September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ  ವಿದ್ಯಾರ್ಥಿಗಳ ಅಮೋಘ ಸಾಧನೆ

ಕಾರ್ಕಳ: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯವರು ನಡೆಸುವ  ಅತಿ ಕ್ಲಿಷ್ಟಕರವೆನಿಸಿದ  ಪರೀಕ್ಷೆಗಳಲ್ಲೊಂದಾದ  ಜೆಇಇ ಮೈನ್ಸ್ (ಸೆಷನ್-1) 2026 ನೇ ಸಾಲಿನ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ 102 ಮಂದಿ ವಿದ್ಯಾರ್ಥಿಗಳು 90 ಪರ್ಸೆಂಟೈಲ್ ಗಿಂತ ಅಧಿಕ ಅಂಕವನ್ನು ಪಡೆದು ವಿಶಿಷ್ಟ ಸಾಧನೆ ಗೈದು ಮುಂದಿನ ಹಂತದ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ತೇರ್ಗಡೆಯನ್ನು ಹೊಂದಿದ್ದಾರೆ.

ವಿದ್ಯಾರ್ಥಿಗಳಾದ ನಮಿತ್ ಕೃಷ್ಣಮೂರ್ತಿ ಹೆಗಡೆ – 99.4981217 ಪರ್ಸೆಂಟೈಲ್, ನಾಗದೇವ್ ಎಂ.ಜಿ. – 99.3310617  ಪರ್ಸೆಂಟೈಲ್, ಪ್ರಥಮ್ ತಮ್ಮಣ್ಣ ಗೌಡರ್ – 99.1416986 ಪರ್ಸೆಂಟೈಲ್ ಪಡೆದುಕೊಳ್ಳುವ ಮೂಲಕ ವಿಶಿಷ್ಟ ಶ್ರೇಣಿಗಳಿಸಿದ್ದಾರೆ.

 ತೇಜಸ್ ಆರ್. ಬಿ.- 98.9615457, ನಿನಾದ್ ರಾಜೇಶ್ ನಾಯ್ಕ್- 98.9463580, ಧನುಷ್  ಹೆಚ್. ಎ.- 98.5706065, ಸಂವಿತ್‌ ಅಮಿತ್ ಗೋಕರ್ಣ- 98.5706065, ದೃಶ್ಯ್‌- 98.4130581, ಸುಕ್ಷಿತ್ ಗಿರೀಶ್ ಗೌಡ- 98.3503880, ತೇಜಸ್  ಎನ್. ಇ. – 98.3227894, ತೇಜಸ್ ಹೆಗಡೆ ಎಚ್. ಡಿ.- 98.1925416, ಅಕ್ಷತಾ ಮೋಹನ್ ಹೆಗಡೆ – 98.1682710, ಪ್ರಜ್ವಲ್ ಭಟ್- 98.0498968, ವಿಶ್ವೇಶ್ ಎನ್. ಎಚ್.- 98.0348799 ಪರ್ಸೆಂಟೈಲ್ಗಳನ್ನು ಪಡೆದುಕೊಂಡಿದ್ದಾರೆ.


99 ಪರ್ಸೆಂಟೈಲ್ ಗಿಂತ ಅಧಿಕ 03 ಮಂದಿ ವಿದ್ಯಾರ್ಥಿಗಳು, 98 ಪರ್ಸೆಂಟೈಲ್ ಗಿಂತ ಅಧಿಕ 14 ವಿದ್ಯಾರ್ಥಿಗಳು, 95 ಪರ್ಸೆಂಟೈಲ್ ಗಿಂತ ಅಧಿಕ 45 ವಿದ್ಯಾರ್ಥಿಗಳು, 90 ಪರ್ಸೆಂಟೈಲ್ ಗಿಂತ ಅಧಿಕ 102 ವಿದ್ಯಾರ್ಥಿಗಳು ಅಂಕಗಳನ್ನು ಪಡೆದುಕೊಂಡು ಮುಂದಿನ ಹಂತದ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆಯನ್ನು ಗಳಿಸಿಕೊಂಡಿದ್ದಾರೆ.

Related posts

ಮಡಂತ್ಯಾರು: ವಸಂತ ಶೆಟ್ಟಿ ನಿಧನ

Suddi Udaya

ಕಡಿರುದ್ಯಾವರ: ಕುಚ್ಚೂರು ಬೈಲು ಶ್ರೀವನದುರ್ಗಾದೇವಿ ದೇವಸ್ಥಾನದ ಗರ್ಭಗುಡಿಗೆ ನಿಧಿ ಕುಂಭ ಸಮರ್ಪಣೆ ಹಾಗೂ ಷಡಾಧಾರ ಮುಹೂರ್ತ

Suddi Udaya

ನೆರಿಯ ಆಲಂಗಾಯಿಗೆ ರೂ.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಾಲ್ಮೀಕಿ ಆಶ್ರಮ ಶಾಲೆಗೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ: ಸುಮಾರು ರೂ.28800 ನಗದು ಕಳೆದು ಹೋಗಿದ್ದು:ಸಿಕ್ಕಿದವರು ಸುದ್ದಿ ಉದಯ ಕಚೇರಿಗೆ ತಲುಪಿಸುವಂತೆ ಮನವಿ

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲೋತ್ಸವ, ಕಾರ್ಯಲಯ ಉದ್ಘಾಟನೆ

Suddi Udaya
error: Content is protected !!