25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ ನವೋದಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದಿಂದ ಉಚಿತ ಸಾಮೂಹಿಕ ಉಪನಯನ

ಅಂಡಿಂಜೆ ನವೋದಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಇದರ 28ನೇ ವರ್ಷದ ” ವಿಶ್ವಕರ್ಮ ಪೂಜೆ “ಯ ಸಂದರ್ಭ “ಉಚಿತ ಸಾಮೂಹಿಕ ಉಪನಯನ” ಕಾರ್ಯಕ್ರಮ ನಡೆಯಿತು.

ಶ್ರೀ ವೇಣೂರು ಪ್ರಕಾಶ ಪುರೋಹಿತರ ನೇತೃತ್ವ ,ಶ್ರೀ ವೇಲಾಪುರಿ ವಿಶ್ವನಾಥ ಶರ್ಮರ ಆಚಾರ್ಯತ್ವ ವಹಿಸಿದ್ದರು.
ಬಳಿಕ ಸಂಘದ ಅಧ್ಯಕ್ಷ ಪ್ರಭಾಕರ ಆಚಾರ್ಯರ ಅಧ್ಯಕ್ಷತೆಯಲ್ಲಿ ಸಭಾಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಮುಖ್ಯ ಅತಿಥಿಗಳಾಗಿ ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶಿಲ್ಪಿ ರಾಮಚಂದ್ರ ಆಚಾರ್ಯ ಅತ್ತೂರು , ಜಿ.ಟಿ.ಆಚಾರ್ಯ ಮುಂಬೈ ,ಮೂಡಬಿದ್ರೆ ಗುರುಮಠ ಕಾಳಿಕಾಂಬಾ ದೇವಳದ ಆಡಳಿತ ಮೊಕ್ತೇಸರ ಎಂ.ಕೆ.ಬಾಲಕೃಷ್ಣ ಆಚಾರ್ಯ ಉಳಿಯ, ಉಜಿರೆಯ ಸ್ವರ್ಣೋಧ್ಯಮಿ ಆನಂದ ಆಚಾರ್ಯರು ಆಗಮಿಸಿದ್ದರು. ಕೂಡುವಳಿಕೆ ಗ್ರಾಮ ಮೊಕ್ತೇಸರ ರಾಧಾಕೃಷ್ಣ ಆಚಾರ್ಯ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಸಂಘದ ಸದಸ್ಯರ ಉತ್ತಮ ಅಂಕ ಗಳಿಕ ವಿದ್ಯಾರ್ಥಿಗಳನ್ನು ಮತ್ತು ಉಪನಯದ ವಟುಗಳಿಗೆ ಬೇಕಾಗಿರುವ ಸಾಹಿತ್ಯವನ್ನು ಸಂಪೂರ್ಣವಾಗಿ ಒದಗಿಸಿದ ನವೀನ ಆಚಾರ್ಯ, ಪಿಲಿಯೂರು ಇವರನ್ನು ಗೌರವಿಸಲಾಯಿತು.
ಡಿ.ಭಾಸ್ಕರ ಆಚಾರ್ಯರು ಪ್ರಾಸ್ತಾವನೆಯೊಂದಿಗೆ ಸ್ವಾಗತಿಸಿ , ಸೌಮ್ಯಾ ರಾಧಾಕೃಷ್ಣ ವಂದಿಸಿದರು.
ಕು.ಸಾನಿಧ್ಯ ಬಿ.ಕೆ.ಆಚಾರ್ಯ ನಿರೂಪಿಸಿದರು.

Related posts

ಸೌತಡ್ಕ ಬಯಲು ಗಣಪತಿ ದೇವಸ್ಥಾನಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಕಾಲು ಸೇತುವೆ ಬಿರುಕು ಸಂಪರ್ಕ ಕಡಿತ ಭೀತಿ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಹೊಳೆಯಲ್ಲಿ ಮೀನುಗಳು ಸಾವು

Suddi Udaya

ಧರ್ಮಸ್ಥಳ : ಆಟೋ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಅಂತರ್ ಕಾಲೇಜು ಪ.ಪೂ. ವಿದ್ಯಾರ್ಥಿಗಳ “ಯುನಿಟಸ್ 2023” : ಪ್ರಸನ್ನ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಲಿಯೋ ಕ್ಲಬ್ ಬೆಳ್ತಂಗಡಿ “ಧ್ವನಿ” ವಾಯ್ಸ್ ಆಫ್ ಸರ್ವಿಸ್ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ

Suddi Udaya
error: Content is protected !!