July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ಮಹಾ ಶಿವರಾತ್ರಿ ಉತ್ಸವ ಆಚರಣೆ

ಇಂದಬೆಟ್ಟು: ಬಂಗಾಡಿ ಸೀಮೆಯ ಇತಿಹಾಸ ಪ್ರಸಿದ್ಧ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಉತ್ಸವವು ಫೆ.15 ರಂದು ದೇವಸ್ಥಾನದ ಪ್ರಧಾನ ಅರ್ಚಕ ಆನಂದ ಭಟ್ ರವರು ದೀಪ ಪ್ರಜ್ವಲಿಸಿ ಮಾರ್ಗದರ್ಶಕರಾದ ಡಾ| ಪ್ರದೀಪ್ ಎ ರವರು ಶಿವ ಸಹಸ್ರನಾಮವನ್ನು ಭಕ್ತಾದಿಗಳು ಪಠಿಸಿದರು.

ಯಾಮದ ಪೂಜೆಯೊಂದಿಗೆ ಉತ್ಸವವು ಆರಂಭವಾಗಿ ಶ್ರೀ ಅರ್ಧನಾರೀಶ್ವರ ಸ್ವಾಮಿಗೆ ಒಟ್ಟು 9 ಯಾಮದ ಪೂಜೆ, ರುದ್ರ ಪಠಣ ದೊಂದಿಗೆ ಶತರುದ್ರಾಭಿಷೇಕ, ಮಧ್ಯಾಹ್ನ ಪ್ರಸಾದ ಭೋಜನ, ಸಂಜೆ ಇಂದಬೆಟ್ಟು, ನಾವೂರು, ನಡ ಕನ್ಯಾಡಿ, ಮಿತ್ತಬಾಗಿಲು, ಮಲವಂತಿಗೆ, ಕಡಿರುದ್ಯಾವರ ಗ್ರಾಮದಿಂದ ಹಾಗೂ ತಾಲೂಕಿನ ವಿವಿಧ ಭಾಗದ ಭಕ್ತರಿಂದ ಶಿವನಾಮ ಸಂಕೀರ್ತನೆಯೊಂದಿಗೆ ಕ್ಷೇತ್ರಕ್ಕೆ ಪಾದಯಾತ್ರೆ, ವಿವಿಧ ಭಜನಾ ತಂಡಗಳಿಂದ ಭಕ್ತಿ ಗಾಯನ ಕಮ್ಮಟ ಭಜನೆ, ರಂಗಪೂಜೆ, ಉಪಹಾರ ಹಾಗೂ ಭಕ್ತರಿಂದ ಪ್ರಾತಃ ಕಾಲದ ಯಾಮದ ಪೂಜೆ ವರೆಗೆ ಜಾಗರಣೆ ನಡೆದು ಸಾವಿರಾರು ಭಕ್ತಾದಿಗಳ ಪಾಲ್ಗೊಳ್ಳುವಿಕೆಯಿಂದ ವಿಜೃಂಭಣೆಯಿಂದ ನಡೆದು ಮಹಾ ಶಿವರಾತ್ರಿ ಉತ್ಸವವು ಸಂಪನ್ನಗೊಂಡಿತು.

ಕಾರ್ಯಕ್ರಮದಲ್ಲಿ ಕಮ್ಮಟ ಭಜನೆ ದೀಪ ಪ್ರಜ್ವಲನೆಯನ್ನು ಗ್ರಾಮದ ಹಿರಿಯರು ಕರ್ನಾಟಕ ಸರ್ಕಾರದ ಮಾಜಿ ಸಚಿವ ಕೆ. ಗಂಗಾಧರ ಗೌಡ ನೆರವೇರಿಸಿದರು., ಎಂ.ಎಲ್.ಸಿ ಪ್ರತಾಪ್ ಸಿಂಹ ನಾಯಕ್ ದಂಪತಿಗಳು, ಮಾರ್ಗದರ್ಶಕರಾದ ಡಾ| ಪ್ರದೀಪ್ ಎ ರವರು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್. ಲಕ್ಷ್ಮಣ ಗೌಡ, ಸಮಿತಿಯ ಪದಾಧಿಕಾರಿಗಳು, ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಇಂದಬೆಟ್ಟು ಗುತ್ತುವಿನ ಅಜಿತ್ ಕುಮಾರ್ ಜೈನ್, ಊರಿನ ಗಣ್ಯರು, ಹಿರಿಯರು ಕಿರಿಯರು ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಶ್ರೀ ಅರ್ಧನಾರೀಶ್ವರ ಸ್ವಾಮಿಯ ಅನುಗ್ರಹಕ್ಕೆ ಪಾತ್ರರಾದರು.

Related posts

ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಂದಾರು ಗ್ರಾಮ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಹಬ್ಬ ಆಚರಣೆ

Suddi Udaya

ಇಂದಿನಿಂದ ಬೆಳ್ತಂಗಡಿಯಲ್ಲಿ ಭಾರಿ ರಿಯಾಯಿತಿಯಲ್ಲಿ ಬಟ್ಟೆಗಳ ಮಾರಾಟ

Suddi Udaya

ಪುರಿಯ ಹಾಲಿನ ಸೊಸೈಟಿ ನೂತನ ಕಟ್ಟಡದ ಅನುದಾನಕ್ಕಾಗಿ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ಶೇ.98.31 ಫಲಿತಾಂಶ

Suddi Udaya
error: Content is protected !!