September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಂತೋಷ್ ಕಡಬ ಬೆಂಗಳೂರು ಪೊಲೀಸ್ ವಶಕ್ಕೆ

ಕಡಬ : ಕೋರ್ಟ್ ಆದೇಶ ಉಲ್ಲಂಘನೆ ಪ್ರಕರಣ ಸಂಬಂಧ 30 ದಿನಗಳ ಕಾಲ ಜೈಲು ಶಿಕ್ಷೆ ವಿಧಿಸಿದ ಹಿನ್ನಲೆಯಲ್ಲಿ ಬೆಂಗಳೂರು ಪೊಲೀಸರು ಸಂಚಾರಿ ಸ್ಟುಡಿಯೋ ಯೂಟ್ಯೂಬರ್ ಸಂತೋಷ್ ಕಡಬ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಪದೆ ಪದೆ ಸಂಚಾರಿ ಸ್ಟುಡಿಯೋ ಯೂಟ್ಯೂಬ್ ಮೂಲಕ ಅವಹೇಳನಕಾರಿಯಾಗಿ ವಿಡಿಯೋ ಮಾಡಿ ಪ್ರಸಾರ ಮಾಡಿದ ಪ್ರಕರಣ ಸಂಬಂಧ ನೋಟಿಸ್ ಜಾರಿಯಾಗಿದ್ದರು ಕೂಡ ಮತ್ತೆ ವಿಡಿಯೋ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ 30 ದಿನಗಳ ಕಾಲ ಜೈಲು ಶಿಕ್ಷೆ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಕೋರ್ಟ್ ಸಿಬ್ಬಂದಿ ಜೊತೆಯಲ್ಲಿ ಬೆಂಗಳೂರು ಪೊಲೀಸರು ಫೆ‌.18 ರಂದು ಕಡಬಕ್ಕೆ ಆಗಮಿಸಿ ಸಂತೋಷ್ ನನ್ನು ಆತನ ಶಾಪ್ ನಿಂದ ವಶಕ್ಕೆ ಪಡೆದುಕೊಂಡು ಹೋಗಿದ್ದಾರೆ.

ಸಂಜೆ ವೇಳೆಗೆ ಬೆಂಗಳೂರು ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿ 30 ದಿನಗಳ ಕಾಲ ಜೈಲಿಗೆ ಕಳುಹಿಸಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ವಕೀಲರಾದ ರಾಜಶೇಖರ್ ಹಿಲಿಯಾರು ವಾದ ಮಂಡಿಸಿದ್ದರು.

Related posts

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Suddi Udaya

ಮೂಡುಕೋಡಿ: ಒಕ್ಕೂಟದ ಪದಗ್ರಹಣ ಸಮಾರಂಭ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಪಾಲಡ್ಕ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಧರ್ಣಪ್ಪ ಕುಲಾಲ್, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ದಿ.ಕೆ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ ಆಚರಣೆ

Suddi Udaya

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

Suddi Udaya

ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣ : ಬಿಂಬವನ್ನು ತರುವಲ್ಲಿ ಸಹಕರಿಸಿದವರಿಗೆ ಅಭಿನಂದನೆ

Suddi Udaya
error: Content is protected !!