾತ್ರೆ” : ಬೆಳ್ತಂಗಡಿ ಶ್ರೀ ಕುತ್ಯಾರು ದೇವಸ್ಥಾನ ಬಳಿಯಿಂದ ಲಾಯಿಲಾದ ವರೆಗೆ ಬೃಹತ್ ರೋಡ್ ಶೋ ಹಾಗೂ ಬೈಕ್ ಜಾಥಾ

Suddi Udaya
error: Content is protected !!