September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ ನವೋದಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದಿಂದ ಉಚಿತ ಸಾಮೂಹಿಕ ಉಪನಯನ

ಅಂಡಿಂಜೆ ನವೋದಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಇದರ 28ನೇ ವರ್ಷದ ” ವಿಶ್ವಕರ್ಮ ಪೂಜೆ “ಯ ಸಂದರ್ಭ “ಉಚಿತ ಸಾಮೂಹಿಕ ಉಪನಯನ” ಕಾರ್ಯಕ್ರಮ ನಡೆಯಿತು.

ಶ್ರೀ ವೇಣೂರು ಪ್ರಕಾಶ ಪುರೋಹಿತರ ನೇತೃತ್ವ ,ಶ್ರೀ ವೇಲಾಪುರಿ ವಿಶ್ವನಾಥ ಶರ್ಮರ ಆಚಾರ್ಯತ್ವ ವಹಿಸಿದ್ದರು.
ಬಳಿಕ ಸಂಘದ ಅಧ್ಯಕ್ಷ ಪ್ರಭಾಕರ ಆಚಾರ್ಯರ ಅಧ್ಯಕ್ಷತೆಯಲ್ಲಿ ಸಭಾಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಮುಖ್ಯ ಅತಿಥಿಗಳಾಗಿ ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶಿಲ್ಪಿ ರಾಮಚಂದ್ರ ಆಚಾರ್ಯ ಅತ್ತೂರು , ಜಿ.ಟಿ.ಆಚಾರ್ಯ ಮುಂಬೈ ,ಮೂಡಬಿದ್ರೆ ಗುರುಮಠ ಕಾಳಿಕಾಂಬಾ ದೇವಳದ ಆಡಳಿತ ಮೊಕ್ತೇಸರ ಎಂ.ಕೆ.ಬಾಲಕೃಷ್ಣ ಆಚಾರ್ಯ ಉಳಿಯ, ಉಜಿರೆಯ ಸ್ವರ್ಣೋಧ್ಯಮಿ ಆನಂದ ಆಚಾರ್ಯರು ಆಗಮಿಸಿದ್ದರು. ಕೂಡುವಳಿಕೆ ಗ್ರಾಮ ಮೊಕ್ತೇಸರ ರಾಧಾಕೃಷ್ಣ ಆಚಾರ್ಯ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಸಂಘದ ಸದಸ್ಯರ ಉತ್ತಮ ಅಂಕ ಗಳಿಕ ವಿದ್ಯಾರ್ಥಿಗಳನ್ನು ಮತ್ತು ಉಪನಯದ ವಟುಗಳಿಗೆ ಬೇಕಾಗಿರುವ ಸಾಹಿತ್ಯವನ್ನು ಸಂಪೂರ್ಣವಾಗಿ ಒದಗಿಸಿದ ನವೀನ ಆಚಾರ್ಯ, ಪಿಲಿಯೂರು ಇವರನ್ನು ಗೌರವಿಸಲಾಯಿತು.
ಡಿ.ಭಾಸ್ಕರ ಆಚಾರ್ಯರು ಪ್ರಾಸ್ತಾವನೆಯೊಂದಿಗೆ ಸ್ವಾಗತಿಸಿ , ಸೌಮ್ಯಾ ರಾಧಾಕೃಷ್ಣ ವಂದಿಸಿದರು.
ಕು.ಸಾನಿಧ್ಯ ಬಿ.ಕೆ.ಆಚಾರ್ಯ ನಿರೂಪಿಸಿದರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ : ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾವಣೆ

Suddi Udaya

ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯ ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಸ್ಥಾನ

Suddi Udaya

ಮರಿಯಾಂಬಿಕ ಆಂ.ಮಾ.ಪ್ರೌ. ಶಾಲೆ ಶೈಕ್ಷಣಿಕ ವರ್ಷ ಉದ್ಘಾಟನೆ ಹಾಗೂ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ಕೆಲ್ಲಗುತ್ತು ಶ್ರೀ ಸತ್ಯಸಾರಮುಪ್ಪಣ್ಯ ಮತ್ತು ಸ್ವಾಮಿ ಕೊರಗಜ್ಜ ದೈವದ ವಾರ್ಷಿಕ ನೇಮೋತ್ಸವ

Suddi Udaya
error: Content is protected !!